AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ

ತನ್ನ ತಂದೆಯನ್ನೇ ಕೊಲ್ಲಲು ಶೂಟರ್​ಗಳನ್ನು ನೇಮಿಸಿದ್ದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಈ ಪ್ರಕರಣದ ತನಿಖೆ ನಡೆಯುವಾಗ ಈ ವಿಚಾರ ಬೆಳಕಿಗೆ ಬಂದಿದೆ.

ತಂದೆಯನ್ನು ಕೊಲ್ಲಲು ಮೂವರು ಶೂಟರ್​ಗಳನ್ನು ನೇಮಿಸಿದ್ದ ಬಾಲಕನ ಬಂಧನ
ನಯನಾ ರಾಜೀವ್
|

Updated on: Mar 24, 2024 | 8:46 AM

Share

ತಂದೆಯನ್ನು ಕೊಲ್ಲಲು ಮೂವರು ಶೂಟರ್‌ಗಳನ್ನು ನೇಮಿಸಿದ್ದ 16 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಪ್ರತಾಪ್​ಗಢದ ಪಟ್ಟಿ ಪ್ರದೇಶದಲ್ಲಿ ಉದ್ಯಮಿ ಮೊಹಮ್ಮದ್ ನಯೀಮ್ (50) ಅವರನ್ನು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಮೂವರು ದಾಳಿಕೋರರಾದ ​​ಪಿಯೂಷ್ ಪಾಲ್, ಶುಭಂ ಸೋನಿ ಮತ್ತು ಪ್ರಿಯಾಂಶು ಅವರನ್ನು ಬಂಧಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದುರ್ಗೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯಕ್ಕೆ ನಯೀಮ್‌ನ ಮಗನಿಂದ ಹಣ ಪಡೆದಿದ್ದಾಗಿ ಲೀಸರಿಗೆ ಮಾಹಿತಿ ನೀಡಿದ್ದಾರೆ.

ಶೂಟರ್​ಗಳಿಗೆ ತನ್ನ ತಂದೆಯನ್ನು ಹತ್ಯೆ ಮಾಡುವಂತೆ ಸುಪಾರಿ ನೀಡಿದ್ದ, ಆರು ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದು, ತನ್ನ ತಂದೆಯನ್ನು ಕೊಂದ ಬಳಿಕ ಉಳಿದ ಮೊತ್ತವನ್ನು ನೀಡುವುದಾಗಿ ಮುಂಗಡವಾಗಿ 1.5 ಲಕ್ಷ ನೀಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಭಯೋತ್ಪಾದಕ ಸಂಘಟನೆಗೆ ಸೇರುವ ಇಚ್ಛೆ ವ್ಯಕ್ತಪಡಿಸಿದ ಐಐಟಿ ಗುವಾಹಟಿ ವಿದ್ಯಾರ್ಥಿಯ ಬಂಧನ

ಪೊಲೀಸರ ಪ್ರಕಾರ, ತಂದೆ ಹೆಚ್ಚಿನ ಪಾಕೆಟ್​ ಮನಿ ನೀಡದ ಕಾರಣ ಕೋಪಗೊಂಡು ಹತ್ಯೆ ಮಾಡಿದ್ದಾಗಿ ತಿಳಿಸಿದ್ದಾನೆ. ಆ ಬಾಲಕ ತನ್ನ ಆಸೆಗಳನ್ನು ಪೂರೈಸಿಕೊಳ್ಳಲು ಆಗಾಗ ಅಂಗಡಿಯಿಂದ ಹಣ ಅಥವಾ ಮನೆಯಿಂದ ಚಿನ್ನಾಭರಣ ಕದಿಯುತ್ತಿದ್ದ, ಈ ಮೊದಲು ತನ್ನ ತಂದೆಯನ್ನು ಕೊಲ್ಲಲು ಪ್ಲ್ಯಾನ್ ಮಾಡಿ ವಿಫಲನಾಗಿದ್ದ. ಪೊಲೀಸರು ಬಂಧಿತ ಶೂಟರ್‌ಗಳನ್ನು ಜೈಲಿಗೆ ಕಳುಹಿಸಿದ್ದು, ಅಪ್ರಾಪ್ತ ವಯಸ್ಕನನ್ನು ಬಾಲಾಪರಾಧಿಗೃಹಕ್ಕೆ ಕಳುಹಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ