Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದುವೆಗೂ ಮುನ್ನ ಭಾವಿ ಅಳಿಯನ ಜತೆ ಪರಾರಿಯಾದ ಅತ್ತೆ

ಮಗಳ ಮದುವೆ ಕೇವಲ ಆರು ದಿನಗಳಿರುವಾಗ ಮಹಿಳೆಯೊಬ್ಬಳು ಭಾವಿ ಅಳಿಯನ ಜತೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ ಹೋಗಲು ನಿರ್ಧರಿಸಿತ್ತು. ಓಡಿಹೋಗುವ ಮೊದಲು, ಮಹಿಳೆ ತನ್ನ ಮಗಳ ಮದುವೆಗಾಗಿ ಮಾಡಿದ್ದ ಆಭರಣ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ, ಕುಟುಂಬವು ಪೊಲೀಸ್​ ಠಾಣೆ ಮೆಟ್ಟಿಲು ಹತ್ತಿದೆ. ಆ ಮಹಿಳೆಯೇ ಮಗಳಿಗೆ ಆತನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದಳು, ಹುಡುಗನನ್ನು ಆಕೆಯೇ ಹುಡುಕಿದ್ದಳು.

ಮಗಳ ಮದುವೆಗೂ ಮುನ್ನ ಭಾವಿ ಅಳಿಯನ ಜತೆ ಪರಾರಿಯಾದ ಅತ್ತೆ
ಮದುವೆ Image Credit source: 1to1 Help
Follow us
ನಯನಾ ರಾಜೀವ್
|

Updated on: Apr 09, 2025 | 7:48 AM

ಅಲಿಗಢ, ಏಪ್ರಿಲ್ 09: ಮಗಳ ಮದುವೆ(Marriage)ಗೂ ಮುನ್ನ ಆಭರಣಗಳನ್ನು ದೋಚಿಕೊಂಡು ಭಾವಿ ಅಳಿಯನ ಜತೆ ಅತ್ತೆ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶ ಅಲಿಗಢದಲ್ಲಿ ನಡೆದಿದೆ. ಮಗಳ ಮದುವೆಗೆ ಕೇವಲ 9 ದಿನಗಳಿತ್ತು, ನಿಶ್ಚಿತಾರ್ಥವೂ ನಡೆದುಹೋಗಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿರುವ ಆಭರಣಗಳನ್ನೆತ್ತಿಕೊಂಡು ಮಹಿಳೆ ಪರಾರಿಯಾಗಿದ್ದಾಳೆ.

ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ ಹೋಗಲು ನಿರ್ಧರಿಸಿತ್ತು. ಓಡಿಹೋಗುವ ಮೊದಲು, ಮಹಿಳೆ ತನ್ನ ಮಗಳ ಮದುವೆಗಾಗಿ ಮಾಡಿದ್ದ ಆಭರಣ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ, ಕುಟುಂಬವು ಪೊಲೀಸ್​ ಠಾಣೆ ಮೆಟ್ಟಿಲು ಹತ್ತಿದೆ.

ಆ ಮಹಿಳೆಯೇ ಮಗಳಿಗೆ ಆತನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದಳು, ಹುಡುಗನನ್ನು ಆಕೆಯೇ ಹುಡುಕಿದ್ದಳು. ಮದುವೆಯ ಸಿದ್ಧತೆಗಳ ನೆಪದಲ್ಲಿ ವರನು ಆಗಾಗ್ಗೆ ಅವರ ಮನೆಗೆ ಭೇಟಿ ನೀಡುತ್ತಿದ್ದ. ಕುಟುಂಬಕ್ಕೆ ತಿಳಿಯದಂತೆ, ಅಳಿಯ ಮತ್ತು ಅತ್ತೆಯ ನಡುವೆ ಸಂಬಂಧ ಬೆಳೆಯುತ್ತಿತ್ತು. ವರನು ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದ, ಅದನ್ನುಯಾರೂ ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.

ಇದನ್ನೂ ಓದಿ
Image
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮ ವಿವಾಹ!
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಏಪ್ರಿಲ್ 16 ರಂದು ಮದುವೆ ನಿಗದಿಯಾಗಿತ್ತು, ಮತ್ತು ಆಮಂತ್ರಣ ಪತ್ರಿಕೆಗಳನ್ನು ವಿತರಿಸಲಾಗಿತ್ತು. ಆದರೆ, ವರ ಮತ್ತು ಅತ್ತೆ ಶಾಪಿಂಗ್ ನೆಪದಲ್ಲಿ ಒಟ್ಟಿಗೆ ಮನೆಯಿಂದ ಹೊರಟುಹೋದವರು ಹಿಂದಿರುಗಿ ಬರಲಿಲ್ಲ. ಎಲ್ಲಿದ್ದಾರೆ ಎಂಬುದೂ ಯಾರಿಗೂ ತಿಳಿದಿಲ್ಲ.

ಮತ್ತಷ್ಟು ಓದಿ: ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು

ಹುಡುಗಿಯ ತಂದೆಗೆ ಅನುಮಾನ ಬಂದಾಗ, ಅವರು ಬೀರು ಪರಿಶೀಲಿಸಿದಾಗ ಮದುವೆಯ ಆಭರಣಗಳು ಮತ್ತು ನಗದು ಕಾಣೆಯಾಗಿರುವುದು ಕಂಡುಬಂದಿದೆ, ಇದು ಅವರ ಭಯ ಮತ್ತಷ್ಟು ಗಾಢವಾಗಿತ್ತು, ಪೊಲೀಸರು ಈಗ ಇಬ್ಬರನ್ನು ಹುಡುಕುತ್ತಿದ್ದಾರೆ ಮತ್ತು ಅವರ ಮೊಬೈಲ್​ ಲೊಕೇಷನ್ ಆಧರಿಸಿ ಸ್ಥಳಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಭಯೋತ್ಪಾದಕರ ದಾಳಿ ಪಾಕಿಸ್ತಾನದ ಹತಾಷೆಯ ಪ್ರತೀಕ: ಬಸನಗೌಡ ಯತ್ನಾಳ್
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಪಹಲ್ಗಾಮ್​ ಉಗ್ರರ ದಾಳಿ: ಗುಪ್ತಚರ ಇಲಾಖೆ ವೈಫಲ್ಯ ಎಂದ ಸಿದ್ದರಾಮಯ್ಯ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ಕುರಿ ಮೇಯಿಸುತ್ತಿರುವಾಗಲೇ ಬಂತು UPSC ಫಲಿತಾಂಶ: ಕುರಿ ಹೊತ್ತು ಕುಣಿದ ಯುವಕ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ವಯಸ್ಸಾದವರು ಅಪಾಯದಿಂದ ಪಾರಾಗಲು ಬಹಳ ಕಷ್ಟಪಟ್ಟರು: ದೊಡ್ಡಬಸಯ್ಯ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಪ್ರವಾಸಿಗರ ಮೇಲೆ ಉಗ್ರರು ದಾಳಿ ನಡೆಸಿದ್ದ ಪಹಲ್ಗಾಮ್​ಗೆ ಅಮಿತ್​ ಶಾ ಭೇಟಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಉಗ್ರರ ಮನಸ್ಥಿತಿ, ಉದ್ದೇಶ ಏನಾಗಿತ್ತು ಅಂತ ಈಗಲೇ ಹೇಳಲಾಗದು: ಜಾರಕಿಹೊಳಿ
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಹೆಂಡತಿ, ಮಕ್ಕಳೊಂದಿಗೆ ಮಧುಸೂದನ್ ಭಾನುವಾರ ಕಾಶ್ಮೀರ ಪ್ರವಾಸ ತೆರಳಿದ್ದರು
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಉಗ್ರರು ಹಿಂದೂಗಳನ್ನೇ ಹುಡುಕಿ ದಾಳಿ ಮಾಡಿದ್ದು ಆಘಾತಕಾರಿ ಎಂದ ಪರಮೇಶ್ವರ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
ಫಾರ್ಮ್​ಹೌಸ್​ನಲ್ಲಿ ಎತ್ತಿನಗಾಡಿ ಓಡಿಸಿದ ನಟ ದರ್ಶನ್; ದಾಸನ ಜಾಲಿ ಮೂಡ್
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ
VIDEO: ಝಹೀರ್ ಖಾನ್ - ರಿಷಭ್ ಪಂತ್ ನಡುವೆ ಮಾತಿನ ಚಕಮಕಿ