AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಮದುವೆಗೂ ಮುನ್ನ ಭಾವಿ ಅಳಿಯನ ಜತೆ ಪರಾರಿಯಾದ ಅತ್ತೆ

ಮಗಳ ಮದುವೆ ಕೇವಲ ಆರು ದಿನಗಳಿರುವಾಗ ಮಹಿಳೆಯೊಬ್ಬಳು ಭಾವಿ ಅಳಿಯನ ಜತೆ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ ಹೋಗಲು ನಿರ್ಧರಿಸಿತ್ತು. ಓಡಿಹೋಗುವ ಮೊದಲು, ಮಹಿಳೆ ತನ್ನ ಮಗಳ ಮದುವೆಗಾಗಿ ಮಾಡಿದ್ದ ಆಭರಣ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ, ಕುಟುಂಬವು ಪೊಲೀಸ್​ ಠಾಣೆ ಮೆಟ್ಟಿಲು ಹತ್ತಿದೆ. ಆ ಮಹಿಳೆಯೇ ಮಗಳಿಗೆ ಆತನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದಳು, ಹುಡುಗನನ್ನು ಆಕೆಯೇ ಹುಡುಕಿದ್ದಳು.

ಮಗಳ ಮದುವೆಗೂ ಮುನ್ನ ಭಾವಿ ಅಳಿಯನ ಜತೆ ಪರಾರಿಯಾದ ಅತ್ತೆ
ಮದುವೆ Image Credit source: 1to1 Help
ನಯನಾ ರಾಜೀವ್
|

Updated on: Apr 09, 2025 | 7:48 AM

Share

ಅಲಿಗಢ, ಏಪ್ರಿಲ್ 09: ಮಗಳ ಮದುವೆ(Marriage)ಗೂ ಮುನ್ನ ಆಭರಣಗಳನ್ನು ದೋಚಿಕೊಂಡು ಭಾವಿ ಅಳಿಯನ ಜತೆ ಅತ್ತೆ ಪರಾರಿಯಾಗಿರುವ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶ ಅಲಿಗಢದಲ್ಲಿ ನಡೆದಿದೆ. ಮಗಳ ಮದುವೆಗೆ ಕೇವಲ 9 ದಿನಗಳಿತ್ತು, ನಿಶ್ಚಿತಾರ್ಥವೂ ನಡೆದುಹೋಗಿತ್ತು. ಈ ಸಂದರ್ಭದಲ್ಲಿ ಮನೆಯಲ್ಲಿರುವ ಆಭರಣಗಳನ್ನೆತ್ತಿಕೊಂಡು ಮಹಿಳೆ ಪರಾರಿಯಾಗಿದ್ದಾಳೆ.

ಭಾವಿ ಅಳಿಯ ಅತ್ತೆಯನ್ನು ಪ್ರೀತಿಸುತ್ತಿದ್ದ, ಮತ್ತು ಆ ಜೋಡಿ ಓಡಿ ಹೋಗಲು ನಿರ್ಧರಿಸಿತ್ತು. ಓಡಿಹೋಗುವ ಮೊದಲು, ಮಹಿಳೆ ತನ್ನ ಮಗಳ ಮದುವೆಗಾಗಿ ಮಾಡಿದ್ದ ಆಭರಣ ಹಾಗೂ ಹಣವನ್ನು ತೆಗೆದುಕೊಂಡು ಹೋಗಿದ್ದಾಳೆ, ಕುಟುಂಬವು ಪೊಲೀಸ್​ ಠಾಣೆ ಮೆಟ್ಟಿಲು ಹತ್ತಿದೆ.

ಆ ಮಹಿಳೆಯೇ ಮಗಳಿಗೆ ಆತನೊಂದಿಗೆ ನಿಶ್ಚಿತಾರ್ಥ ನೆರವೇರಿಸಿದ್ದಳು, ಹುಡುಗನನ್ನು ಆಕೆಯೇ ಹುಡುಕಿದ್ದಳು. ಮದುವೆಯ ಸಿದ್ಧತೆಗಳ ನೆಪದಲ್ಲಿ ವರನು ಆಗಾಗ್ಗೆ ಅವರ ಮನೆಗೆ ಭೇಟಿ ನೀಡುತ್ತಿದ್ದ. ಕುಟುಂಬಕ್ಕೆ ತಿಳಿಯದಂತೆ, ಅಳಿಯ ಮತ್ತು ಅತ್ತೆಯ ನಡುವೆ ಸಂಬಂಧ ಬೆಳೆಯುತ್ತಿತ್ತು. ವರನು ತನ್ನ ಭಾವಿ ಅತ್ತೆಗೆ ಮೊಬೈಲ್ ಫೋನ್ ಅನ್ನು ಉಡುಗೊರೆಯಾಗಿ ನೀಡಿದ್ದ, ಅದನ್ನುಯಾರೂ ಅಷ್ಟು ಗಂಭೀರವಾಗಿ ತೆಗೆದುಕೊಂಡಿರಲಿಲ್ಲ.

ಇದನ್ನೂ ಓದಿ
Image
ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿ ಪ್ರೇಮ ವಿವಾಹ!
Image
ವರ್ಷದ ಈ ತಿಂಗಳಿನಲ್ಲಿ ಮದುವೆ ಮಾಡಿಕೊಳ್ಳಲ್ಲ… ಏಕೆ ಗೊತ್ತಾ?
Image
ತಮ್ಮ 25ನೇ ವಿವಾಹ ವಾರ್ಷಿಕೋತ್ಸವದಲ್ಲಿ ನೃತ್ಯ ಮಾಡುತ್ತಿರುವಾಗ ಹೃದಯಾಘಾತ
Image
ಅನ್ಯಕೋಮಿನವನೊಂದಿಗೆ ಹಿಂದೂ ಯುವತಿ ಮದುವೆ: ವಿವಾಹ ಮಾಡಿಸಿದ್ದವನಿಗೆ ಬೆದರಿಕೆ

ಏಪ್ರಿಲ್ 16 ರಂದು ಮದುವೆ ನಿಗದಿಯಾಗಿತ್ತು, ಮತ್ತು ಆಮಂತ್ರಣ ಪತ್ರಿಕೆಗಳನ್ನು ವಿತರಿಸಲಾಗಿತ್ತು. ಆದರೆ, ವರ ಮತ್ತು ಅತ್ತೆ ಶಾಪಿಂಗ್ ನೆಪದಲ್ಲಿ ಒಟ್ಟಿಗೆ ಮನೆಯಿಂದ ಹೊರಟುಹೋದವರು ಹಿಂದಿರುಗಿ ಬರಲಿಲ್ಲ. ಎಲ್ಲಿದ್ದಾರೆ ಎಂಬುದೂ ಯಾರಿಗೂ ತಿಳಿದಿಲ್ಲ.

ಮತ್ತಷ್ಟು ಓದಿ: ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು

ಹುಡುಗಿಯ ತಂದೆಗೆ ಅನುಮಾನ ಬಂದಾಗ, ಅವರು ಬೀರು ಪರಿಶೀಲಿಸಿದಾಗ ಮದುವೆಯ ಆಭರಣಗಳು ಮತ್ತು ನಗದು ಕಾಣೆಯಾಗಿರುವುದು ಕಂಡುಬಂದಿದೆ, ಇದು ಅವರ ಭಯ ಮತ್ತಷ್ಟು ಗಾಢವಾಗಿತ್ತು, ಪೊಲೀಸರು ಈಗ ಇಬ್ಬರನ್ನು ಹುಡುಕುತ್ತಿದ್ದಾರೆ ಮತ್ತು ಅವರ ಮೊಬೈಲ್​ ಲೊಕೇಷನ್ ಆಧರಿಸಿ ಸ್ಥಳಗಳನ್ನು ಪರಿಶೀಲಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ