AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರ ಸ್ವರೂಪ ಪಡೆದ ಪೌರತ್ವ ವಿರೋಧಿ ಪ್ರತಿಭಟನೆ, ಉತ್ತರ ಪ್ರದೇಶದಲ್ಲಿ 6 ಮಂದಿ ಸಾವು

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗೋರಖ್​ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್​ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ […]

ಉಗ್ರ ಸ್ವರೂಪ ಪಡೆದ ಪೌರತ್ವ ವಿರೋಧಿ ಪ್ರತಿಭಟನೆ, ಉತ್ತರ ಪ್ರದೇಶದಲ್ಲಿ 6 ಮಂದಿ ಸಾವು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 20, 2019 | 8:17 PM

Share

ಲಖನೌ: ಪೌರತ್ವ ಕಾಯ್ದೆ ವಿರೋಧಿಸಿ ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಹಿಂಸಾಚಾರದಲ್ಲಿ 6 ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಾನ್ಪುರದಲ್ಲಿ ಪೊಲೀಸರು ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. 8 ಜನರಿಗೆ ಗುಂಡೇಟು ತಗುಲಿದ್ದು, ಎಂಟೂ ಜನರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಗೋರಖ್​ಪುರದಲ್ಲಿ ಪೊಲೀಸರು, ಪ್ರತಿಭಟನಾಕಾರರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ, ಬುಲಂದ್ ಶಹರ್​ನಲ್ಲಿ ಪೊಲೀಸ್ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ. ಒಟ್ಟಾರೆಯಾಗಿ ಉತ್ತರಪ್ರದೇಶದ 5ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಹಿಂಸಾಚಾರವಾಗಿದ್ದು, 15ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೆಹಲಿಯಲ್ಲಿ 4 ಮೆಟ್ರೋ ಸ್ಟೇಷನ್ ಬಂದ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಪ್ರತಿಭಟನೆ ಮುಂದುವರಿದಿದೆ. ಮುಂಜಾಗ್ರತಾ ಕ್ರಮವಾಗಿ ಜಾಮಾ ಮಸೀದಿ ಸುತ್ತಲಿನ 4 ಮೆಟ್ರೋ ಸ್ಟೇಷನ್​ಗಳನ್ನು ಬಂದ್ ಮಾಡಲಾಗಿದೆ. ದೆಹಲಿಯ ಚಾರ್ವಿ ಬಜಾರ್, ಲಾಲ್​ಕಿಲಾ, ಜಾಮಾ ಮಸೀದಿ ಮತ್ತು ದೆಹಲಿ ಗೇಟ್​ ಮೆಟ್ರೋ ಸ್ಟೇಷನ್​ಗಳನ್ನು ಮುಚ್ಚಲಾಗಿದೆ.

ಹೈದರಾಬಾದ್​ನಲ್ಲೂ ಪರಿಸ್ಥಿತಿ ಉದ್ವಿಗ್ನ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಆಂಧ್ರದಲ್ಲೂ ಪ್ರತಿಭಟನೆ ಜೋರಾಗಿದೆ. ಚಿತ್ತೂರು, ನೆಲ್ಲೂರು, ಕರ್ನೂಲ್, ಪೂರ್ವಗೋದಾವರಿ ಸೇರಿದಂತೆ ಹಲವೆಡೆ ಬೃಹತ್​ ಪ್ರತಿಭಟನೆಗಳು ನಡೆಯುತ್ತಿವೆ. ಹೈದರಾಬಾದ್​ನ ಚಾರ್ಮಿನಾರ್​ ಬಳಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದರು. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಅಹಿತಕರ ಘಟನೆ ನಡೆಯದಂತೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

Published On - 5:48 pm, Fri, 20 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು