AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಡ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಸೌಲಭ್ಯಗಳಿರುವ ಅಟಲ್ ವಸತಿ ಶಾಲೆ; ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ತರ ಯೋಜನೆ

ಅಟಲ್ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಪ್ರಕ್ರಿಯೆಯೂ ಬಹುತೇಕ ಪೂರ್ಣಗೊಂಡಿದೆ. ಇವುಗಳಲ್ಲಿ ಏಪ್ರಿಲ್ 5ಕ್ಕೆ ಪ್ರಾಂಶುಪಾಲರ ನೇಮಕಾತಿ ಪೂರ್ಣಗೊಂಡಿದ್ದು, ಜೂನ್ 22ಕ್ಕೆ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ.

ಬಡ ಮಕ್ಕಳ ಶಿಕ್ಷಣಕ್ಕಾಗಿ ಉತ್ತಮ ಸೌಲಭ್ಯಗಳಿರುವ ಅಟಲ್ ವಸತಿ ಶಾಲೆ; ಯೋಗಿ ಆದಿತ್ಯನಾಥ್ ಸರ್ಕಾರದ ಮಹತ್ತರ ಯೋಜನೆ
ಯೋಗಿ ಆದಿತ್ಯನಾಥ
Follow us
ರಶ್ಮಿ ಕಲ್ಲಕಟ್ಟ
|

Updated on: Aug 02, 2023 | 6:24 PM

ಲಕ್ನೋ ಆಗಸ್ಟ್ 2: ಉತ್ತರ ಪ್ರದೇಶ ಸರ್ಕಾರ(Uttar Pradesh) ಬಡವರು, ಅನಾಥರು ಮತ್ತು ಕಾರ್ಮಿಕರ ಭರವಸೆಯ ಮಕ್ಕಳಿಗೆ ಉತ್ತಮ ಸೌಲಭ್ಯಗಳೊಂದಿಗೆ ವಸತಿ ಶಾಲೆಗಳಲ್ಲಿ ಕಲಿಸುವ ಸಿದ್ಧತೆ ಮಾಡುತ್ತಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಅಟಲ್ ವಸತಿ ಶಾಲೆಗಳನ್ನು (Atal residential schools) ನಡೆಸಲು ಉದ್ದೇಶಿಸಿದ್ದು 16 ಜಿಲ್ಲೆಗಳಲ್ಲಿ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.ಇವುಗಳಲ್ಲಿ ಆಗಸ್ಟ್ ತಿಂಗಳ ಕೊನೆವರೆಗೆ 6ನೇ ತರಗತಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಉಳಿದ 2 ಶಾಲೆಗಳನ್ನು ಈ ವರ್ಷದ ಅಂತ್ಯದೊಳಗೆ ಕಾರ್ಯಗತಗೊಳಿಸಬಹುದು. 1189.88 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಈ 18 ವಸತಿ ಶಾಲೆಗಳಲ್ಲಿ ಎಲ್ಲ ಉನ್ನತ ಮಟ್ಟದ ಸೌಲಭ್ಯಗಳು ಲಭ್ಯವಾಗಲಿವೆ. ಈ ಶಾಲೆಗಳಲ್ಲಿ 6 ರಿಂದ 12 ನೇ ತರಗತಿಯವರಿಗೆ ಕಲಿಸಲಾಗುತ್ತದೆ.

ಅಟಲ್ ವಸತಿ ಶಾಲೆಗಳನ್ನು ಎಲ್ಲೆಲ್ಲಿ ನಿರ್ಮಿಸಲಾಗಿದೆ?

ಅಜಂಗಢ, ಬಸ್ತಿ, ಲಕ್ನೋ, ಅಯೋಧ್ಯೆ, ಬುಲಂದ್‌ಶಹರ್ (ಮೀರತ್), ಗೊಂಡಾ, ಗೋರಖ್‌ಪುರ, ಲಲಿತ್‌ಪುರ (ಝಾನ್ಸಿ), ಪ್ರಯಾಗ್‌ರಾಜ್, ಸೋನ್‌ಭದ್ರ (ಮಿರ್ಜಾಪುರ), ಮುಜಾಫರ್‌ನಗರ (ಸಹಾರನ್‌ಪುರ), ಬಂಡಾ, ಅಲಿಗಢ್, ಆಗ್ರಾ, ವಾರಣಾಸಿ, ಮೊರಾದ್‌ಬಾದ್‌ನಲ್ಲಿ ಅಟಲ್ ವಸತಿ ಶಾಲೆ ನಿರ್ಮಿಸಲಾಗುತ್ತದೆ

ನೇಮಕಾತಿ ಪ್ರಕ್ರಿಯೆ ಬಹುತೇಕ ಪೂರ್ಣ

ಅಟಲ್ ವಸತಿ ಶಾಲೆಗಳಿಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ ಪ್ರಕ್ರಿಯೆಯೂ ಬಹುತೇಕ ಪೂರ್ಣಗೊಂಡಿದೆ. ಇವುಗಳಲ್ಲಿ ಏಪ್ರಿಲ್ 5ಕ್ಕೆ ಪ್ರಾಂಶುಪಾಲರ ನೇಮಕಾತಿ ಪೂರ್ಣಗೊಂಡಿದ್ದು, ಜೂನ್ 22ಕ್ಕೆ ಆಡಳಿತಾಧಿಕಾರಿಗಳ ನೇಮಕ ಪ್ರಕ್ರಿಯೆ ಪೂರ್ಣಗೊಂಡಿದೆ. ಜೂನ್ 26ರಂದು ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನೊಂದೆಡೆ ಬೋಧಕೇತರ ಸಿಬ್ಬಂದಿಯ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದ್ದು, ಅಂತಿಮ ಹಂತದಲ್ಲಿದೆ. ಇದರೊಂದಿಗೆ, ಎಲ್ಲಾ ಶಾಲೆಗಳಿಗೆ ಪೀಠೋಪಕರಣಗಳು, ಮೆಸ್ ಸೇವೆ, ಅಧ್ಯಾಪಕರ ನಿರ್ವಹಣೆ, ಸಮವಸ್ತ್ರ ಮತ್ತು ಇತರ ಪರಿಕರಗಳ ಲಭ್ಯತೆಯನ್ನು ಸಹ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು. ಈ ಕಾಮಗಾರಿಯೂ ಅಂತಿಮ ಹಂತದಲ್ಲಿದೆ ಎಂದು ಟಿವಿ9 ಭಾರತ್ ವರ್ಷ್ ವರದಿ ಮಾಡಿದೆ.

ಇದನ್ನೂ ಓದಿ: ತಮಿಳುನಾಡು: ದಿ ಎಲಿಫೆಂಟ್ ವಿಸ್ಪರರ್ಸ್ ಖ್ಯಾತಿಯ ಬೆಳ್ಳಿ ಮೊದಲ ಮಹಿಳಾ ಕಾವಾಡಿ ಆಗಿ ನೇಮಕ

ಏನೆಲ್ಲ ಸೌಲಭ್ಯವಿದೆ?

ಈ ಶಾಲೆಗಳಿಗೆ ಉಚಿತ ಹಾಸ್ಟೆಲ್ ಸೌಲಭ್ಯವಿರುತ್ತದೆ. ಮಕ್ಕಳಿಗಾಗಿ ವಿಶಿಷ್ಟವಾದ ಶೈಕ್ಷಣಿಕ ಪಠ್ಯಕ್ರಮವನ್ನು ಸಹ ವಿನ್ಯಾಸಗೊಳಿಸಲಾಗಿದೆ. ಇದರೊಂದಿಗೆ ಕಂಪ್ಯೂಟರ್ ಲ್ಯಾಬ್, ಸೈನ್ಸ್ ಲ್ಯಾಬ್, ಗಣಿತ ಲ್ಯಾಬ್, ಸಮಾಜ ವಿಜ್ಞಾನ ಪ್ರಯೋಗಾಲಯ, ಅಟಲ್ ಥಿಂಕಿಂಗ್ ಲ್ಯಾಬ್, ಎಕ್ಸ್‌ಪರಿಮೆಂಟಲ್ ಲ್ಯಾಬ್ ಸೌಲಭ್ಯವೂ ಇಲ್ಲಿ ಇರಲಿದೆ. ಮಕ್ಕಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಂಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ