AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ

2017 ರ ಮೊದಲು ಈ ರಾಜ್ಯದಲ್ಲಿ ಯಾವುದೇ ಮಾಫಿಯಾದವರು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಕಸಿದುಕೊಳ್ಳುತ್ತಿದ್ದರು. ಆಗ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಈಗ ಅದೇ ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿಯೇ ಬಡವರಿಗೆ ಮನೆ ನಿರ್ಮಿಸಿಕೊಡುತ್ತಿರುವುದು ದೊಡ್ಡ ಸಾಧನೆಯಾಗಿದೆ ಎಂದ ಯೋಗಿ ಆದಿತ್ಯನಾಥ

ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಅತೀಕ್ ಅಹ್ಮದ್‌ನಿಂದ ವಶಪಡಿಸಿಕೊಂಡ ಜಮೀನಿನಲ್ಲಿ ನಿರ್ಮಿಸಲಾಗಿದ್ದ 76 ಫ್ಲ್ಯಾಟ್‌ಗಳನ್ನು ಹಸ್ತಾಂತರಿಸಿದ ಯೋಗಿ ಆದಿತ್ಯನಾಥ
ಫ್ಲಾಟ್ ಹಸ್ತಾಂತರಿಸಿದ ಯೋಗಿ ಆದಿತ್ಯನಾಥ
ರಶ್ಮಿ ಕಲ್ಲಕಟ್ಟ
|

Updated on:Jun 30, 2023 | 6:50 PM

Share

ದೆಹಲಿ: ಪ್ರಯಾಗ್‌ರಾಜ್‌ನಲ್ಲಿ ಹತ್ಯೆಗೀಡಾದ ಗ್ಯಾಂಗ್​​ಸ್ಟರ್ ಮತ್ತು ರಾಜಕಾರಣಿ ಅತೀಕ್ ಅಹ್ಮದ್‌ನಿಂದ (Atiq Ahmed) ವಶಪಡಿಸಿಕೊಂಡ ಭೂಮಿಯಲ್ಲಿ ಬಡವರಿಗಾಗಿ ನಿರ್ಮಿಸಲಾದ 76 ಫ್ಲ್ಯಾಟ್‌ಗಳ ಕೀಲಿಯನ್ನು ಉತ್ತರ ಪ್ರದೇಶದ (Uttar Pradesh) ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಇಂದು (ಶುಕ್ರವಾರ) ಹಸ್ತಾಂತರಿಸಿದ್ದಾರೆ. ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿಯಲ್ಲಿ ಫ್ಲ್ಯಾಟ್‌ಗಳನ್ನು ನಿರ್ಮಿಸಲಾಗಿದ್ದು ಈ ತಿಂಗಳ ಆರಂಭದಲ್ಲಿ ಲಾಟರಿ ಮೂಲಕ ಹಂಚಿಕೆ ಮಾಡಲಾಗಿದೆ. ಮೊದಲು ಫ್ಲ್ಯಾಟ್‌ ಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ನಂತರ ನಡೆದ ಸಮಾರಂಭದಲ್ಲಿ ಫಲಾನುಭವಿಗಳಿಗೆ ಹಂಚಿಕೆ ಪತ್ರ ವಿತರಿಸಿದರು.

ಅಧಿಕಾರಿಗಳ ಪ್ರಕಾರ, ಪ್ರತಿ ಫ್ಲ್ಯಾಟ್‌ 41 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಇದು ಎರಡು ಕೋಣೆ, ಅಡುಗೆಮನೆ ಮತ್ತು ಶೌಚಾಲಯವನ್ನು ಹೊಂದಿದೆ. ಫ್ಲ್ಯಾಟ್‌ಗಳಿಗಾಗಿ 6,000 ಕ್ಕೂ ಹೆಚ್ಚು ಜನರು ಪ್ರಯಾಗ್‌ರಾಜ್ ಅಭಿವೃದ್ಧಿ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಿದ್ದರು. 1,590 ಜನರು ಲಾಟರಿ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ.

2017 ರ ಮೊದಲು ಈ ರಾಜ್ಯದಲ್ಲಿ ಯಾವುದೇ ಮಾಫಿಯಾದವರು ಬಡವರು, ಉದ್ಯಮಿಗಳು ಅಥವಾ ಸರ್ಕಾರಿ ಸಂಸ್ಥೆಗಳ ಭೂಮಿಯನ್ನು ಕಸಿದುಕೊಳ್ಳುತ್ತಿದ್ದರು. ಆಗ ಬಡವರು ಅಸಹಾಯಕರಾಗಿ ನೋಡುತ್ತಿದ್ದರು. ಈಗ ಅದೇ ಮಾಫಿಯಾಗಳಿಂದ ವಶಪಡಿಸಿಕೊಂಡ ಭೂಮಿಯಲ್ಲಿಯೇ ಬಡವರಿಗೆ ಮನೆ ನಿರ್ಮಿಸಿಕೊಡುತ್ತಿರುವುದು ದೊಡ್ಡ ಸಾಧನೆಯಾಗಿದೆ ಎಂದು ಸಮಾರಂಭದಲ್ಲಿ ಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ದಿ ಕೇರಳ ಸ್ಟೋರಿ ಚಿತ್ರತಂಡಕ್ಕೆ ಉಡುಗೊರೆ ನೀಡಿದ ಯುಪಿ ಸಿಎಂ ಯೋಗಿ ಆದಿತ್ಯನಾಥ

ಈ ವರ್ಷದ ಏಪ್ರಿಲ್‌ನಲ್ಲಿ, ಕನಿಷ್ಠ 100 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸಿದ ಅತೀಕ್ ಮತ್ತು ಅವರ ಸಹೋದರ ಅಶ್ರಫ್ ಅಹ್ಮದ್ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಪ್ರಯಾಗ್‌ರಾಜ್‌ಗೆ ಕರೆದೊಯ್ಯುತ್ತಿದ್ದಾಗ ಪತ್ರಕರ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ವೇಳೆ ಅವರು ಉತ್ತರ ಪ್ರದೇಶ ಪೊಲೀಸರ ವಶದಲ್ಲಿದ್ದರು. ಘಟನೆಯ ಕೆಲವು ದಿನಗಳ ಮೊದಲು, ಅತಿಕ್​​ನ್ನು ಅಪಹರಣ ಪ್ರಕರಣದಲ್ಲಿ ಅಪರಾಧಿ ಎಂದು ಘೋಷಿಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:48 pm, Fri, 30 June 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ