AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Jun 26, 2022 | 12:28 PM

Share

ಲಖನೌ: ತಾಂತ್ರಿಕ ಸಮಸ್ಯೆಯಿಂದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ವಾರಾಣಸಿ ಬಳಿ ಭಾನುವಾರ (ಜೂನ್ 26) ನಡೆದಿದೆ. ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ. ಯಾವುದೇ ಅಪಾಯಗಳಿಲ್ಲದೆ ಯೋಗಿ ಆದಿತ್ಯನಾಥ್ ಪಾರಾಗಿದ್ದಾರೆ.

‘ಯೋಗಿ ಆದಿತ್ಯನಾಥ್ ಅವರು ವಾರಾಣಸಿಯಿಂದ ಲಖನೌಗೆ ಹಿಂದಿರುಗುತ್ತಿದ್ದಾಗ ಹಕ್ಕಿಯೊಂದು ಬಡಿಯಿತು. ಹೀಗಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು’ ಎಂದು ಜಿಲ್ಲಾಧಿಕಾರಿ ಕೌಶಲ್​ರಾಜ್ ಶರ್ಮಾ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ನಿನ್ನೆ (ಜೂನ್ 25) ಕಾಶಿ ವಿಶ್ವನಾಥ ದೇಗುಲಕ್ಕೆ ಆಗಮಿಸಿದ್ದರು.

ಪ್ರಸ್ತುತ ವಾರಾಣಸಿಯ ಸರ್ಕೀಟ್​ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆದಿತ್ಯನಾಥ್, ನಂತರ ಸರ್ಕಾರಿ ವಿಮಾನದಲ್ಲಿ ಲಖನೌಗೆ ತೆರಳಲಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಶನಿವಾರ ಮುಂಜಾನೆ ಲಖನೌ ನಗರದಲ್ಲಿ 11 ಲಕ್ಷ ಕುಟುಂಬಗಳಿಗೆ ಆನ್​ಲೈನ್ ಮೂಲಕ ವಾಸ ದೃಢೀಕರಣ ಪತ್ರಗಳನ್ನು ವಿತರಿಸಿದ್ದರು. ರಾಜ್ಯವನ್ನು ಸ್ವಾವಲಂಬಿಯಾಗಿಸುವ ತಮ್ಮ ಆಶಯವನ್ನು ಅವರು ಪುನರುಚ್ಚರಿಸಿದ್ದರು. ಉತ್ತರ ಪ್ರದೇಶಗಳಲ್ಲಿ ವಿವಿಧ ಗ್ರಾಮಗಳಲ್ಲಿರುವ ಸುಮಾರು 2.5 ಕೋಟಿ ಮಂದಿಗೆ ಈ ದಾಖಲೆಗಳು ಶೀಘ್ರ ಲಭ್ಯವಾಗಲಿವೆ ಎಂದು ಹೇಳಿದ್ದರು.

Published On - 12:06 pm, Sun, 26 June 22

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು