AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Jun 26, 2022 | 12:28 PM

Share

ಲಖನೌ: ತಾಂತ್ರಿಕ ಸಮಸ್ಯೆಯಿಂದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ವಾರಾಣಸಿ ಬಳಿ ಭಾನುವಾರ (ಜೂನ್ 26) ನಡೆದಿದೆ. ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ. ಯಾವುದೇ ಅಪಾಯಗಳಿಲ್ಲದೆ ಯೋಗಿ ಆದಿತ್ಯನಾಥ್ ಪಾರಾಗಿದ್ದಾರೆ.

‘ಯೋಗಿ ಆದಿತ್ಯನಾಥ್ ಅವರು ವಾರಾಣಸಿಯಿಂದ ಲಖನೌಗೆ ಹಿಂದಿರುಗುತ್ತಿದ್ದಾಗ ಹಕ್ಕಿಯೊಂದು ಬಡಿಯಿತು. ಹೀಗಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು’ ಎಂದು ಜಿಲ್ಲಾಧಿಕಾರಿ ಕೌಶಲ್​ರಾಜ್ ಶರ್ಮಾ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ನಿನ್ನೆ (ಜೂನ್ 25) ಕಾಶಿ ವಿಶ್ವನಾಥ ದೇಗುಲಕ್ಕೆ ಆಗಮಿಸಿದ್ದರು.

ಪ್ರಸ್ತುತ ವಾರಾಣಸಿಯ ಸರ್ಕೀಟ್​ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆದಿತ್ಯನಾಥ್, ನಂತರ ಸರ್ಕಾರಿ ವಿಮಾನದಲ್ಲಿ ಲಖನೌಗೆ ತೆರಳಲಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಶನಿವಾರ ಮುಂಜಾನೆ ಲಖನೌ ನಗರದಲ್ಲಿ 11 ಲಕ್ಷ ಕುಟುಂಬಗಳಿಗೆ ಆನ್​ಲೈನ್ ಮೂಲಕ ವಾಸ ದೃಢೀಕರಣ ಪತ್ರಗಳನ್ನು ವಿತರಿಸಿದ್ದರು. ರಾಜ್ಯವನ್ನು ಸ್ವಾವಲಂಬಿಯಾಗಿಸುವ ತಮ್ಮ ಆಶಯವನ್ನು ಅವರು ಪುನರುಚ್ಚರಿಸಿದ್ದರು. ಉತ್ತರ ಪ್ರದೇಶಗಳಲ್ಲಿ ವಿವಿಧ ಗ್ರಾಮಗಳಲ್ಲಿರುವ ಸುಮಾರು 2.5 ಕೋಟಿ ಮಂದಿಗೆ ಈ ದಾಖಲೆಗಳು ಶೀಘ್ರ ಲಭ್ಯವಾಗಲಿವೆ ಎಂದು ಹೇಳಿದ್ದರು.

Published On - 12:06 pm, Sun, 26 June 22

Follow Us
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ