AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ.

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Edited By: |

Updated on:Jun 26, 2022 | 12:28 PM

Share

ಲಖನೌ: ತಾಂತ್ರಿಕ ಸಮಸ್ಯೆಯಿಂದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ವಾರಾಣಸಿ ಬಳಿ ಭಾನುವಾರ (ಜೂನ್ 26) ನಡೆದಿದೆ. ಹೆಲಿಕಾಪ್ಟರ್​ಗೆ ಹಕ್ಕಿಯೊಂದು ಬಡಿದ ಕಾರಣ ತಾಂತ್ರಿಕ ಸಮಸ್ಯೆ ಉಂಟಾಯಿತು ಎಂದು ಹೇಳಲಾಗಿದೆ. ಯಾವುದೇ ಅಪಾಯಗಳಿಲ್ಲದೆ ಯೋಗಿ ಆದಿತ್ಯನಾಥ್ ಪಾರಾಗಿದ್ದಾರೆ.

‘ಯೋಗಿ ಆದಿತ್ಯನಾಥ್ ಅವರು ವಾರಾಣಸಿಯಿಂದ ಲಖನೌಗೆ ಹಿಂದಿರುಗುತ್ತಿದ್ದಾಗ ಹಕ್ಕಿಯೊಂದು ಬಡಿಯಿತು. ಹೀಗಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು’ ಎಂದು ಜಿಲ್ಲಾಧಿಕಾರಿ ಕೌಶಲ್​ರಾಜ್ ಶರ್ಮಾ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರು ನಿನ್ನೆ (ಜೂನ್ 25) ಕಾಶಿ ವಿಶ್ವನಾಥ ದೇಗುಲಕ್ಕೆ ಆಗಮಿಸಿದ್ದರು.

ಪ್ರಸ್ತುತ ವಾರಾಣಸಿಯ ಸರ್ಕೀಟ್​ ಹೌಸ್​ನಲ್ಲಿ ವಿಶ್ರಾಂತಿ ಪಡೆಯುತ್ತಿರುವ ಆದಿತ್ಯನಾಥ್, ನಂತರ ಸರ್ಕಾರಿ ವಿಮಾನದಲ್ಲಿ ಲಖನೌಗೆ ತೆರಳಲಿದ್ದಾರೆ.

ಯೋಗಿ ಆದಿತ್ಯನಾಥ್ ಅವರು ಶನಿವಾರ ಮುಂಜಾನೆ ಲಖನೌ ನಗರದಲ್ಲಿ 11 ಲಕ್ಷ ಕುಟುಂಬಗಳಿಗೆ ಆನ್​ಲೈನ್ ಮೂಲಕ ವಾಸ ದೃಢೀಕರಣ ಪತ್ರಗಳನ್ನು ವಿತರಿಸಿದ್ದರು. ರಾಜ್ಯವನ್ನು ಸ್ವಾವಲಂಬಿಯಾಗಿಸುವ ತಮ್ಮ ಆಶಯವನ್ನು ಅವರು ಪುನರುಚ್ಚರಿಸಿದ್ದರು. ಉತ್ತರ ಪ್ರದೇಶಗಳಲ್ಲಿ ವಿವಿಧ ಗ್ರಾಮಗಳಲ್ಲಿರುವ ಸುಮಾರು 2.5 ಕೋಟಿ ಮಂದಿಗೆ ಈ ದಾಖಲೆಗಳು ಶೀಘ್ರ ಲಭ್ಯವಾಗಲಿವೆ ಎಂದು ಹೇಳಿದ್ದರು.

Published On - 12:06 pm, Sun, 26 June 22

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ