AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ್ಞಾನವಾಪಿ ಮಸೀದಿ ಎಂದು ಕರೆಯುವುದು ದುರದೃಷ್ಟಕರ: ಯೋಗಿ ಆದಿತ್ಯನಾಥ್

  ದೀನ್ ದಯಾಳ್ ಉಪಾಧ್ಯಾಯ ಗೋರಖ್‌ಪುರ ವಿಶ್ವವಿದ್ಯಾನಿಲಯದಲ್ಲಿ ‘ಸಾಮರಸ್ಯ ಸಮಾಜ ನಿರ್ಮಾಣದಲ್ಲಿ ನಾಥಪಂಥದವರ ಕೊಡುಗೆ’ ಎಂಬ ವಿಷಯದ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ‘ಕೆಲವರು ಜ್ಞಾನವಾಪಿಯನ್ನು ಮಸೀದಿ ಎಂದು ಕರೆಯುವುದು ದುರದೃಷ್ಟಕರವಾಗಿದೆ. ಅದು ಭಗವಾನ್ ವಿಶ್ವನಾಥನ ಸಾಕಾರವಾಗಿದೆ ಎಂದು ಹೇಳಿದ್ದಾರೆ.

ಜ್ಞಾನವಾಪಿ ಮಸೀದಿ ಎಂದು ಕರೆಯುವುದು ದುರದೃಷ್ಟಕರ: ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ರಶ್ಮಿ ಕಲ್ಲಕಟ್ಟ
|

Updated on: Sep 14, 2024 | 7:38 PM

Share

ಲಕ್ನೋ ಸೆಪ್ಟೆಂಬರ್ 14: “ಭಗವಾನ್ ವಿಶ್ವನಾಥನ ಸಾಕಾರ ಆಗಿರುವ ಜ್ಞಾನವಾಪಿಯನ್ನು (Gyanvapi) ಮಸೀದಿ ಎಂದು ಕರೆಯುವುದು ದುರದೃಷ್ಟಕರ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಹೇಳಿದ್ದಾರೆ.  ದೀನ್ ದಯಾಳ್ ಉಪಾಧ್ಯಾಯ ಗೋರಖ್‌ಪುರ ವಿಶ್ವವಿದ್ಯಾನಿಲಯದಲ್ಲಿ ‘ಸಾಮರಸ್ಯ ಸಮಾಜ ನಿರ್ಮಾಣದಲ್ಲಿ ನಾಥಪಂಥದವರ ಕೊಡುಗೆ’ ಎಂಬ ವಿಷಯದ ಕುರಿತ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ, ‘ಕೆಲವರು ಜ್ಞಾನವಾಪಿಯನ್ನು ಮಸೀದಿ ಎಂದು ಕರೆಯುವುದು ದುರದೃಷ್ಟಕರವಾಗಿದೆ. ಅದು ಭಗವಾನ್ ವಿಶ್ವನಾಥನ ಸಾಕಾರವಾಗಿದೆ ಎಂದು ಹೇಳಿದ್ದಾರೆ.

ಈ ವರ್ಷದ ಜನವರಿಯಲ್ಲಿ, ಭಾರತೀಯ ಪುರಾತತ್ವ ಸಮೀಕ್ಷೆಯು ತನ್ನ ವರದಿಯಲ್ಲಿ 17 ನೇ ಶತಮಾನದಲ್ಲಿ “ಅಸ್ತಿತ್ವದಲ್ಲಿರುವ ರಚನೆಯನ್ನು ನಿರ್ಮಿಸುವ ಮೊದಲು ದೊಡ್ಡ ಹಿಂದೂ ದೇವಾಲಯವು ಅಸ್ತಿತ್ವದಲ್ಲಿತ್ತು” ಎಂದು ಹೇಳಿದೆ.  ಪಶ್ಚಿಮದ ಗೋಡೆಯು ಕಲ್ಲುಗಳಿಂದ ಮಾಡಲ್ಪಟ್ಟಿದೆ ಮತ್ತು ಅಚ್ಚುಗಳಿಂದ ಅಲಂಕರಿಸಲ್ಪಟ್ಟಿದೆ, ಇದು ಹಿಂದಿನ ಹಿಂದೂ ದೇವಾಲಯದ ಭಾಗವಾಗಿ ಉಳಿದಿದೆ ಎಂದು ವರದಿ ಹೇಳಿದೆ. ವಾರಣಾಸಿಯಲ್ಲಿನ ಜ್ಞಾನವಾಪಿ ಮಸೀದಿಯನ್ನು ಪೂರ್ವ ಅಸ್ತಿತ್ವದಲ್ಲಿರುವ ದೇವಾಲಯದ ಅವಶೇಷಗಳ ಮೇಲೆ ನಿರ್ಮಿಸಲಾಗಿದೆ ಎಂದು ಹೇಳಲಾದ ಹಿಂದೂ ಕಡೆಯಿಂದ ಜ್ಞಾನವಾಪಿ ಸಮಸ್ಯೆಯು ಸುದೀರ್ಘವಾದ ಕಾನೂನು ಹೋರಾಟದ ಕೇಂದ್ರವಾಗಿದೆ, ಆದರೆ ಮುಸ್ಲಿಂ ಕಡೆಯವರು ಈ ಹಕ್ಕನ್ನು ವಿರೋಧಿಸಿದ್ದಾರೆ.

ಯೋಗಿ ಆದಿತ್ಯನಾಥ್ ಹೇಳಿಕೆಗೆ ಎಸ್ಪಿ ಪ್ರತಿಕ್ರಿಯೆ

ಪ್ರತಿಪಕ್ಷ ಸಮಾಜವಾದಿ ಪಕ್ಷವು ಆದಿತ್ಯನಾಥ್ ಅವರ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿತು. ಎಸ್ಪಿ ವಕ್ತಾರ ಅಬ್ಬಾಸ್ ಹೈದರ್ ಪಿಟಿಐಗೆ ಪ್ರತಿಕ್ರಿಯಿಸಿ, “ಅವರು (ಯೋಗಿ ಆದಿತ್ಯನಾಥ್) ನ್ಯಾಯಾಲಯಕ್ಕೆ ಗೌರವವನ್ನು ನೀಡುವುದಿಲ್ಲ ಎಂದು ತೋರುತ್ತಿದೆ, ವಿಷಯವು ನ್ಯಾಯಾಲಯದಲ್ಲಿ ಬಾಕಿಯಿದೆ, ಮುಖ್ಯಮಂತ್ರಿಗಳು ಸಂವಿಧಾನದ ಪ್ರತಿಜ್ಞೆ ಮಾಡಿದರೂ ನ್ಯಾಯಾಲಯಕ್ಕೆ ಸರಿಯಾದ ಗೌರವ ನೀಡದಿರುವುದು ವಿಷಾದನೀಯ.

“ತಮ್ಮ ಪಟ್ಟಭದ್ರ ರಾಜಕೀಯ ಹಿತಾಸಕ್ತಿಗಳಿಗಾಗಿ, ಅವರು ಸಮಾಜವನ್ನು ವಿಭಜಿಸುತ್ತಿದ್ದಾರೆ. ಬಿಜೆಪಿಗೆ ಸಾರ್ವಜನಿಕರು ನೀಡಿರುವ ಜನಾದೇಶವು ಅವರು ಜನರಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಮಾತನಾಡಿಲ್ಲ ಎಂಬುದನ್ನು ಸೂಚಿಸುತ್ತದೆ” ಎಂದು ಅವರು ಹೇಳಿದರು.

ಅದೇ ವೇಳೆ ಉತ್ತರ ಪ್ರದೇಶದ ಬಿಜೆಪಿ ವಕ್ತಾರ ಮನೀಶ್ ಶುಕ್ಲಾ, “ಐತಿಹಾಸಿಕ, ಪುರಾತತ್ವ ಮತ್ತು ಆಧ್ಯಾತ್ಮಿಕ ಪುರಾವೆಗಳು ಜ್ಞಾನವಾಪಿ ದೇವಸ್ಥಾನ ಎಂದು ಸ್ಪಷ್ಟವಾಗಿ ಸೂಚಿಸುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಹರ್ಯಾಣ ಈ ಬಾರಿ ಬಿಜೆಪಿಯ ಹ್ಯಾಟ್ರಿಕ್‌ಗೆ ನಿರ್ಧರಿಸಿದೆ: ಪ್ರಧಾನಿ ಮೋದಿ ಅಯೋಧ್ಯೆಯ ಹನುಮಂತನಗರಿ ದೇಗುಲದ ಮಹಂತ್ ರಾಜುದಾಸ್ ಮಾತನಾಡಿ, ಜ್ಞಾನವಾಪಿಯನ್ನು ಮಸೀದಿ ಎಂದು ಕರೆಯುತ್ತಿರುವ ದುರ್ದೈವಿಗಳು, ಅದು ವಿಶ್ವನಾಥ, ಮತ್ತು ಕಾಶಿ ವಿಶ್ವನಾಥನ ದೇವಸ್ಥಾನ. ಕುರುಡರು ಕಟ್ಟಡದ ಮೇಲೆ ಕೈ ಹಾಕಿದರೂ ಅವರು ‘ಸನಾತನ’ದ ಎಲ್ಲಾ ಚಿಹ್ನೆಗಳ ಭಾವನೆಯನ್ನು ಪಡೆಯುತ್ತಾರೆ.  ಇದು ದೇವಸ್ಥಾನ ಎಂದು ನಾವು ನಿರಂತರವಾಗಿ ಹೇಳುತ್ತಿದ್ದೇವೆ, ಮೂರ್ಖರು ಮಾತ್ರ ಅದನ್ನು ಮಸೀದಿ ಎಂದು ಕರೆಯುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?