AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಜೀ-ಯೋಗಿ ಜೀ: ಅಪರೂಪದ ಫೋಟೋ ಶೇರ್​ ಮಾಡಿಕೊಂಡು ಸಣ್ಣ ಕವನವನ್ನೇ ಬರೆದ ಉತ್ತರಪ್ರದೇಶ ಸಿಎಂ

ಯೋಗಿ ಆದಿತ್ಯನಾಥ್​ ಶೇರ್ ಮಾಡಿರುವ ಫೋಟೋವನ್ನು ಅನೇಕರು ಮೆಚ್ಚಿಕೊಂಡಿದ್ದಾರೆ. ಅಪರೂಪದ ಫೋಟೋ ಎಂದಿದ್ದಾರೆ. ಆದರೆ ಸಮಾಜವಾದಿ ಪಕ್ಷ ವ್ಯಂಗ್ಯ ಮಾಡಿದೆ.

ಮೋದಿ ಜೀ-ಯೋಗಿ ಜೀ: ಅಪರೂಪದ ಫೋಟೋ ಶೇರ್​ ಮಾಡಿಕೊಂಡು ಸಣ್ಣ ಕವನವನ್ನೇ ಬರೆದ ಉತ್ತರಪ್ರದೇಶ ಸಿಎಂ
ಯೋಗಿ ಆದಿತ್ಯನಾಥ್​ ಶೇರ್ ಮಾಡಿರುವ ಫೋಟೋ
TV9 Web
| Edited By: |

Updated on: Nov 21, 2021 | 2:44 PM

Share

ಪ್ರಧಾನಿ ನರೇಂದ್ರ ಮೋದಿ (PM Narendra Modi)ಯವರು ಸದ್ಯ ಲಖನೌದಲ್ಲಿದ್ದಾರೆ. 56ನೇ ಡಿಜಿಪಿ-ಐಜಿಪಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ನವೆಂಬರ್ 19ರಂದು ತೆರಳಿರುವ ಪ್ರಧಾನಿ ಮೋದಿ ಇಂದು ದೆಹಲಿಗೆ ವಾಪಸ್​ ಬರಲಿದ್ದಾರೆ. ಈ ಮಧ್ಯೆ ಇಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ತಾವು ಪ್ರಧಾನಿ ಮೋದಿಯವರೊಂದಿಗೆ ಇರುವ ಎರಡು ಫೋಟೋಗಳನ್ನು ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ಈ ಎರಡೂ ಕ್ಯಾಂಡಿಡ್​ ಫೋಟೋಗಳಾಗಿದ್ದು, ಯೋಗಿ ಜೀ ಶೇರ್​ ಮಾಡಿದ ಕೆಲವೇ ಕ್ಷಣದಲ್ಲಿ ಸಿಕ್ಕಾಪಟೆ ವೈರಲ್​ ಆಗುತ್ತಿವೆ. ಪ್ರಧಾನಿ ನರೇಂದ್ರ ಮೋದಿಯವರು ಯೋಗಿ ಆದಿತ್ಯನಾಥ್​ ಅವರ ಹೆಗಲ ಮೇಲೆ ಕೈಹಾಕಿ ಏನನ್ನೋ ಹೇಳುತ್ತಿರುವ ಫೋಟೋಗಳು ಇವು. ಒಂದು ಫೋಟೋವನ್ನು ಎದುರಿನಿಂದ ಕ್ಲಿಕ್ಕಸಿದ್ದರೆ, ಇನ್ನೊಂದನ್ನು ಹಿಂಬದಿಯಿಂದ ತೆಗೆಯಲಾಗಿದೆ. ಒಟ್ಟಿನಲ್ಲಿ ಅಪರೂಪ ಎನ್ನಿಸುವ ಫೋಟೋಗಳು ಇವಾಗಿವೆ.

ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ ಯೋಗಿ ಆದಿತ್ಯನಾಥ್​, ನವಭಾರತ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಕ್ಯಾಪ್ಷನ್​ ಕೊಟ್ಟಿದ್ದಾರೆ. ಅಷ್ಟೇ ಅಲ್ಲ, ಸಣ್ಣ ಕವಿತೆಯನ್ನೇ ಬರೆದುಬಿಟ್ಟಿದ್ದಾರೆ. ‘ನಾವು ಪ್ರತಿಜ್ಞೆಯೊಂದಿಗೆ ಮುನ್ನಡೆಯುತ್ತಿದ್ದೇವೆ..ನಮ್ಮ ತನು-ಮನವನ್ನು ಅರ್ಪಿಸಲು ನಿರ್ಧಾರ ಮಾಡಿದ್ದೇವೆ, ಆಕಾಶದೆತ್ತರಕ್ಕೆ ಹೋಗಲು ಮತ್ತು ನವಭಾರತ ನಿರ್ಮಾಣ ಮಾಡಲು’ ಎಂದು ನಾಲ್ಕು ಸಾಲು ಸುಂದರವಾಗಿ ಬರೆದುಕೊಂಡಿದ್ದಾರೆ.

ಸಮಾಜವಾದಿ ಪಕ್ಷದಿಂದ ವ್ಯಂಗ್ಯ ಯೋಗಿ ಆದಿತ್ಯನಾಥ್​ ಶೇರ್ ಮಾಡಿರುವ ಫೋಟೋವನ್ನು ಸಮಾಜವಾದಿ ಪಕ್ಷ ವ್ಯಂಗ್ಯಮಾಡಿದೆ. ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಅಧಿಕಾರದಲ್ಲಿದ್ದಾಗ ಮಾಡಿದ ಕೆಲಸವೇ ಹೆಚ್ಚಾಗಿದೆ. ಹಾಗಾಗಿ ಈ ಬಾರಿ ಅಖಿಲೇಶ್​ ಅವರೇ ಗೆಲ್ಲಬಹುದು ಎಂದು ಪ್ರಧಾನಿ ಮೋದಿ, ಯೋಗಿ ಜೀ ಅವರಿಗೆ ಹೇಳುತ್ತಿರಬಹುದು ಎಂದು ಎಸ್​ಪಿ ವಕ್ತಾರ ಅನುರಾಗ್​ ಭಡೌರಿಯಾ ಟ್ವೀಟ್​ ಮಾಡಿದ್ದಾರೆ.  ಹಾಗೇ, ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ. ಅದರಾಚೆ ಹಲವರು ಈ ಫೋಟೋವನ್ನು ಶೇರ್​ ಮಾಡಿಕೊಂಡು ಅಪರೂಪದ ಫೋಟೋ ಎಂದಿದ್ದಾರೆ.

ಇದನ್ನೂ ಓದಿ: Smart TV: ಹೊಸ ಟಿವಿ ಖರೀದಿಸುವ ಪ್ಲಾನ್​ನಲ್ಲಿದ್ದೀರಾ?: ಹಾಗಿದ್ರೆ ಇಲ್ಲೊಮ್ಮೆ ಕಣ್ಣಾಡಿಸಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!