AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ

ಕಳೆದ ಎರಡು ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ
ಯೋಗಿ ಆದಿತ್ಯನಾಥ್​ ಮತ್ತು ಅಖಿಲೇಶ್​ ಯಾದವ್​
Skanda
|

Updated on:Apr 14, 2021 | 1:48 PM

Share

ಲಕ್ನೋ: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಹಲವು ಗಣ್ಯರು ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ವತಃ ಯೋಗಿ ಆದಿತ್ಯನಾಥ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆ ಮೂಲಕ ಕೊರೊನಾ ಪಾಸಿಟಿವ್​ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನನಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಕೊವಿಡ್​ ಪರೀಕ್ಷೆಯ ರಿಪೋರ್ಟ್​ ಬಂದಿದ್ದು ಸೋಂಕು ದೃಢಪಟ್ಟಿದೆ. ನಾನು ಹೋಂ ಐಸೋಲೇಶನ್​ನಲ್ಲಿ ಇದ್ದು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೊತೆಗೆ, ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳನ್ನು ವರ್ಚುಯಲ್​ ಆಗಿ ನಡೆಸಲಾಗುತ್ತಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ದಯಮಾಡಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಖಿಲೇಶ್​ ಯಾದವ್​ಗೂ ಕೊರೊನಾ ಪಾಸಿಟಿವ್​ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಮುಖ್ಯಸ್ಥ ಅಖಿಲೇಶ್​ ಯಾದವ್​ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅಖಿಲೇಶ್​ ಯಾದವ್​, ತಮಗೆ ಕೊರೊನಾ ಪಾಸಿಟಿವ್​ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕುಂಭ ಮೇಳದಲ್ಲಿ ಮೂರನೇ ಶಾಹಿ ಸ್ನಾನ ಇಂದು, ಕೊವಿಡ್ ಮಾರ್ಗಸೂಚಿ ಪಾಲಿಸಿ: ಉತ್ತರಾಖಂಡ ಸಿಎಂ ತೀರತ್ ಸಿಂಗ್ ರಾವತ್ ಮನವಿ

Published On - 1:18 pm, Wed, 14 April 21

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ