AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ

ಕಳೆದ ಎರಡು ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ಗೆ ಕೊರೊನಾ ಸೋಂಕು ದೃಢ
ಯೋಗಿ ಆದಿತ್ಯನಾಥ್​ ಮತ್ತು ಅಖಿಲೇಶ್​ ಯಾದವ್​
Skanda
|

Updated on:Apr 14, 2021 | 1:48 PM

Share

ಲಕ್ನೋ: ದೇಶದೆಲ್ಲೆಡೆ ಕೊರೊನಾ ಸೋಂಕಿನ ಎರಡನೇ ಅಲೆ ಭೀತಿ ಹೆಚ್ಚಾಗುತ್ತಿದ್ದು, ಹಲವು ಗಣ್ಯರು ಸೋಂಕಿಗೆ ತುತ್ತಾಗಿದ್ದಾರೆ. ಇದೀಗ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ ಕೆಲ ದಿನಗಳಿಂದ ಹೋಂ ಐಸೋಲೇಶನ್​ನಲ್ಲಿ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದ ಯೋಗಿ ಆದಿತ್ಯನಾಥ್​ ಅವರಿಗೆ ಇದೀಗ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಈ ಬಗ್ಗೆ ಸ್ವತಃ ಯೋಗಿ ಆದಿತ್ಯನಾಥ್ ಅವರು ತಮ್ಮ ಅಧಿಕೃತ ಟ್ವಿಟರ್​ ಖಾತೆ ಮೂಲಕ ಕೊರೊನಾ ಪಾಸಿಟಿವ್​ ಬಂದಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ನನಗೆ ಕೊರೊನಾ ಪಾಸಿಟಿವ್​ ಕಾಣಿಸಿಕೊಂಡಿದೆ. ಕೊವಿಡ್​ ಪರೀಕ್ಷೆಯ ರಿಪೋರ್ಟ್​ ಬಂದಿದ್ದು ಸೋಂಕು ದೃಢಪಟ್ಟಿದೆ. ನಾನು ಹೋಂ ಐಸೋಲೇಶನ್​ನಲ್ಲಿ ಇದ್ದು ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ. ಜೊತೆಗೆ, ಆಡಳಿತಕ್ಕೆ ಸಂಬಂಧಿಸಿದ ಎಲ್ಲಾ ಕೆಲಸ ಕಾರ್ಯಗಳನ್ನು ವರ್ಚುಯಲ್​ ಆಗಿ ನಡೆಸಲಾಗುತ್ತಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ದಯಮಾಡಿ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಅಖಿಲೇಶ್​ ಯಾದವ್​ಗೂ ಕೊರೊನಾ ಪಾಸಿಟಿವ್​ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಸಮಾಜವಾದಿ ಮುಖ್ಯಸ್ಥ ಅಖಿಲೇಶ್​ ಯಾದವ್​ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅಖಿಲೇಶ್​ ಯಾದವ್​, ತಮಗೆ ಕೊರೊನಾ ಪಾಸಿಟಿವ್​ ಬಂದಿರುವುದಾಗಿ ಹೇಳಿಕೊಂಡಿದ್ದಾರೆ. ಜೊತೆಗೆ, ತಮ್ಮ ಸಂಪರ್ಕಕ್ಕೆ ಬಂದವರಿಗೆ ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕುಂಭ ಮೇಳದಲ್ಲಿ ಮೂರನೇ ಶಾಹಿ ಸ್ನಾನ ಇಂದು, ಕೊವಿಡ್ ಮಾರ್ಗಸೂಚಿ ಪಾಲಿಸಿ: ಉತ್ತರಾಖಂಡ ಸಿಎಂ ತೀರತ್ ಸಿಂಗ್ ರಾವತ್ ಮನವಿ

Published On - 1:18 pm, Wed, 14 April 21

Follow Us
Skanda
Skanda
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!