AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ

ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ
ಸಿಎಂ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Nov 11, 2021 | 6:37 PM

Share

ಬಲ್ಲಿಯಾ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ  ಅಸಮಾಧಾನ ಹೊರಹಾಕಿದ್ದಾರೆ. ಯೋಗಿ ಆದಿತ್ಯನಾಥ್​ರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಿದರೆ ಅವರು ಮತ್ತೆ ಸನ್ಯಾಸಿಯಾಗಿಯೇ ಮುಂದುವರಿಯುತ್ತಾರೆ ಎಂದು ಅಣಕಿಸಿದ್ದಾರೆ. ಯೋಗಿ ಆದಿತ್ಯನಾಥ್​​ ಅವರು ಗೋರಖ್​ಪುರದ ಗೋರಖ್​ನಾಥ ದೇಗುಲದ ಪ್ರಧಾನ ಅರ್ಚಕರಾಗಿದ್ದರು.  ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ ರಾಮ್​ ಇಕ್ಬಾಲ್​ ಸಿಂಗ್​, ನಾನು ಆ್ಯಸಿಡ್​​ನ್ನು ಎಂದಿಗೂ ಅಮೃತ ಎಂದು ಹೇಳುವುದಿಲ್ಲ. ಯೋಗಿಯವರನ್ನು ಸಿಎಂ ಹುದ್ದೆಯಿಂದ ಕೆಳಗೆ ಇಳಿಸಿದರೆ ಖಂಡಿತ ಅವರು ಕೋಪಗೊಳ್ಳುತ್ತಾರೆ ಮತ್ತು ಹೋಗಿ ಸಾಧು ಆಗುತ್ತಾರೆ ಎಂದಿದ್ದಾರೆ. 

ಇನ್ನು ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ. ದಿನನಿತ್ಯದ ಬೆಲೆ ಏರಿಕೆಯಿಂದಾಗಿ ಕೃಷಿಯೂ ದುಬಾರಿಯಾಗುತ್ತಿದೆ ಎಂದು ಆರೋಪಿಸಿದರು. ಸುಹಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಅಧ್ಯಕ್ಷ ಓಂ ಪ್ರಕಾಶ್​ ರಾಜ್​ಭರ್​​ನನ್ನು ಹೊಗಳಿದ ರಾಮ್​ ಇಕ್ಬಾಲ್​ ಸಿಂಗ್​, ಅವರು ರಾಜಭರ್ ಸಮುದಾಯದ ಏಕೈಕ ನಾಯಕ ಎಂದು ಹೇಳಿದರು. ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ ವಿರುದ್ಧ ಕೂಡ ಕಿಡಿ ಕಾರಿದರು.

ಇದನ್ನೂ ಓದಿ: ಅಪ್ಪುಗೆ ಹೃದಯದಲ್ಲಿ ಏರುಪೇರು ಆದಾಗ ಆಶ್ವಿನಿಯ ಮನಸ್ಥಿತಿ ಹೇಗಿತ್ತು ಅನ್ನೋದನ್ನ ಯೋಚಿಸಬೇಕು: ಶಿವರಾಜಕುಮಾರ್

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್