AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ

ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ
ಸಿಎಂ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Nov 11, 2021 | 6:37 PM

Share

ಬಲ್ಲಿಯಾ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ  ಅಸಮಾಧಾನ ಹೊರಹಾಕಿದ್ದಾರೆ. ಯೋಗಿ ಆದಿತ್ಯನಾಥ್​ರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಿದರೆ ಅವರು ಮತ್ತೆ ಸನ್ಯಾಸಿಯಾಗಿಯೇ ಮುಂದುವರಿಯುತ್ತಾರೆ ಎಂದು ಅಣಕಿಸಿದ್ದಾರೆ. ಯೋಗಿ ಆದಿತ್ಯನಾಥ್​​ ಅವರು ಗೋರಖ್​ಪುರದ ಗೋರಖ್​ನಾಥ ದೇಗುಲದ ಪ್ರಧಾನ ಅರ್ಚಕರಾಗಿದ್ದರು.  ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ ರಾಮ್​ ಇಕ್ಬಾಲ್​ ಸಿಂಗ್​, ನಾನು ಆ್ಯಸಿಡ್​​ನ್ನು ಎಂದಿಗೂ ಅಮೃತ ಎಂದು ಹೇಳುವುದಿಲ್ಲ. ಯೋಗಿಯವರನ್ನು ಸಿಎಂ ಹುದ್ದೆಯಿಂದ ಕೆಳಗೆ ಇಳಿಸಿದರೆ ಖಂಡಿತ ಅವರು ಕೋಪಗೊಳ್ಳುತ್ತಾರೆ ಮತ್ತು ಹೋಗಿ ಸಾಧು ಆಗುತ್ತಾರೆ ಎಂದಿದ್ದಾರೆ. 

ಇನ್ನು ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ. ದಿನನಿತ್ಯದ ಬೆಲೆ ಏರಿಕೆಯಿಂದಾಗಿ ಕೃಷಿಯೂ ದುಬಾರಿಯಾಗುತ್ತಿದೆ ಎಂದು ಆರೋಪಿಸಿದರು. ಸುಹಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಅಧ್ಯಕ್ಷ ಓಂ ಪ್ರಕಾಶ್​ ರಾಜ್​ಭರ್​​ನನ್ನು ಹೊಗಳಿದ ರಾಮ್​ ಇಕ್ಬಾಲ್​ ಸಿಂಗ್​, ಅವರು ರಾಜಭರ್ ಸಮುದಾಯದ ಏಕೈಕ ನಾಯಕ ಎಂದು ಹೇಳಿದರು. ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ ವಿರುದ್ಧ ಕೂಡ ಕಿಡಿ ಕಾರಿದರು.

ಇದನ್ನೂ ಓದಿ: ಅಪ್ಪುಗೆ ಹೃದಯದಲ್ಲಿ ಏರುಪೇರು ಆದಾಗ ಆಶ್ವಿನಿಯ ಮನಸ್ಥಿತಿ ಹೇಗಿತ್ತು ಅನ್ನೋದನ್ನ ಯೋಚಿಸಬೇಕು: ಶಿವರಾಜಕುಮಾರ್

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ