AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆದ್ದಾರಿಯಲ್ಲಿ ಮದ್ಯದ ನಶೆಯಲ್ಲಿ ಮಲಗಿದ್ದವನನ್ನು ರಕ್ಷಿಸಲು ಹೋಗಿ ಪೊಲೀಸ್​ ಪೇದೆ ಸಾವು, ಮೂವರಿಗೆ ಗಾಯ

ಹೆದ್ದಾರಿಯಲ್ಲಿ ಮದ್ಯದ ನಶೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ

ಹೆದ್ದಾರಿಯಲ್ಲಿ ಮದ್ಯದ ನಶೆಯಲ್ಲಿ ಮಲಗಿದ್ದವನನ್ನು ರಕ್ಷಿಸಲು ಹೋಗಿ ಪೊಲೀಸ್​ ಪೇದೆ ಸಾವು, ಮೂವರಿಗೆ ಗಾಯ
ಅಪಘಾತ(ಸಾಂದರ್ಭಿಕ ಚಿತ್ರ)Image Credit source: NDTV
ನಯನಾ ರಾಜೀವ್
|

Updated on: Jul 06, 2023 | 9:44 AM

Share

ಹೆದ್ದಾರಿಯಲ್ಲಿ ಮದ್ಯದ ನಶೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ರಕ್ಷಿಸಲು ಹೋಗಿ ಪೊಲೀಸ್ ಪೇದೆಯೊಬ್ಬರು ಮೃತಪಟ್ಟಿರುವ ಘಟನೆ ಕಾನ್ಪುರದಲ್ಲಿ ನಡೆದಿದೆ. ಕಾನ್ಪುರದ ದೇಹತ್ ಜಿಲ್ಲೆಯ ಅಕ್ಬರ್​ಪುರ ಪ್ರದೇಶದ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟೆಂಪೋವೊಂದು ಪೊಲೀಸ್​ ಪೇದೆ ಸೇರಿದಂತೆ ಇತರೆ ಮೂರು ಪೊಲೀಸರಿಗೆ ಡಿಕ್ಕಿ ಹೊಡೆದ ಪರಿಣಾಮ ಮದ್ಯ ವ್ಯಸನಿ ಹಾಗೂ ಪೊಲೀಸ್ ಪೇದೆ ಮೃತಪಟ್ಟಿದ್ದು, ಮೂವರು ಪೊಲೀಸರಿಗೆ ಗಾಯಗಳಾಗಿವೆ. ಕುಡಿದು ಮಲಗಿದ್ದ ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ.

ಗಾಯಗೊಂಡ ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ಸಬ್ ಇನ್ಸ್‌ಪೆಕ್ಟರ್ ಮಥುರಾ ಪ್ರಸಾದ್, ಹೆಡ್ ಕಾನ್ಸ್‌ಟೇಬಲ್ ಅರವಿಂದ್ ಕುಮಾರ್ ಮತ್ತು ಕಾನ್‌ಸ್ಟೆಬಲ್‌ಗಳಾದ ಸೌರಭ್ ಕುಮಾರ್ ಮತ್ತು ವಿವೇಕ್ ಕುಮಾರ್ ಅವರೊಂದಿಗೆ ಗಸ್ತು ತಿರುಗುತ್ತಿದ್ದಾಗ ಮಾದಾಪುರ ಸೇತುವೆಯ ಹೆದ್ದಾರಿಯಲ್ಲಿ ಒಬ್ಬ ಕುಡುಕನನ್ನು ಕಂಡಿದ್ದಾನೆ ಅವರನ್ನು ರಕ್ಷಿಸಲು ಹೋಗಿ ಮೃತಪಟ್ಟಿದ್ದಾರೆ ಎಂದು ಹೆಚ್ಚುವರಿ ಎಸ್‌ಪಿ ರಾಜೇಶ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

ಮತ್ತಷ್ಟು ಓದಿ: Bengaluru Accident: ಬೆಂಗಳೂರಿನ ಜಾಲಹಳ್ಳಿ ಕ್ರಾಸ್​​ನಲ್ಲಿ ಬಸ್, ಸ್ಕೂಟರ್ ಅಪಘಾತ; ಪಿಯು ವಿದ್ಯಾರ್ಥಿನಿ ಸಾವು

ಟೆಂಪೋ ಬರುತ್ತಿರುವಾಗ ಪೊಲೀಸರು ತಮ್ಮ ವಾಹನದಿಂದ ಜಿಗಿದಿದ್ದಾರೆ, ಕಾನ್​ಸ್ಟೆಬಲ್ ವಿವೇಕ್ ಕುಡುಕನನ್ನು ಎಳೆಯಲು ಪ್ರಯತ್ನಿಸಿದಾಗ ವೇಗವಾಗಿ ಬಂದ ಲೋಡರ್ ಟೆಂಪೋ ಅವರಿಗೆ ಡಿಕ್ಕಿ ಹೊಡೆದು ಸೇತುವೆಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಇತರೆ ಪೊಲೀಸರಿಗೆ ಕೈ, ಕಾಲು ಮತ್ತು ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು, ಕಾನ್‌ಸ್ಟೆಬಲ್ ಸೌರಭ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿಂದ ರೀಜೆನ್ಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ಸಹರಾನ್‌ಪುರ ಮೂಲದ ಮೃತ ಪೋಲೀಸ್ ವಿವೇಕ್ ಕುಮಾರ್ 2019 ರಲ್ಲಿ ನೇಮಕಗೊಂಡಿದ್ದರು. ಅವರನ್ನು ಅಕ್ಬರ್‌ಪುರ ಪೊಲೀಸ್ ಠಾಣೆಯಲ್ಲಿ ನಿಯೋಜಿಸಲಾಗಿತ್ತು ಎಂದು ಎಎಸ್‌ಪಿ ಸೇರಿಸಲಾಗಿದೆ.

ದೆಹಲಿಯ ನಿವಾಸಿ ಸುರೇಂದ್ರ ಕುಮಾರ್ ಗುಪ್ತಾ (40) ಎಂದು ಗುರುತಿಸಲಾದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ ಮತ್ತು ವಾಹನವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ