AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನೋಟು ಮುದ್ರಣ ಜಾಲ ಪತ್ತೆಗೆ ಮದರಸಾಗೆ ನುಗ್ಗಿದ್ದ ಅಧಿಕಾರಿಗಳಿಗೆ ಸಿಕ್ಕಿದ್ದು ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ

ಉತ್ತರ ಪ್ರದೇಶದಲ್ಲಿನ ಮದರಸಾಗಳ ಭಯೋತ್ಪಾದಕ ಸಂಪರ್ಕದ ಬಗ್ಗೆ ಜನರು ಆಗಾಗ ಆರೋಪಗಳನ್ನು ಮಾಡುತ್ತಿರುತ್ತಾರೆ. ಮದರಸಾವೊಂದರಲ್ಲಿ ನಕಲಿ ನೋಟುಗಳ ಮುದ್ರಣವಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ದಾಳಿ ನಡೆಸಿದ್ದಾರೆ, ಆಗ ಆರ್​ಎಸ್​ಎಸ್​ ಕುರಿತು ವಿವಾದಾತ್ಮಕ ಪುಸ್ತಕ ಸಿಕ್ಕಿದೆ.

ನಕಲಿ ನೋಟು ಮುದ್ರಣ ಜಾಲ ಪತ್ತೆಗೆ ಮದರಸಾಗೆ ನುಗ್ಗಿದ್ದ ಅಧಿಕಾರಿಗಳಿಗೆ ಸಿಕ್ಕಿದ್ದು ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ
ಮದರಸಾ
ನಯನಾ ರಾಜೀವ್
|

Updated on: Sep 04, 2024 | 10:33 AM

Share

ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಮೇರೆಗೆ ಮದರಸಾಗೆ ಶೋಧಕ್ಕೆಂದು ಹೋಗಿದ್ದ ಅಧಿಕಾರಿಗಳಿಗೆ ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ ಸಿಕ್ಕಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಘಟನೆ ನಡೆದಿದೆ, ಆಗಸ್ಟ್ 28ರಂದು ಅತರ್ಸುಯ್ಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜೊತೆಗೆ, ಪೊಲೀಸರು ಪುಸ್ತಕವನ್ನು ಪತ್ತೆ ಮಾಡಿದರು.

ಆರ್​ಎಸ್​ಎಸ್​ ದಿ ಬಿಗ್ಗೆಸ್ಟ್ ಟೆರರಿಸ್ಟ್​ ಆರ್ಗನೈಸೇಷನ್ ಇನ್​ ದಿ ಕಂಟ್ರಿ(RSS: The Biggest Terrorist Organization in the Country) ಎನ್ನುವ ಪುಸ್ತಕವನ್ನು ಉರ್ದುವಿನಿಂದ ಹಿಂದಿಗೆ ತರ್ಜುಮೆ ಮಾಡಲಾಗಿದೆ. ಈ ಪುಸ್ತಕವನ್ನು ಎಸ್​ಎಂ ಮುಷರಫ್​ ಎಂಬುವವರು ಬರೆದಿದ್ದಾರೆ.

ಮದರಸಾದಲ್ಲಿ ಆರ್​ಎಸ್​ಎಸ್​ ವಿರುದ್ಧ ಮಕ್ಕಳಲ್ಲಿ ವಿಷಬೀಜ ಬಿತ್ತಲು ಮೌಲ್ವಿ ಮೊಹಮ್ಮದ್ ತಫ್ಸೀರುಲ್ ಅರಿಫೀನ್​ ಈ ಪುಸ್ತಕವನ್ನು ಬಳಕೆ ಮಾಡುತ್ತಿರಬಹುದು ಎಂದು ಅನುಮಾನಿಸಲಾಗಿದೆ.

ಮತ್ತಷ್ಟು ಓದಿ: ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ

ಅವರ ಲೇಖನ ಪಾಕಿಸ್ತಾನದ ಡಾನ್ ಪತ್ರಿಕೆಯಲ್ಲಿಯೂ ಪ್ರಕಟವಾಗಿದೆ. ಮದರಸಾದಲ್ಲಿ ಈ ಪುಸ್ತಕ ಪತ್ತೆಯಾದ ನಂತರ ಭದ್ರತಾ ಏಜೆನ್ಸಿಗಳು ಎಚ್ಚೆತ್ತಿವೆ.  ಅವರ ಬಳಿಯಿಂದ 1 ಲಕ್ಷ ರೂಪಾಯಿಯ ನಕಲಿ ನೋಟುಗಳು ಮತ್ತು ಮುದ್ರಣಕ್ಕೆ ಬಳಸಲಾದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ