AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಕತ್ತು ಸೀಳಿದ ಸ್ಥಿತಿಯಲ್ಲಿ ಒಬಿಸಿ ನಾಯಕಿಯ ಶವ ಪತ್ತೆ

ಜಮೀನು ವಿವಾದದ ಹಿನ್ನೆಲೆಯಲ್ಲಿ ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ ನಾಯಕಿಯನ್ನು ಹತ್ಯೆ ಮಾಡಲಾಗಿದೆ.

ಉತ್ತರ ಪ್ರದೇಶ: ಕತ್ತು ಸೀಳಿದ ಸ್ಥಿತಿಯಲ್ಲಿ ಒಬಿಸಿ ನಾಯಕಿಯ ಶವ ಪತ್ತೆ
ಅಪರಾಧ
ನಯನಾ ರಾಜೀವ್
|

Updated on: Mar 11, 2024 | 11:31 AM

Share

ಓಂ ಪ್ರಕಾಶ್ ರಾಜ್‌ಭರ್ ಅವರ ಸುಹೇಲ್‌ದೇವ್ ಭಾರತೀಯ ಸಮಾಜ ಪಕ್ಷದ (ಎಸ್‌ಬಿಎಸ್‌ಪಿ) ಸ್ಥಳೀಯ ನಾಯಕಿ ನಂದಿನಿ ರಾಜ್‌ಭರ್ ಅವರನ್ನು ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕತ್ತು ಕೊಯ್ದು ಹತ್ಯೆ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಭಾನುವಾರ ಅವರ ಮನೆಯಲ್ಲೇ ಕೊಲೆ ನಡೆದಿದೆ. ಕೊಲೆ ಪ್ರಕರಣದಲ್ಲಿ ಪೊಲೀಸರು ಐವರನ್ನು ಆರೋಪಿಗಳೆಂದು ಹೆಸರಿಸಿದ್ದು, ಈ ಪೈಕಿ ಮೂವರು – ಆನಂದ್ ಯಾದವ್, ಧ್ರುವ ಚಂದ್ರ ಯಾದವ್ ಮತ್ತು ಒಬ್ಬ ಮಹಿಳೆಯನ್ನು ಬಂಧಿಸಲಾಗಿದೆ.

ಮಾಹಿತಿ ಪ್ರಕಾರ ನಂದಿನಿ ರಾಜ್‌ಭರ್ ಅವರ ಪತಿಯ ಚಿಕ್ಕಪ್ಪ ಬಾಲಕೃಷ್ಣ ಎಂಬುವರಿಗೆ ಸೇರಿದ ಜಾಗವನ್ನು ಸ್ಥಳೀಯ ಭೂಮಾಫಿಯಾ ಅಕ್ರಮವಾಗಿ ವಶಪಡಿಸಿಕೊಂಡಿದ್ದು, ಅದರ ಸಂಪೂರ್ಣ ಹಣವನ್ನು ಪಾವತಿಸದೆ ಅದನ್ನು ನೋಂದಾಯಿಸಿದ್ದರು. ಇದರಿಂದಾಗಿ ಫೆ.29ರಂದು ಬಾಲಕೃಷ್ಣ ಆತ್ಮಹತ್ಯೆ ಮಾಡಿಕೊಂಡಿದ್ದು, ರೈಲ್ವೆ ಹಳಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಮತ್ತಷ್ಟು ಓದಿ: ಕೋಪದಲ್ಲಿ ಮಗನನ್ನು ಹುಚ್ಚ ಎಂದು ಕರೆದಿದ್ದಕ್ಕೆ ತಾಯಿಯನ್ನೇ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ಮೂವರು ಭೂ ಮಾಫಿಯಾಗಳಾದ ಶ್ರವಣ್ ಯಾದವ್, ಧ್ರುವ ಚಂದ್ರ ಯಾದವ್ ಮತ್ತು ಪನ್ನೆ ಲಾಲ್ ಯಾದವ್ ಮಾಡಿರುವ ವಂಚನೆಯ ವಿರುದ್ಧ ನಂದಿನಿ ರಾಜ್‌ಭರ್ ಮತ್ತು ಬಾಲಕೃಷ್ಣ ಲಾಬಿ ನಡೆಸುತ್ತಿದ್ದರು. ಪನ್ನೆ ಲಾಲ್ ಯಾದವ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಯಿತು. ಕೊಲೆಯಾಗುವ ಮುನ್ನ ನಂದಿನಿ ರಾಜ್‌ಭರ್‌ ಅವರು ಬಾಲಕೃಷ್ಣ ಅವರ ಜಮೀನನ್ನು ವಶಪಡಿಸಿಕೊಂಡಿರುವರನ್ನು ಬಂಧಿಸುವಂತೆ ಒತ್ತಾಯಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ