AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಹಳ್ಳಿಯಲ್ಲಿ ರುಂಡ, ಮತ್ತೊಂದು ಹಳ್ಳಿಯಲ್ಲಿ ದೇಹದ ಇತರೆ ಭಾಗಗಳು ಪತ್ತೆ

ಐದು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ದೇಹದ ಭಾಗಗಳು ಎರಡು ಹಳ್ಳಿಗಳಲ್ಲಿ ಪತ್ತೆಯಾಗಿವೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಯುವಕನ ಶವವನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಖೈರಿ ಗ್ರಾಮದ ಹೊಲದಿಂದ ಯುವಕನ ಮುಂಡ ಪತ್ತೆಯಾಗಿದ್ದು, ನಯಿ ಪೂರ್ವಾ ಎಂಬ ಮತ್ತೊಂದು ಹಳ್ಳಿಯಿಂದ ಆತನ ರುಂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

ಒಂದು ಹಳ್ಳಿಯಲ್ಲಿ ರುಂಡ, ಮತ್ತೊಂದು ಹಳ್ಳಿಯಲ್ಲಿ ದೇಹದ ಇತರೆ ಭಾಗಗಳು ಪತ್ತೆ
ಸಾವು Image Credit source: Newsx
ನಯನಾ ರಾಜೀವ್
|

Updated on: Mar 16, 2025 | 12:29 PM

Share

ಉತ್ತರ ಪ್ರದೇಶ, ಮಾರ್ಚ್​ 16: ಐದು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ದೇಹದ ಭಾಗಗಳು ಎರಡು ಹಳ್ಳಿಗಳಲ್ಲಿ ಪತ್ತೆಯಾಗಿವೆ. ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಯುವಕನ ಶವವನ್ನು ವಿವಿಧ ಸ್ಥಳಗಳಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಖೈರಿ ಗ್ರಾಮದ ಹೊಲದಿಂದ ಯುವಕನ ಮುಂಡ ಪತ್ತೆಯಾಗಿದ್ದು, ನಯಿ ಪೂರ್ವಾ ಎಂಬ ಮತ್ತೊಂದು ಹಳ್ಳಿಯಿಂದ ಆತನ ರುಂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವ ಪತ್ತೆಯಾದ ನಂತರ, ಕುಟುಂಬ ಸದಸ್ಯರು ಕೊಲೆಯ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಸ್ತುತ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೊತ್ವಾಲಿ (ನಗರ) ಉಸ್ತುವಾರಿ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಮಿಶ್ರಾ ಭಾನುವಾರ ಘಟನೆಯ ಬಗ್ಗೆ ಮಾಹಿತಿ ನೀಡಿದರು. ದತ್ ನಗರದ ನಿವಾಸಿ ಇಂದ್ರಭಾನ್ ಅಲಿಯಾಸ್ ಛೋಟು ಸಿಂಗ್ (25) ಕಳೆದ ಐದು ದಿನಗಳಿಂದ ಕಾಣೆಯಾಗಿದ್ದಾನೆ ಎಂದು ಅವರು ಹೇಳಿದರು.

ಮತ್ತಷ್ಟು ಓದಿ: 4 ಎಸೆತಗಳಲ್ಲಿ 20 ರನ್ ಚಚ್ಚಿ ಮ್ಯಾಚ್​​ ಗೆಲ್ಲಿಸಿದ್ದಕ್ಕೆ ಕೊಲೆ? ಯುವಕ ಸಾವಿನ ಸುತ್ತ ಅನುಮಾನಗಳ ಹುತ್ತ!

ಅವರು ಕಣ್ಮರೆಯಾದ ನಂತರ, ಅವರ ಕುಟುಂಬ ಸದಸ್ಯರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದರು. ದೂರು ಸ್ವೀಕರಿಸಿದ ನಂತರ ಪೊಲೀಸ್ ತಂಡವೂ ಆತನನ್ನು ಹುಡುಕುತ್ತಿತ್ತು. ಶನಿವಾರ ಸಂಜೆ, ದತ್ ನಗರ ಮತ್ತು ಖೈರಿ ಗ್ರಾಮದ ನಡುವಿನ ಹೊಲದಲ್ಲಿ ಗ್ರಾಮಸ್ಥರು ಮೃತ ದೇಹವನ್ನು ನೋಡಿದರು. ವಿವಿಧ ಸ್ಥಳಗಳಲ್ಲಿ ಯುವಕನ ದೇಹದ ಭಾಗಗಳು ದೊರೆತಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ.

ಪೊಲೀಸರು ಪಂಚನಾಮವನ್ನು ಭರ್ತಿ ಮಾಡಿ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಉಸ್ತುವಾರಿ ಇನ್ಸ್‌ಪೆಕ್ಟರ್ ಸಂತೋಷ್ ಮಿಶ್ರಾ ತಿಳಿಸಿದ್ದಾರೆ. ಕೊಲೆಯ ಶಂಕೆ ವ್ಯಕ್ತಪಡಿಸಿ ಕುಟುಂಬ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ