AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು
ಸೂಜಿImage Credit source: NDTV
ನಯನಾ ರಾಜೀವ್
|

Updated on: Oct 01, 2024 | 9:54 AM

Share

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ಮನೆಗೆ ಹಿಂದಿರುಗಿದ ಯುವತಿಗೆ ನೋವಿನಿಂದ ಕಿರುಚಾಡಲು ಶುರು ಮಾಡಿದ್ದಳು, ಕೂಡಲೇ ಆಕೆಯನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿದ್ದ ವೈದ್ಯರು ಆಕೆಯ ಬ್ಯಾಂಡೇಜ್ ತೆಗೆದು ಗಾಯದ ಮೇಲಿದ್ದ ಸೂಜಿಯನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದನ್ನು ತೆಗೆದ ಬಳಿಕ ಆಕೆಗೆ ಸ್ವಲ್ಪ ಸಮಾಧಾನವಾಗಿದೆ.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಪಾನಮತ್ತರಾಗಿದ್ದರು ಎಂದು ಯುವತಿಯ ತಾಯಿ ಹೇಳಿದ್ದಾರೆ. ಯಾರೂ ಕೂಡ ಅಲ್ಲಿಗೆ ಹೋಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಹಾಪುರ್ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ ಸುನಿಲ್ ತ್ಯಾಗಿ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆಯ ಬಗ್ಗೆ ನಮಗೆ ತಿಳಿದಿದೆ. ದ್ವಿಸದಸ್ಯ ತಂಡದಿಂದ ತನಿಖೆಗೆ ಆದೇಶಿಸಿದ್ದೇವೆ, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮತ್ತಷ್ಟು ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಪಾನಮತ್ತರಾಗಿದ್ದರು ಎನ್ನುವ ವಿಚಾರದ ಕುರಿತು ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅಂತಹ ವೈದ್ಯರಿಲ್ಲ, ತನಿಕೆ ನಡೆಸುತ್ತೇವೆ ಎಂದರು.

ರೋಗಿಯ ದೇಹದಲ್ಲಿ ಉಳಿದಿರುವ ಶಸ್ತ್ರಚಿಕಿತ್ಸಾ ಸೂಜಿಗಳು ದೀರ್ಘಕಾಲದ ನೋವು, ಗಾಯ ಹೆಚ್ಚಾಗುವುದು ಸೇರಿದಂತೆ ಮೆದುಳಿಗೂ ಗಾಯಗಳನ್ನುಂಟುಮಾಡುವ ಸಾಧ್ಯತೆ ಇತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!