AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು
ಸೂಜಿImage Credit source: NDTV
ನಯನಾ ರಾಜೀವ್
|

Updated on: Oct 01, 2024 | 9:54 AM

Share

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ಮನೆಗೆ ಹಿಂದಿರುಗಿದ ಯುವತಿಗೆ ನೋವಿನಿಂದ ಕಿರುಚಾಡಲು ಶುರು ಮಾಡಿದ್ದಳು, ಕೂಡಲೇ ಆಕೆಯನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿದ್ದ ವೈದ್ಯರು ಆಕೆಯ ಬ್ಯಾಂಡೇಜ್ ತೆಗೆದು ಗಾಯದ ಮೇಲಿದ್ದ ಸೂಜಿಯನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದನ್ನು ತೆಗೆದ ಬಳಿಕ ಆಕೆಗೆ ಸ್ವಲ್ಪ ಸಮಾಧಾನವಾಗಿದೆ.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಪಾನಮತ್ತರಾಗಿದ್ದರು ಎಂದು ಯುವತಿಯ ತಾಯಿ ಹೇಳಿದ್ದಾರೆ. ಯಾರೂ ಕೂಡ ಅಲ್ಲಿಗೆ ಹೋಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಹಾಪುರ್ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ ಸುನಿಲ್ ತ್ಯಾಗಿ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆಯ ಬಗ್ಗೆ ನಮಗೆ ತಿಳಿದಿದೆ. ದ್ವಿಸದಸ್ಯ ತಂಡದಿಂದ ತನಿಖೆಗೆ ಆದೇಶಿಸಿದ್ದೇವೆ, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮತ್ತಷ್ಟು ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಪಾನಮತ್ತರಾಗಿದ್ದರು ಎನ್ನುವ ವಿಚಾರದ ಕುರಿತು ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅಂತಹ ವೈದ್ಯರಿಲ್ಲ, ತನಿಕೆ ನಡೆಸುತ್ತೇವೆ ಎಂದರು.

ರೋಗಿಯ ದೇಹದಲ್ಲಿ ಉಳಿದಿರುವ ಶಸ್ತ್ರಚಿಕಿತ್ಸಾ ಸೂಜಿಗಳು ದೀರ್ಘಕಾಲದ ನೋವು, ಗಾಯ ಹೆಚ್ಚಾಗುವುದು ಸೇರಿದಂತೆ ಮೆದುಳಿಗೂ ಗಾಯಗಳನ್ನುಂಟುಮಾಡುವ ಸಾಧ್ಯತೆ ಇತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!