AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Election 2022: ದೀವಾರ್ ಸಿನಿಮಾ ಡೈಲಾಗ್​​ನಂತೆ ಮೇರೆ ಪಾಸ್ ಬಹನೇ ಹೈ ಎಂದ ಪ್ರಿಯಾಂಕಾ ಗಾಂಧಿ

Priyanka Gandhi ಸುದ್ದಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ ಮೇರೆ ಪಾಸ್ ಬಹನೇ ಹೈ, ಬಹನೇ ರಾಜ್​ನೀತಿ ಮೈ ಬದಲಾಂವ್ ಲಾಯೇಗೀ ಎಂದಿದ್ದಾರೆ.

Uttar Pradesh Election 2022: ದೀವಾರ್ ಸಿನಿಮಾ ಡೈಲಾಗ್​​ನಂತೆ ಮೇರೆ ಪಾಸ್ ಬಹನೇ ಹೈ ಎಂದ ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Dec 22, 2021 | 4:39 PM

Share

ಲಖನೌ: ಉತ್ತರ ಪ್ರದೇಶದ ಚುನಾವಣೆಯಲ್ಲಿ (Uttar Pradesh) ಕಾಂಗ್ರೆಸ್ (Congress) ಪ್ರಚಾರ ಘೋಷಣೆಯಾದ ‘ಲಡ್ಕಿ ಹೂಂ, ಲಡ್ ಸಕ್ತಿ ಹೂಂ’(ಹೆಣ್ಣು ನಾನು, ಹೋರಾಡಬಲ್ಲೆ) ವಿರುದ್ಧದ ಟೀಕೆಗಳಿಂದ ವಿಚಲಿತರಾಗದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi), ಮುಂಬರುವ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವೇ ಕಾಂಗ್ರೆಸ್‌ನ ಪ್ರಮುಖ ಶಕ್ತಿಯಾಗಿ ಉಳಿಯಲಿದೆ ಎಂದು ಹೇಳಿದ್ದಾರೆ. ಸುದ್ದಿ ವಾಹಿನಿಯೊಂದಕ್ಕೆ ನೀಡಿದ ವಿಶೇಷ ಸಂದರ್ಶನವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ ಮೇರೆ ಪಾಸ್ ಬಹನೇ ಹೈ, ಬಹನೇ ರಾಜ್​ನೀತಿ ಮೈ ಬದಲಾಂವ್ ಲಾಯೇಗೀ (ನನ್ನ ಬಳಿ ಸಹೋದರಿಯರಿದ್ದಾರೆ. ಸಹೋದರಿಯರು ರಾಜಕೀಯದಲ್ಲಿ ಬದಲಾವಣೆ ತರುತ್ತಾರೆ) ಎಂದು ಹೇಳಿದ್ದಾರೆ.  ವಿಡಿಯೊದಲ್ಲಿ ನಗುತ್ತಾಸಂದರ್ಶಕರೊಂದಿಗೆ ಮಾತನಾಡಿದ  ಪ್ರಿಯಾಂಕಾ 1975 ರ ಬಾಲಿವುಡ್ ಸಿನಿಮಾ ದೀವಾರ್​​ನಲ್ಲಿ ಶಶಿ ಕಪೂರ್‌ ಪಾತ್ರ ನೆನಪಿದೆಯೇ. “ನೀವು ಆ ಡೈಲಾಗ್ ಕೇಳಿದ್ದೀರಾ? ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಮತ್ತು ಶಶಿ ಕಪೂರ್ ಸಹೋದರರಾಗಿದ್ದರು. ಅಮಿತಾಬ್ ಬಚ್ಚನ್ ಶಶಿ ಕಪೂರ್‌ಗೆ ‘ಮೇರೆ ಪಾಸ್ ಗಾಡಿ ಹೈ , ಬಂಗಲಾ ಹೈ, ಯೇ ಹೈ, ವೋ ಹೈ’ ಎಂದು ಹೇಳುತ್ತಾರೆ. ಆಗ ಶಶಿ ಕಪೂರ್, ‘ಮೇರೆ ಪಾಸ್ ಮಾ ಹೈ’ ಎಂದು ಹೇಳುತ್ತಾರೆ. ಹಾಗಾಗಿ, ನಾನು ಕೂಡ ‘ಮೇರೆ ಪಾಸ್ ಬಹೆನ್ ಹೈ’ ಎಂದು ಹೇಳುತ್ತಿದ್ದೇನೆ ಎಂದಿದ್ದಾರೆ.

ಮಹಿಳಾ ಮತದಾರರಿಗೆ ಆದ್ಯತೆ ನೀಡಿ, ಕಾಂಗ್ರೆಸ್ ಈ ಬಾರಿ ಉತ್ತರ ಪ್ರದೇಶಕ್ಕೆ ಮಹಿಳಾ ಪ್ರಣಾಳಿಕೆಯನ್ನು ಹೊರತಂದಿದೆ. ಪಕ್ಷವು ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಶೇ 40 ಕೋಟಾವನ್ನು ಭರವಸೆ ನೀಡಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ತೆರಿಗೆ ರಿಯಾಯಿತಿ ಮತ್ತು ಇತರ ಸೌಲಭ್ಯಗಳನ್ನು ಪಕ್ಷವು ಭರವಸೆ ನೀಡಿದೆ. ಮಹಿಳಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಮುನ್ನ ಪಕ್ಷವು 12 ಉತ್ತೀರ್ಣರಾದ ಬಾಲಕಿಯರಿಗೆ ಸ್ಮಾರ್ಟ್‌ಫೋನ್ ಮತ್ತು ಎಲ್ಲಾ ಪದವೀಧರ ಬಾಲಕಿಯರಿಗೆ ಸ್ಕೂಟಿ ನೀಡುವುದಾಗಿ ಭರವಸೆ ನೀಡಿತ್ತು. ಕಾಂಗ್ರೆಸ್‌ನ ಘೋಷಣೆಯನ್ನು ಲೇವಡಿ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ, “ಘರ್ ಪರ್ ಲಡ್ಕಾ ಹೈ ಪರ್ ಲಡ್ ನಹೀನ್ ಸಕ್ತಾ (ಮನೆಯಲ್ಲಿ ಹುಡುಗನಿದ್ದಾನೆ ಆದರೆ ಆತ ಹೋರಾಡಲಾರ) ಎಂದು ಹೇಳಿದ್ದರು. ಮಹಿಳಾ ಸಬಲೀಕರಣದ ಮೇಲೆ ಕಾಂಗ್ರೆಸ್‌ನ ಗಮನವು ಇತರ ಪಕ್ಷಗಳು ಮಹಿಳೆಯರ ಬಗ್ಗೆ ಮಾತನಾಡುವಂತೆ ಮಾಡಿದೆ ಎಂದು ಪ್ರಿಯಾಂಕಾ ಇತ್ತೀಚೆಗೆ ಹೇಳಿದ್ದಾರೆ. “ನನ್ನ ಉಪಕ್ರಮದ ಪ್ರಭಾವ ಎಷ್ಟರಮಟ್ಟಿಗಿತ್ತು ಎಂದರೆ ಈಗ ಎಲ್ಲಾ ರಾಜಕೀಯ ಪಕ್ಷಗಳು ಮಹಿಳೆಯರ ಬಗ್ಗೆ ಮಾತನಾಡುತ್ತಿವೆ. ನಾಳೆಯ ನಂತರ ಪ್ರಧಾನ ಮಂತ್ರಿಗಳು ಮಹಿಳೆಯರನ್ನು ಮಾತ್ರ ಆಹ್ವಾನಿಸುವ ಸಾರ್ವಜನಿಕ ಸಭೆ ನಡೆಸಲಿದ್ದಾರೆ. ಈಗ ಎಲ್ಲಾ ರಾಜಕೀಯ ಪಕ್ಷಗಳು ಮಹಿಳೆಯರ ಬಗ್ಗೆ ಮಾತನಾಡಲು ಪ್ರಾರಂಭಿಸಿವೆ ಎಂದು ಪ್ರಿಯಾಂಕಾ ಭಾನುವಾರ ಹೇಳಿದ್ದಾರೆ.

ಇದನ್ನೂ ಓದಿ:  ಪ್ರಿಯಾಂಕಾ ಗಾಂಧಿ ಮಕ್ಕಳ ಇನ್​ಸ್ಟಾಗ್ರಾಂ ಖಾತೆ ಹ್ಯಾಕ್ ಆರೋಪ; ತನಿಖೆಗೆ ಆದೇಶಿಸಿದ ಕೇಂದ್ರ ಸರ್ಕಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ