AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?

ಮಾವ ಬುರ್ಖಾ ಧರಿಸಿ ಸೊಸೆಯ ಮನೆಗೆ ನುಗ್ಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂಭಾಲ್‌ನ ಬನಿಯಾಥೇರಾ ಪೊಲೀಸ್ ಠಾಣೆ ಪ್ರದೇಶದ ನರೌಲಿ ಪಟ್ಟಣದ ತೆಲಿವಾಲಾ ಕುವಾನ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸಲ್ವಾರ್ ಸೂಟ್ ಮತ್ತು ಬುರ್ಖಾ ಧರಿಸಿದ ಮಧ್ಯವಯಸ್ಕ ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಕೊಲೆ(Murder) ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದ ಮತ್ತು ಅವನ ಬಳಿ ಚಾಕು ಕೂಡ ಇತ್ತು.ಅದೃಷ್ಟವಶಾತ್, ಕುಟುಂಬ ಸದಸ್ಯರ ಜಾಗರೂಕತೆ ಮತ್ತು ತಿಳುವಳಿಕೆಯಿಂದಾಗಿ, ಒಂದು ದೊಡ್ಡ ಅನಾಹುತ ತಪ್ಪಿತು.

ಬುರ್ಖಾ ಧರಿಸಿ ಸೊಸೆ ಮನೆಗೆ ನುಗ್ಗಿದ ಮಾವ, ಮುಂದೇನಾಯ್ತು?
ಬುರ್ಖಾ-ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on:May 29, 2025 | 10:54 AM

Share

ಸಂಭಾಲ್, ಮೇ 29: ಮಾವ ಬುರ್ಖಾ ಧರಿಸಿ ಸೊಸೆಯ ಮನೆಗೆ ನುಗ್ಗಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್​ನಲ್ಲಿ ನಡೆದಿದೆ. ಉತ್ತರ ಪ್ರದೇಶದ ಸಂಭಾಲ್‌ನ ಬನಿಯಾಥೇರಾ ಪೊಲೀಸ್ ಠಾಣೆ ಪ್ರದೇಶದ ನರೌಲಿ ಪಟ್ಟಣದ ತೆಲಿವಾಲಾ ಕುವಾನ್ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಸಲ್ವಾರ್ ಸೂಟ್ ಮತ್ತು ಬುರ್ಖಾ ಧರಿಸಿದ  ವ್ಯಕ್ತಿಯೊಬ್ಬ ತನ್ನ ಸೊಸೆಯನ್ನು ಕೊಲೆ(Murder) ಮಾಡುವ ಉದ್ದೇಶದಿಂದ ಮನೆಗೆ ನುಗ್ಗಿದ್ದ ಮತ್ತು ಅವನ ಬಳಿ ಚಾಕು ಕೂಡ ಇತ್ತು.ಅದೃಷ್ಟವಶಾತ್, ಕುಟುಂಬ ಸದಸ್ಯರ ಜಾಗರೂಕತೆಯಿಂದಾಗಿ ದೊಡ್ಡ ಅನಾಹುತ ತಪ್ಪಿದೆ.

ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಕೂಡ ಓಡಿ ಬಂದರು. ನೆರೆಹೊರೆಯವರ ಸಹಾಯದಿಂದ, ಕುಟುಂಬ ಸದಸ್ಯರು ಮನೆಯಲ್ಲಿದ್ದ  ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಪೊಲೀಸರು ಆತನನ್ನು ಬನಿಯಾಥೆರಾ ಪೊಲೀಸ್ ಠಾಣೆಗೆ ಕರೆತಂದರು, ಅಲ್ಲಿ ವ್ಯಕ್ತಿಯನ್ನು ವಿಚಾರಣೆ ನಡೆಸಲಾಗುತ್ತಿದೆ.

ಘಟನೆ ನಡೆದಿದ್ದೆಲ್ಲಿ? ಈ ವಿಚಿತ್ರ ಘಟನೆ ನರೌಲಿ ಪಟ್ಟಣದ ತೆಲಿವಾಲಾ ಕುವಾನ್ ಪ್ರದೇಶದಲ್ಲಿ ನಡೆದಿದ್ದು, ಭೂರಾ ಅವರ ಮಗ ಬಶೀರುದ್ದೀನ್ ಅವರ ಮನೆ ಅಲ್ಲಿಯೇ ಇದೆ. ಬುಧವಾರ ಬೆಳಗ್ಗೆ 10.30 ರ ಸುಮಾರಿಗೆ ಭೂರಾ ತನ್ನ ಹೆಂಡತಿ ಮತ್ತು ಮಗಳೊಂದಿಗೆ ಮನೆಯಲ್ಲಿ ಕುಳಿತಿದ್ದರು. ಅದೇ ಸಮಯದಲ್ಲಿ, ಸಲ್ವಾರ್ ಸೂಟ್ ಮೇಲೆ ಬುರ್ಖಾ ಧರಿಸಿದ ವ್ಯಕ್ತಿಯೊಬ್ಬರು ಮನೆಗೆ ಪ್ರವೇಶಿಸಿದ್ದರು. ಕುಟುಂಬ ಸದಸ್ಯರು ಆತನನ್ನು ಭಿಕ್ಷುಕಿ ಎಂದುಕೊಂಡಿದ್ದರು.  ಮನೆಯವರು ಆತನ ಬಳಿ ಏನು ಬೇಕು ಎಂದು ಕೇಳಿದರು.

ಇದನ್ನೂ ಓದಿ
Image
ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ
Image
ಸುಹಾಸ್​ ಕೊಲೆಯ ಪ್ರತೀಕಾರಕ್ಕೆ ಹಿಂದೂ ಸಮಾಜ ಕಾದು ಕೂತಿದೆ: ಭಜರಂಗದಳ ಮುಖಂಡ
Image
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳ ಬಂಧನ
Image
ಸುಹಾಸ್​ ಶೆಟ್ಟಿ ಹತ್ಯೆ ಪ್ರಕರಣ NIAಗೆ ವಹಿಸುವಂತೆ ರಾಜ್ಯಪಾಲರಿಗೆ BJP ಮನವಿ

ಮತ್ತಷ್ಟು ಓದಿ: ಬಂಟ್ವಾಳ ಅಬ್ದುಲ್ ರಹಿಮಾನ್ ಹತ್ಯೆ ಕೇಸ್​: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ

ಇದ್ದಕ್ಕಿಂದ್ದಂತೆ ಆ ವ್ಯಕ್ತಿ ಚಾಕು ಹಿಡಿದು ಮಹಿಳೆ ಮೇಲೆ ಹಲ್ಲೆಗೆ ಮುಂದಾಗಿದ್ದ. ಇದ್ದವರೆಲ್ಲಾ ಚೀರಾಡಲು ಶುರು ಮಾಡಿದರು. ಆಗ ಅಕ್ಕಪಕ್ಕದ ಮನೆಯವರು ಓಡಿ ಬಂದು ಮಹಿಳೆಯನ್ನು ರಕ್ಷಿಸಿ, ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಆರೋಪಿ ಸ್ವತಃ ತನ್ನ ಮಾವ ಎಂದು ತಿಳಿದು ಮಹಿಳೆಗೆ ಗಾಬರಿಯಾಗಿದೆ. ಆತ ಸೊಸೆಯನ್ನು ಕೊಲ್ಲಲು ಬಯಸಿದ್ದೇಕೆ ಎಂಬುದರ ಕುರಿತು ಸ್ಪಷ್ಟ ಮಾಹಿತಿ ಇಲ್ಲ.ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಝೀ ನ್ಯೂಸ್ ವರದಿ ಮಾಡಿದೆ.

ಫೂಲ್ ಜಹಾನ್ ಅವರ ತಂದೆ ಭೂರಾ ಅವರು ರಾಂಪುರ ಜಿಲ್ಲೆಯ ಸೈಫ್ನಿ ಪೊಲೀಸ್ ಠಾಣೆಯ ಮೊಹಲ್ಲಾ ಇದ್ಗಾ ಕೋಟ್ ನಿವಾಸಿ ಬಜ್ರುಲ್ ಹಸನ್ ವಿರುದ್ಧ ಪೊಲೀಸರಿಗೆ ಲಿಖಿತ ದೂರು ನೀಡಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ದೂರು ಸ್ವೀಕರಿಸಲಾಗಿದೆ ಎಂದು ಹಂಗಾಮಿ ಪೊಲೀಸ್ ಠಾಣೆಯ ಉಸ್ತುವಾರಿ ರವೀಂದ್ರ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಮಾವ ತನ್ನ ಸೊಸೆಯನ್ನೇ ಕೊಲೆ ಮಾಡಲು ನಿರ್ಧರಿಸಿದ ಘಟನೆಯ ಬಗ್ಗೆ ತಿಳಿದು ಜನರು ಆಘಾತಕ್ಕೊಳಗಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:51 am, Thu, 29 May 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ