AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು, ಹಲವು ಕಾರ್ಮಿಕರಿಗೆ ಗಾಯ

ಉತ್ತರ ಪ್ರದೇಶದ ಕೌಶಂಬಿಯಲ್ಲಿ ಭಾರೀ ಅಪಘಾತ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, 4 ಮಂದಿ ಸಾವನ್ನಪ್ಪಿದ್ದಾರೆ. ಈ ಅಪಘಾತದ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದಿದ್ದಾರೆ.

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು, ಹಲವು ಕಾರ್ಮಿಕರಿಗೆ ಗಾಯ
ಸ್ಫೋಟ
ನಯನಾ ರಾಜೀವ್
|

Updated on: Feb 25, 2024 | 2:08 PM

Share

ಉತ್ತರ ಪ್ರದೇಶ(Uttar Pradesh)ದ ಕೌಶಂಬಿಯಲ್ಲಿರುವ ಪಟಾಕಿ ಕಾರ್ಖಾನೆ(Firecracker Factory) ಯಲ್ಲಿ ಭಾನುವಾರ ಸ್ಫೋಟ ಸಂಭವಿಸಿದೆ. ಜಿಲ್ಲೆಯ ಕೊಖ್ರಾಜ್ ಪೊಲೀಸ್ ಠಾಣೆ ವ್ಯಾಪ್ತಿಯ ಭಾರ್ವಾರಿ ಪಟ್ಟಣದ ಶರಾಫತ್ ಅಲಿಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯರಿಂದ ಬಂದ ಮಾಹಿತಿ ಪ್ರಕಾರ ಇಲ್ಲಿ ಮದುವೆಗೆ ಪಟಾಕಿ ತಯಾರಿಸಲಾಗುತ್ತಿತ್ತು. ಈ ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ತಕ್ಷಣ ಎಸ್ಪಿ ಮತ್ತು ಅನೇಕ ಪೊಲೀಸ್ ಠಾಣೆಗಳ ಪೊಲೀಸರು ಅಲ್ಲಿಗೆ ತಲುಪಿದ್ದಾರೆ.

ಎಸ್ಪಿ ಬ್ರಿಜೇಶ್ ಶ್ರೀವಾಸ್ತವ ಸೇರಿದಂತೆ ಹಲವು ಪೊಲೀಸ್ ಠಾಣೆಗಳ ಪಡೆಗಳು ಘಟನಾ ಸ್ಥಳದಲ್ಲಿದ್ದಾರೆ. ಈ ಘಟನೆ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಕೂಡ ಮಾಹಿತಿ ಪಡೆದಿದ್ದಾರೆ. ಈ ಘಟನೆ ಕುರಿತು ಮುಖ್ಯಮಂತ್ರಿಗಳಿಗೆ ವಿವರವಾದ ಮಾಹಿತಿ ನೀಡಲಾಗಿದೆ. ಮೃತರ ಕುಟುಂಬಕ್ಕೆ ಸಿಎಂ ಯೋಗಿ ಸಂತಾಪ ಸೂಚಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗಾಯಾಳುಗಳು ಆಸ್ಪತ್ರೆಗೆ ದಾಖಲು  ಈ ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ಎಸ್ಪಿ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸ್ಥಳೀಯ ಜನರ ಪ್ರಕಾರ, ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟವು ಎಷ್ಟು ಭೀಕರವಾಗಿದೆ ಎಂದರೆ ಪಟಾಕಿಗಳ ತುಂಡುಗಳು ಹಲವಾರು ಕಿಲೋಮೀಟರ್ ದೂರ ಹಾರಿಹೋಗಿವೆ. ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಎಸ್ಪಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಮಾತನಾಡಿ, ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಘಾತದಲ್ಲಿ 5 ಜನರು ಸಾವನ್ನಪ್ಪಿದ್ದಾರೆ, ಕೆಲವರು ಗಾಯಗೊಂಡಿದ್ದಾರೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮತ್ತಷ್ಟು ಓದಿ: West Bengal: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆ ಸ್ಫೋಟ, ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಈ ಘಟನೆಯಲ್ಲಿ ಇನ್ನೂ ಹಲವು ಮಂದಿ ಸಿಲುಕಿದ್ದು, ರಕ್ಷಿಸಲಾಗುತ್ತಿದೆ. ಪೊಲೀಸರು ಮತ್ತು ಸ್ಥಳೀಯ ರಕ್ಷಕರು ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿದ್ದಾರೆ. ಈ ಕಾರ್ಖಾನೆಯು ಪ್ರಯಾಗರಾಜ್ ಕಾನ್ಪುರ ಹೆದ್ದಾರಿಯ ಸಮೀಪದಲ್ಲಿದೆ. ಈ ಸ್ಫೋಟದ ಸದ್ದು ದೂರಕ್ಕೆ ಕೇಳಿಸಿತ್ತು ಎಂದು ಸ್ಥಳೀಯರು ಹೇಳುತ್ತಾರೆ. ಘಟನೆಯಿಂದ ಸಿಟ್ಟಿಗೆದ್ದ ಜನರು ಅಲ್ಲಿನ ಆಡಳಿತದ ವಿರುದ್ಧವೂ ಪ್ರತಿಭಟನೆ ನಡೆಸಿದ್ದಾರೆ. ಈ ಕಾರ್ಖಾನೆಯು ಕೌಶಲ್ ಅಲಿ ಎಂಬ ವ್ಯಕ್ತಿಯ ಒಡೆತನದಲ್ಲಿದೆ ಎಂದು ಹೇಳಲಾಗುತ್ತದೆ.

ಸ್ಥಳದ ವಿಡಿಯೋ

ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿದ್ದು, ಕಾರ್ಖಾನೆಯೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸುವ ಪ್ರಯತ್ನಗಳು ನಡೆಯುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?