AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಕಣ್ಣು ತೆರೆದ ಬಿಜೆಪಿ ಮುಖಂಡ

ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು.

ಇನ್ನೇನು ಅಂತ್ಯಕ್ರಿಯೆ ನಡೆಸಬೇಕು ಅನ್ನುವಷ್ಟರಲ್ಲಿ ಕಣ್ಣು ತೆರೆದ ಬಿಜೆಪಿ ಮುಖಂಡ
ಮಹೇಶ್​ ಬಾಘೇಲ್
ನಯನಾ ರಾಜೀವ್
|

Updated on:Aug 08, 2023 | 10:58 AM

Share

ಉತ್ತರ ಪ್ರದೇಶದ ಆಗ್ರಾದಲ್ಲಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷ ಮಹೇಶ್ ಬಾಘೇಲ್ ಅವರ ಆರೋಗ್ಯ ತೀವ್ರ ಹದಗೆಟ್ಟಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ವಲ್ಪ ಸಮಯದ ನಂತರ ವೈದ್ಯರು ಬಾಘೇಲ್ ಅವರು ಮೃತಪಟ್ಟಿದ್ದಾರೆ, ಶವವನ್ನು ಮನೆಗೆ ತೆಗೆದುಕೊಂಡು ಹೋಗಿ ಎಂದು ಹೇಳಿಬಿಟ್ಟರು. ಮನೆಯವರೆಲ್ಲರೂ ದುಃಖವನ್ನು ಕಣ್ಣಲ್ಲಿ ತುಂಬಿಕೊಂಡು ಮನೆಗೆ ಹೊರಟರು, ಮನೆಯಲ್ಲಿ ಅಂತ್ಯಕ್ರಿಯೆಗೆ ತಯಾರಿ ನಡೆಯುತ್ತಿತ್ತು, ಆ ಸಮಯದಲ್ಲಿ ಬಾಘೇಲ್ ಅವರ ದೇಹದಲ್ಲಿ ಚಲನವಲಗಳು ಕಾಣಿಸಿತ್ತು. ಈಗ ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಆರೋಗ್ಯ ಸ್ಥಿರವಾಗಿದೆ.

ಬಾಘೇಲ್ ಕಣ್ಣು ತೆರೆದಾಗ ಸಂಬಂಧಿಕರು ರೋದಿಸುತ್ತಿದ್ದರು ಮತ್ತು ಅವರ ದೇಹದಲ್ಲಿ ಚಲನೆ ಕಂಡುಬಂದಿತ್ತು. ಇದನ್ನು ಕಂಡು ಖುಷಿ ಪಟ್ಟ ಸಂಬಂಧಿಕರು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡುತ್ತಿದ್ದಾರೆ. ಸಹೋದರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಬಾಘೆಲ್ ಅವರ ಕಿರಿಯ ಸಹೋದರ ಲಖನ್ ಸಿಂಗ್ ಬಾಘೇಲ್ ತಿಳಿಸಿದ್ದಾರೆ. ಬಿಪಿ ಸಹಜ ಸ್ಥಿತಿಯೊಲ್ಲಿದೆ ಎಂದರು. ಉತ್ತಮ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯವಾಗಿದ್ದಾರೆ ಎಂದು ತಿಳಿಸಿದರು.

ಮಹೇಶ್ ಬಾಘೇಲ್ ಅವರನ್ನು ಪುಷ್ಪಾಂಜಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಸಂಬಂಧಿಕರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಇದರ ನಂತರ, ಅವರನ್ನು ಸರಾಯ್ ಖ್ವಾಜಾ ಅವರ ನಿವಾಸಕ್ಕೆ ಕರೆದೊಯ್ಯಲಾಯಿತು. ಮನೆ ತಲುಪಿದ ನಂತರ ಪ್ರಜ್ಞೆ ಬಂದು ಕಣ್ಣು ತೆರೆದರು ಎಂದು ಅವರ ಮಕ್ಕಳಾದ ಅಭಿಷೇಕ್ ಮತ್ತು ಅಂಕಿತ್ ಹೇಳಿದ್ದಾರೆ.

ಇದನ್ನು ಕಂಡ ಕುಟುಂಬಸ್ಥರಲ್ಲಿ ಸಂತಸದ aಅಲೆಯೇ ಹರಿದಿತ್ತು,  ಬಾಘೇಲ್ ಅವರ ನಿಧನದ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿ ಎಲ್ಲರೂ ಶ್ರದ್ಧಾಂಜಲಿ ಸಲ್ಲಿಸಲು ಪ್ರಾರಂಭಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:49 am, Tue, 8 August 23

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?