ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಮಧುಮಿತಾ ಶುಕ್ಲಾ ಕೊಲೆ ಪ್ರಕರಣ: 20 ವರ್ಷಗಳ ಬಳಿಕ ಬಿಡುಗಡೆಯಾಗಲಿದ್ದಾರೆ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿ
ಅಮರಮಣಿ
Image Credit source: Indian Express

Updated on: Aug 25, 2023 | 9:22 AM

ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಅಮರಮಣಿ ತ್ರಿಪಾಠಿ ದಂಪತಿಗೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸಿದ್ದು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. ಉತ್ತರ ಪ್ರದೇಶದ ಮಾಜಿ ಸಚಿವ ಅಮರಮಣಿ ಮತ್ತು ಅವರ ಪತ್ನಿ ಮಧುಮಣಿ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಲಾಗಿತ್ತು.

ಸದ್ಯ ಕವಯಿತ್ರಿ ಮಧುಮಿತಾ ಶುಕ್ಲಾ ಕೊಲೆ ಪ್ರಕರಣದಲ್ಲಿ 20 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಸರ್ಕಾರ ಇಬ್ಬರನ್ನೂ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯಪಾಲರ ಅನುಮತಿ ಮೇರೆಗೆ ಕಾರಾಗೃಹ ಆಡಳಿತ ಮತ್ತು ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ.

ಮಾಜಿ ಕ್ಯಾಬಿನೆಟ್ ಸಚಿವ ಅಮರಮಣಿ ತ್ರಿಪಾಠಿ ಮತ್ತು ಅವರ ಪತ್ನಿ ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ಲಕ್ಷ್ಮೀಪುರ ವಿಧಾನಸಭೆಯಿಂದ ಶಾಸಕರಾಗಿದ್ದ ಕವಯಿತ್ರಿ ಮಧುಮಿತಾ ಶುಕ್ಲಾ ಅವರ ಹತ್ಯೆ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾಗಿತ್ತು.

ಮತ್ತಷ್ಟು ಓದಿ: ಮಾಜಿ ಸಂಸದ ಆನಂದ್ ಮೋಹನ್‌ ಜೈಲಿನಿಂದ ಬಿಡುಗಡೆ ಕುರಿತ ದಾಖಲೆಯನ್ನು ನೀಡುವಂತೆ ಬಿಹಾರ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನಂತರ ಅವರಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತು. ಅಮರಮಣಿ ತ್ರಿಪಾಠಿ ಅವರ ಉತ್ತಮ ನಡವಳಿಕೆಯಿಂದಾಗಿ ಅವರ ಉಳಿದ ಶಿಕ್ಷೆಯನ್ನು ಕ್ಷಮಿಸಲಾಗಿದೆ. ಮೇ 9, 2003 ರಂದು, ಖ್ಯಾತ ಕವಯಿತ್ರಿ ಮಧುಮಿತಾ ಶುಕ್ಲಾ ಅವರನ್ನು ಲಕ್ನೋದ ನಿಶಾತ್‌ಗಂಜ್‌ನ ಪೇಪರ್ ಮಿಲ್ ಕಾಲೋನಿಯಲ್ಲಿ ಗುಂಡಿಕ್ಕಿ ಕೊಲ್ಲಲಾಯಿತು.

ಅಂದಿನ ಮುಖ್ಯಮಂತ್ರಿ ಮಾಯಾವತಿ ಈ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು. ತನಿಖೆಯ ಸಮಯದಲ್ಲಿ, ಅಮರಮಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಯಿತು, ನಂತರ ಪ್ರಕರಣವನ್ನು ಡೆಹ್ರಾಡೂನ್‌ನ ತ್ವರಿತ ನ್ಯಾಯಾಲಯಕ್ಕೆ ವರ್ಗಾಯಿಸಲಾಯಿತು. ತನಿಖಾ ಸಂಸ್ಥೆಯು ಅಮರಮಣಿ ಮತ್ತು ಅವರ ಪತ್ನಿ ಮಧುಮಣಿಯನ್ನು ದೋಷಿ ಎಂದು ತೀರ್ಪು ನೀಡಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us