AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು

ಅತ್ಯಾಚಾರಕ್ಕೊಳಗಾದ ಬಾಲಕಿಯ ಶವ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆ ಸಾವನ್ನಪ್ಪಿದ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ.

ಉತ್ತರ ಪ್ರದೇಶದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು, ನೇಣು ಹಾಕಿದ ಪಾಪಿಗಳು
ಅತ್ಯಾಚಾರ
TV9 Web
| Edited By: |

Updated on: Oct 06, 2022 | 12:36 PM

Share

ನವದೆಹಲಿ: ಉತ್ತರ ಪ್ರದೇಶದ ನಾಗ್ಲಾ ಶಿಶಮ್ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮೈನ್‌ಪುರಿ ಕಮಲೇಶ್ ದೀಕ್ಷಿತ್ ಹೇಳಿದ್ದಾರೆ. ನಾಗ್ಲಾ ಶಿಶಮ್ ಗ್ರಾಮದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ (Rape) ಮತ್ತು ಕೊಲೆ (Murder) ನಡೆದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತಕ್ಷಣ ಕ್ರಮ ಕೈಗೊಂಡಿದ್ದಾರೆ. ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಅತ್ಯಾಚಾರಕ್ಕೊಳಗಾದ ಬಾಲಕಿಯ ಶವ ಅನುಮಾನಾಸ್ಪದವಾಗಿ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆಕೆ ಸಾವನ್ನಪ್ಪಿದ ಸಂದರ್ಭದಲ್ಲಿ ಆ ಬಾಲಕಿಯ ತಂದೆ ಕೆಲಸದ ನಿಮಿತ್ತ ಮೈನ್‌ಪುರಿಗೆ ಹೋಗಿದ್ದರು. ಆಕೆಯ ತಾಯಿ ಆಗ್ರಾಕ್ಕೆ ಹೋಗಿದ್ದರು. ಬಾಲಕಿಯ ಕಿರಿಯ ಸಹೋದರಿ ಕೋಚಿಂಗ್‌ನಿಂದ ಹಿಂತಿರುಗಿದಾಗ ಎಷ್ಟು ಬಾಗಿಲು ಬಡಿದರೂ ಯಾರೂ ಬಾಗಿಲು ತೆರೆಯಲಿಲ್ಲ.

ಇದನ್ನೂ ಓದಿ: Uttar Pradesh: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಆಸ್ಪತ್ರೆಗೆ ಕರೆಸಿ ಮಹಿಳೆಯನ್ನು ಅತ್ಯಾಚಾರ ಮಾಡಿದ 3 ವೈದ್ಯರು

ಇದರಿಂದ ಅನುಮಾನಗೊಂಡು ಮನೆಯ ಬಾಗಿಲಿನ ಕಿಟಕಿಯಿಂದ ಹೊರಗೆ ನೋಡಿದಳು. ಆಗ ತನ್ನ ಅಕ್ಕನ ಶವ ನೇತಾಡುತ್ತಿರುವುದು ಕಂಡುಬಂದಿದೆ. ಪೊಲೀಸರು ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿದ್ದಾರೆ.

ಆರೋಪಿ ಪುಷ್ಪೇಂದ್ರ ನನ್ನ ಅಕ್ಕನ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಮೃತ ಬಾಲಕಿಯ ಸಹೋದರಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ