Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾದ ಬಾಲಾಪರಾಧಿಗೃಹದಲ್ಲಿ ಆಘಾತಕಾರಿ ಘಟನೆ, ಮಕ್ಕಳನ್ನು ಮಂಚಕ್ಕೆ ಕಟ್ಟಿ, ಚಪ್ಪಲಿಯಿಂದ ಥಳಿಸುತ್ತಾರೆ ಅಧಿಕಾರಿಗಳು

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ, ಬಾಲಾಪರಾಧಿಗೃಹ(Juvenile Home)ದಲ್ಲಿದ್ದ ಮಕ್ಕಳಿಗೆ ರಕ್ಷಣೆ ನೀಡಬೇಕಿದ್ದ ಸರ್ಕಾರಿ ಅಧಿಕಾರಿಗಳೇ ಮಕ್ಕಳ ಜತೆ ಕ್ರೂರವಾಗಿ ನಡೆದುಕೊಂಡಿದ್ದಾರೆ. ಬಾಲ ಕೈದಿಗಳಾಗಿ ಬಾಲಾಪರಾಧಿಗೃಹಕ್ಕೆ ಬಂದಿರುವ ಮಕ್ಕಳಿಗೆ ಒಳ್ಳೆಯ ನಡತೆ ಕಲಿಸಬೇಕಿದ್ದ ಮಹಿಳಾ ಅಧಿಕಾರಿಯೊಬ್ಬರು ತಮ್ಮ ಜವಾಬ್ದಾರಿ ಮರೆತು ನಡೆದುಕೊಂಡಿದ್ದಾರೆ. ಚಿಕ್ಕ ಮಕ್ಕಳನ್ನು ನಿರ್ದಯವಾಗಿ ಥಳಿಸಿದ್ದಾರೆ.

ಆಗ್ರಾದ ಬಾಲಾಪರಾಧಿಗೃಹದಲ್ಲಿ ಆಘಾತಕಾರಿ ಘಟನೆ, ಮಕ್ಕಳನ್ನು ಮಂಚಕ್ಕೆ ಕಟ್ಟಿ, ಚಪ್ಪಲಿಯಿಂದ ಥಳಿಸುತ್ತಾರೆ ಅಧಿಕಾರಿಗಳು
ಮಕ್ಕಳು
Follow us
ನಯನಾ ರಾಜೀವ್
|

Updated on:Sep 15, 2023 | 8:30 AM

ಉತ್ತರ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ, ಬಾಲಾಪರಾಧಿ ಗೃಹ(Juvenile Home)ದಲ್ಲಿದ್ದ ಮಕ್ಕಳಿಗೆ ರಕ್ಷಣೆ ನೀಡಬೇಕಿದ್ದ ಸರ್ಕಾರಿ ಅಧಿಕಾರಿಗಳೇ ಮಕ್ಕಳ ಜತೆ ಕ್ರೂರವಾಗಿ ನಡೆದುಕೊಂಡಿದ್ದಾರೆ. ಬಾಲ ಕೈದಿಗಳಾಗಿ ಬಾಲಾಪರಾಧಿ ಗೃಹಕ್ಕೆ ಬಂದಿರುವ ಮಕ್ಕಳಿಗೆ ಒಳ್ಳೆಯ ನಡತೆ ಕಲಿಸಬೇಕಿದ್ದ ಮಹಿಳಾ ಅಧಿಕಾರಿಯೊಬ್ಬರು ತಮ್ಮ ಜವಾಬ್ದಾರಿ ಮರೆತು ನಡೆದುಕೊಂಡಿದ್ದಾರೆ. ಚಿಕ್ಕ ಮಕ್ಕಳನ್ನು ನಿರ್ದಯವಾಗಿ ಥಳಿಸಿದ್ದಾರೆ. ಈ ಘಟನೆ ಆಗ್ರಾದಲ್ಲಿ ನಡೆದಿದೆ, ಮಹಿಳಾ ಅಧೀಕ್ಷಕರು ಮಕ್ಕಳಿಗೆ ಥಳಿಸುವ ದೃಶ್ಯಗಳು ಬಾಲಾಪರಾಧಿ ಗೃಹದ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಮಕ್ಕಳು ತಿಳಿದೇ ಯಾವುದೋ ಸಂದರ್ಭದಲ್ಲಿ ತಪ್ಪು ಮಾಡಿರುತ್ತಾರೆ, ಆದರೆ ಅದು ತಪ್ಪು ಎಂದು ಅವರಿಗೆ ಮನವರಿಕೆ ಮಾಡಿ, ಒಳ್ಳೆಯ ನಡತೆಯನ್ನು ಕಲಿಸಬೇಕಿದ್ದ ಅಧಿಕಾರಿಗಳೇ ಇಂಥಾ ತಪ್ಪು ಮಾಡಿದರೆ ಆ ಮಕ್ಕಳ ಭವಿಷ್ಯದ ಗತಿ ಏನು ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.

ಒಂದು ಕೋಣೆಯಲ್ಲಿ 6 ಮಕ್ಕಳು ಹಾಸಿಗೆ ಮೇಲೆ ಮಲಗಿದ್ದಾರೆ. ಅಲ್ಲಿಗೆ ಬಂದ ಮೇಲ್ವಿಚಾರಕರು ಹಾಗೂ ಇತರೆ ನೌಕರರು ಮಕ್ಕಳ ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾರೆ. ಮಕ್ಕಳಿಗೆ ಚಪ್ಪಲಿಯಿಂದ ಥಳಿಸಿ, ಪದೇ ಪದೇ ಕಪಾಳಮೋಕ್ಷ ಮಾಡಿದ್ದಾರೆ, ಉಳಿದ ಮಕ್ಕಳನ್ನೂ ನಿಂದಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮಂಗಳವಾರ ಇದೇ ಬಾಲಾಪರಾಧಿಗೃಹದ ಮತ್ತೊಂದು ವಿಡಿಯೋ ಹೊರಬಿದ್ದಿತ್ತು. ಇದರಲ್ಲಿ ಮೇಲ್ವಿಚಾರಕರು 7 ವರ್ಷದ ಬಾಲಕಿಯ ಕೈಕಾಲುಗಳನ್ನು ಹಾಸಿಗೆಗೆ ಕಟ್ಟಿ ಮಲಗಿಸಿದ್ದಾರೆ. ಆಕೆ ಅದನ್ನು ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಳು. ಆದರೆ ಸಾಧ್ಯವಾಗಲಿಲ್ಲ.

ಮತ್ತಷ್ಟು ಓದಿ: ಕುಖ್ಯಾತ ವಿಚಾರಣಾಧೀನ ಕೈದಿ ಸ್ಯಾಂಟ್ರೋ ರವಿ ಮೈಸೂರು ಜೈಲಿನಲ್ಲಿ ಅಧಿಕಾರಿಗಳಿಗೆ ಬಾಯಿಗೆ ಬಂದಂತೆ ಬೈತಾನಂತೆ!

ಈ ಎರಡು ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಧಿಕಾರಿಯ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬಾಲಾಪರಾಧಿ ಗೃಹದಲ್ಲಿರುವ ಮಕ್ಕಳ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಎರಡೂ ಘಟನೆಗಳ ಬಗ್ಗೆ ಉನ್ನತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ, ಕ್ರೂರವಾಗಿ ವರ್ತಿಸಿದ ಅಧಿಕಾರಿ ಪೂನಂ ಪಾಲ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಕೆಲವು ದಿನಗಳ ಹಿಂದೆ ಆ ಮನೆಯಲ್ಲಿ ಬಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದ, ಅಲ್ಲಿ ಮಕ್ಕಳನ್ನು ಕ್ರೂರವಾಗಿ ನಡೆಸಿಕೊಂಡಿರುವುದು ಅಧಿಕಾರಿಗಳ ತನಿಖೆಯಿಂದ ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:30 am, Fri, 15 September 23

ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?