AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿಯಲ್ಲಿ ಸಿಲಿಂಡರ್​ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರೈಲನ್ನು ಉರುಳಿಸುವ ಸಂಚು ನಡೆದಿದೆ. ಕಾನ್ಪುರದಿಂದ ಫತೇಪುರ್‌ಗೆ ಬರುತ್ತಿದ್ದ ದೆಹಲಿ ಹೌರಾ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಇರಿಸಲಾಗಿತ್ತು. ಕಾನ್ಪುರದ ಪ್ರೇಂಪುರ ರೈಲು ನಿಲ್ದಾಣದ ಬಳಿ ಲೂಪ್ ಲೈನ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಇರಿಸಲಾಗಿತ್ತು. ಬೆಳಗ್ಗೆ 5.50ಕ್ಕೆ ಈ ಘಟನೆ ನಡೆದಿದೆ. ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ತುರ್ತು ಬ್ರೇಕ್ ಮೂಲಕ ಗೂಡ್ಸ್ ರೈಲನ್ನು ನಿಲ್ಲಿಸಿದರು.

ಕಾನ್ಪುರದಲ್ಲಿ ರೈಲು ಹಳಿ ತಪ್ಪಿಸುವ ಯತ್ನ, ಹಳಿಯಲ್ಲಿ ಸಿಲಿಂಡರ್​ ಪತ್ತೆ
ರೈಲು
ನಯನಾ ರಾಜೀವ್
|

Updated on: Sep 22, 2024 | 11:17 AM

Share

ಉತ್ತರ ಪ್ರದೇಶದ ಕಾನ್ಪುರದಲ್ಲಿ ರೈಲು ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಇಟ್ಟು ರೈಲನ್ನು ಉರುಳಿಸುವ ಸಂಚು ನಡೆದಿದೆ. ಕಾನ್ಪುರದಿಂದ ಫತೇಪುರ್‌ಗೆ ಬರುತ್ತಿದ್ದ ದೆಹಲಿ ಹೌರಾ ರೈಲ್ವೆ ಹಳಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಇರಿಸಲಾಗಿತ್ತು. ಕಾನ್ಪುರದ ಪ್ರೇಂಪುರ ರೈಲು ನಿಲ್ದಾಣದ ಬಳಿ ಲೂಪ್ ಲೈನ್‌ನಲ್ಲಿ ಎಲ್‌ಪಿಜಿ ಸಿಲಿಂಡರ್ ಇರಿಸಲಾಗಿತ್ತು. ಬೆಳಗ್ಗೆ 5.50ಕ್ಕೆ ಈ ಘಟನೆ ನಡೆದಿದೆ. ಲೋಕೋ ಪೈಲಟ್ ಮತ್ತು ಸಹಾಯಕ ಲೋಕೋ ಪೈಲಟ್ ತುರ್ತು ಬ್ರೇಕ್ ಮೂಲಕ ಗೂಡ್ಸ್ ರೈಲನ್ನು ನಿಲ್ಲಿಸಿದ್ದರು.

ರೈಲಿನಲ್ಲಿದ್ದ ರೈಲ್ವೆ ನೌಕರರು ಆರ್‌ಪಿಎಫ್ ಮತ್ತು ಇತರ ಇಲಾಖೆಯ ಜನರಿಗೆ ಮಾಹಿತಿ ನೀಡಿದರು. ರೈಲ್ವೆ ಹಳಿಯಲ್ಲಿ ಖಾಲಿ 5 ಕೆಜಿ ಸಿಲಿಂಡರ್ ಅನ್ನು ಇಡಲಾಗಿದೆ. ಪೈಲಟ್ ಮತ್ತು ಸಹಾಯಕ ಪೈಲಟ್ ಎಚ್ಚರಿಕೆಯಿಂದಾಗಿ ರೈಲನ್ನು ಉರುಳಿಸುವ ಸಂಚು ವಿಫಲವಾಗಿದೆ. ಈ ಘಟನೆ ಕುರಿತು ರೈಲ್ವೇ ಇಲಾಖೆ ತನಿಖೆಗೆ ಆದೇಶಿಸಿದೆ. ಈ ಕುರಿತು ಉತ್ತರ ಮಧ್ಯ ರೈಲ್ವೆ ವಲಯದ ಪ್ರಯಾಗ್‌ರಾಜ್ ವಿಭಾಗದ ಪಿಆರ್‌ಒ ಅಮಿತ್ ಸಿಂಗ್ ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಕಾನ್ಪುರದಲ್ಲಿ ಎರಡು ಬಾರಿ ರೈಲು ಅಪಘಾತವನ್ನು ತಪ್ಪಿಸಲಾಗಿದೆ. ಒಮ್ಮೆ ಟ್ರ್ಯಾಕ್ ಮೇಲೆ ಟ್ರಕ್ ಪಲ್ಟಿಯಾಗಿತ್ತು. ಕಳೆದ ತಿಂಗಳು, ಹಳಿ ಮೇಲೆ ಬಂಡೆಯನ್ನು ಇರಿಸಲಾಗಿತ್ತು, ನಂತರ ರೈಲಿನ 22 ಬೋಗಿಗಳು ಹಳಿತಪ್ಪಿದವು. ಈ ಅವಘಡವೂ ರಾತ್ರಿ ವೇಳೆ ಸಂಭವಿಸಿದೆ. ಆದರೆ, ಈ ಅವಘಡದಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.

ಮತ್ತಷ್ಟು ಓದಿ: ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ, ಉತ್ತರಾಖಂಡದಲ್ಲಿ ರೈಲು ಹಳಿ ತಪ್ಪಿಸುವ ಯತ್ನ

ರಾಜಸ್ಥಾನದ ಅಜ್ಮೀರ್ ನಲ್ಲಿ ದುಷ್ಕರ್ಮಿಗಳು ರೈಲು ಹಳಿಗಳ ಮೇಲೆ ಸಿಮೆಂಟ್‌ ಬ್ಲಾಕ್‌ಗಳನ್ನು ಇರಿಸಿ, ರೈಲು ಹಳಿ ತಪ್ಪಿಸುವ ಯತ್ನ ನಡೆಸಿದ್ದ ವಿಚಾರ ತಡವಾಗಿ ಬೆಳಕಿಗೆ ಬಂದಿದೆ.

ಅಜ್ಮೀರ್​ನ ಪಶ್ಚಿಮ ಮೀಸಲು ಸರಕು ಸಾಗಣೆ ಕಾರಿಡಾರ್‌ನ ರೈಲು ಹಳಿಗಳ ಮೇಲೆ ದೊಡ್ಡ ಗಾತ್ರದ ಎರಡು ಸಿಮೆಂಟ್‌ ಬ್ಲಾಕ್‌ಗಳು ಪತ್ತೆಯಾಗಿದ್ದವು. ಇದನ್ನು ಮೊದಲೇ ಇಲಾಖೆ ಸಿಬಂದಿ ಗಮನಿಸಿ, ರೈಲು ಹಳಿಗಳಿಂದ ತೆರವುಗೊಳಿಸಿದ್ದರಿಂದಾಗಿ ಇಲ್ಲೂ ಭಾರೀ ಅಪಘಾತವೊಂದು ತಪ್ಪಿತ್ತು.

ಉತ್ತರಾಖಂಡದಲ್ಲಿ ಕಿಡಿಗೇಡಿಗಳು ರೈಲನ್ನು ಹಳಿ ತಪ್ಪಿಸುವ ಯತ್ನ ಮಾಡಿದ್ದಾರೆ. ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬ ಇರಿಸಿದ್ದರು. ಉತ್ತರ ಪ್ರದೇಶ ಉತ್ತರಾಖಂಡ ಗಡಿಯಲ್ಲಿರುವ ಬಿಲಾಸ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಂಪುರ ಗ್ರಾಮದ ರೈಲ್ವೆ ಹಳಿ ಮೇಲೆ ಕಬ್ಬಿಣದ ಕಂಬವೊಂದು ಪತ್ತೆಯಾಗಿದೆ.

ರಾಷ್ಟ್ರೀಯ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ