AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎನ್ನಲಾಗಿದೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರು ಬದಲಿಸಲು ಯೋಗಿ ಸರ್ಕಾರ ನಿರ್ಧಾರ; ಅದಕ್ಕೂ ಅಯೋಧ್ಯೆ ಹೆಸರು
ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Oct 23, 2021 | 3:20 PM

Share

ಲಖನೌ: ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಬಿಜೆಪಿ ಸೇರಿ ಎಲ್ಲ ಪ್ರಮುಖ ಪಕ್ಷಗಳೂ ಅಲ್ಲಿ ಅಧಿಕಾರ ಗದ್ದುಗೆ ಹಿಡಿಯಲು ಪ್ರಯತ್ನ ಆರಂಭಿಸಿವೆ. ಇದೇ ಹೊತ್ತಲ್ಲಿ ಬಿಜೆಪಿ ಫೈಜಾಬಾದ್​ ರೈಲ್ವೆ ಸ್ಟೇಶನ್​ ಹೆಸರನ್ನು ಬದಲಿಸಲು ನಿರ್ಧಾರ ಮಾಡಿದೆ. ಅದಕ್ಕೆ ಅಯೋಧ್ಯಾ ಕೈಂಟ್​ ಎಂದು ಮರುನಾಮಕರಣ ಮಾಡುವುದಾಗಿ ತಿಳಿಸಿದೆ.  ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್​ ಮುಖ್ಯಮಂತ್ರಿಯಾದ ಬಳಿಕ ಈಗಾಗಲೇ ಹಲವು ಪ್ರದೇಶಗಳ ಹೆಸರನ್ನು ಬದಲಿಸಿದ್ದಾರೆ. ಇದೇ ಕಾರಣಕ್ಕೆ ಅವರು ಶ್ಲಾಘನೆಯನ್ನೂ ಪಡೆದಿದ್ದಾರೆ. ಟೀಕೆಗೂ ಗುರಿಯಾಗಿದ್ದಾರೆ.

ಫೈಜಾಬಾದ್​ ರೈಲ್ವೆ ಸ್ಟೇಶನ್​ನ ಹೆಸರನ್ನು ಅಯೋಧ್ಯಾ ಕೈಂಟ್ ಆಗಿ ಬದಲಿಸಲು ಪ್ರಸ್ತಾವನೆ ಇಡಲಾಗಿದೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನುಮೋದನೆ ನೀಡಿದ ಬಳಿಕ ಮರುನಾಮಕರಣ ಆಗಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕಳೆದ ವಾರ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಓವೈಸಿ ಅಯೋಧ್ಯೆಗೆ ಬಂದಿದ್ದರು. ಆಗ ಆ ಪಕ್ಷದ ಕಾರ್ಯಕರ್ತರು ಅಯೋಧ್ಯೆಯ ಎಲ್ಲೆಡೆ, ಅಯೋಧ್ಯೆಯನ್ನು ಫೈಜಾಬಾದ್​ ಎಂದು ಉಲ್ಲೇಖಿಸಿರುವ ಪೋಸ್ಟರ್​​ಗಳನ್ನು ಹಾಕಿದ್ದರು. ಇದೀಗ ಆ ಪೋಸ್ಟರ್​​ಗಳನ್ನೆಲ್ಲ ತೆಗೆಯುವಂತೆ ಉತ್ತರಪ್ರದೇಶ ಪೊಲೀಸರು ಎಐಎಂಐಎಂ ಪಕ್ಷದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಅಂದಹಾಗೇ ಈ ಫೈಜಾಬಾದ್​ ಎಂಬುದು ಅಯೋಧ್ಯೆಯಲ್ಲಿರುವ ಒಂದು ನಗರ.

ಇದನ್ನೂ ಓದಿ: PPF: ಪಬ್ಲಿಕ್ ಪ್ರಾವಿಡೆಂಟ್ ಫಂಡ್​ನಲ್ಲಿ 1 ಕೋಟಿ ರೂಪಾಯಿ ಉಳಿಸಲು ತಿಂಗಳಿಗೆ ಎಷ್ಟು ಉಳಿಸಬೇಕು?

ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ; ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಕಾರ್ಯಕ್ರಮಕ್ಕೆ ಗೈರು

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್