AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ರಾಮ ಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ

ರಾಮ ಮಂದಿರ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಬುಧವಾರ ಹೇಳಿದ್ದಾರೆ.

ಅಯೋಧ್ಯೆ ರಾಮ ಮಂದಿರ ಸುತ್ತಮುತ್ತ ಮದ್ಯ ಮಾರಾಟ ನಿಷೇಧಿಸಿದ ಉತ್ತರ ಪ್ರದೇಶ ಸರ್ಕಾರ
ಯೋಗಿ ಆದಿತ್ಯನಾಥ
TV9 Web
| Edited By: |

Updated on: Jun 01, 2022 | 4:29 PM

Share

ಅಯೋಧ್ಯೆಯ ರಾಮ ಜನ್ಮಭೂಮಿ (Ram Janambhoomi temple) ದೇಗುಲ ಸಂಕೀರ್ಣದ ಸುತ್ತಮುತ್ತ ಮದ್ಯ ಮಾರಾಟವನ್ನು(liquor ban) ನಿಷೇಧಿಸಿ ಉತ್ತರ ಪ್ರದೇಶ (Uttar Pradesh) ಸರ್ಕಾರ ಆದೇಶ ಹೊರಡಿಸಿದೆ. ರಾಮ ಮಂದಿರ ಪ್ರದೇಶದಲ್ಲಿನ ಎಲ್ಲಾ ಮದ್ಯದಂಗಡಿಗಳ ಪರವಾನಗಿಯನ್ನು ರದ್ದುಗೊಳಿಸಲಾಗಿದೆ ಎಂದು ಉತ್ತರ ಪ್ರದೇಶದ ಅಬಕಾರಿ ಸಚಿವ (ಸ್ವತಂತ್ರ ಉಸ್ತುವಾರಿ) ನಿತಿನ್ ಅಗರವಾಲ್ ಬುಧವಾರ ಹೇಳಿದ್ದಾರೆ. ಧಾರ್ಮಿಕ ಸ್ಥಳಗಳ ಸುತ್ತಲೂ ಮದ್ಯ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಬೇಕೆಂದು ಸಂತರು ಮತ್ತು ಧರ್ಮದರ್ಶಿಗಳು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಈ ನಿಷೇಧ ನಿರ್ಧಾರ ಬಂದಿದೆ. ಕಳೆದ ವರ್ಷ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (Yogi Adityanath) ಅವರು ಮಥುರಾದ ಯಾತ್ರಾ ಸ್ಥಳಗಳ ಬಳಿ ಮದ್ಯ ಮತ್ತು ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು. ಅಂತಹ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಬೇರೆ ಯಾವುದಾದರೂ ವ್ಯಾಪಾರದಲ್ಲಿ ತೊಡಗಿಸಿಕೊಳ್ಳಲು ಸಹಾಯ ಮಾಡುವಂತೆ ಯೋಜನೆ ರೂಪಿಸಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅದೇ ವೇಳೆ ಈವರೆಗೆ ಮದ್ಯ ಮಾರಾಟ ಮಾಡುತ್ತಿದ್ದವರು ಹಾಲು ಮಾರಾಟವನ್ನು ಕೈಗೆತ್ತಿಕೊಳ್ಳಬಹುದು. ಮಥುರಾದಲ್ಲಿ ಹಾಲು ಉದ್ಯಮವನ್ನು ಪುನರುಜ್ಜೀವನಗೊಳಿಸಬಹುದು ಎಂದು ಸರ್ಕಾರ ಸಲಹೆ ನೀಡಿದೆ. ಮಥುರಾದಲ್ಲಿ ಬೃಹತ್ ಪ್ರಮಾಣದಲ್ಲಿ ಹಾಲು ಉತ್ಪಾದನೆಯಾಗುತ್ತಿದೆ.

ಬುಧವಾರದಿಂದ ಮಥುರಾದಲ್ಲಿ ಹೋಟೆಲ್‌ಗಳಲ್ಲಿರುವ ಸುಮಾರು ಮೂರು ಬಾರ್‌ಗಳು ಮತ್ತು ಎರಡು ಅಂಗಡಿಗಳು ಸಹ ಮುಚ್ಚಲ್ಪಡುತ್ತವೆ. ಕಳೆದ ವರ್ಷ ಯೋಗಿ ಆದಿತ್ಯನಾಥ ಅವರು ಮಥುರಾದಲ್ಲಿ ಮದ್ಯ ಮತ್ತು ಮಾಂಸ ಮಾರಾಟದ ಮೇಲೆ ಸಂಪೂರ್ಣ ನಿಷೇಧ ಹೇರಿದ್ದರು.

2021ರಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಲಾಗಿತ್ತು

ಇದನ್ನೂ ಓದಿ
Image
ಅಯೋಧ್ಯೆಗೆ ನಾಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್: ರಾಮಮಂದಿರ ನಿರ್ಮಾಣದಲ್ಲಿ ದೊಡ್ಡ ಮೈಲಿಗಲ್ಲು
Image
Bareilly Accident: ಬರೇಲಿಯಲ್ಲಿ ಭೀಕರ ಅಪಘಾತ; ಟ್ರಕ್​ಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದು 7 ಜನ ಸಾವು
Image
ಫೋಟೋಗ್ರಾಫರ್ ಇಲ್ಲವೆಂದು ಮದುವೆಯನ್ನು ನಿರಾಕರಿಸಿದ ವಧು

ಸೆಪ್ಟೆಂಬರ್ 2021 ರಲ್ಲಿ ರಾಜ್ಯ ಸರ್ಕಾರವು ಮಥುರಾ-ವೃಂದಾವನದ 10 ಚದರ ಕಿಲೋಮೀಟರ್ ಪ್ರದೇಶವನ್ನು ಯಾತ್ರಾ ಸ್ಥಳವೆಂದು ಘೋಷಿಸಿತು, ಈ ಪ್ರದೇಶದಲ್ಲಿ ಯಾವುದೇ ಮದ್ಯ ಮತ್ತು ಮಾಂಸ ಮಾರಾಟವನ್ನು ಅನುಮತಿಸಲಾಗುವುದಿಲ್ಲ ಎಂದು ಕೃಷ್ಣೋತ್ಸವ 2021 ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Follow Us
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ