AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿನ್ನು ಅತ್ಯಾಚಾರ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗಲ್ಲ; ಹೊಸ ಮಸೂದೆಗೆ ಅಂಗೀಕಾರ

ಈ ಮಸೂದೆಯು ಯುವತಿಯರು ಮತ್ತು ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನನ್ನು ನಿರಾಕರಿಸುವುದರಿಂದ ಆರೋಪಿಗಳು ಸಾಕ್ಷ್ಯವನ್ನು ನಾಶಪಡಿಸುವ ಸಾಧ್ಯತೆ ಕಡಿಮೆಯಾಗುತ್ತದೆ.

ಉತ್ತರ ಪ್ರದೇಶದಲ್ಲಿನ್ನು ಅತ್ಯಾಚಾರ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಸಿಗಲ್ಲ; ಹೊಸ ಮಸೂದೆಗೆ ಅಂಗೀಕಾರ
ಯೋಗಿ ಆದಿತ್ಯನಾಥ್
TV9 Web
| Edited By: |

Updated on: Sep 24, 2022 | 8:33 AM

Share

ಲಕ್ನೋ: ಅತ್ಯಾಚಾರದ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು (Anticipatory Bail) ನೀಡುವುದನ್ನು ತಡೆಯುವ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಉತ್ತರ ಪ್ರದೇಶ ತಿದ್ದುಪಡಿ) ಮಸೂದೆ 2022ಯನ್ನು ಉತ್ತರ ಪ್ರದೇಶದ ವಿಧಾನಸಭೆಯಲ್ಲಿ (Uttar Pradesh Assembly) ಅಂಗೀಕರಿಸಲಾಗಿದೆ. ಉತ್ತರ ಪ್ರದೇಶ ಸಂಸದೀಯ ವ್ಯವಹಾರಗಳ ಸಚಿವ ಸುರೇಶ್ ಕುಮಾರ್ ಖನ್ನಾ ಶುಕ್ರವಾರ ಸದನದಲ್ಲಿ ಈ ತಿದ್ದುಪಡಿ ಮಸೂದೆಯ ಕುರಿತು ಮಾತನಾಡಿದ್ದು, ಪೋಕ್ಸೊ ಕಾಯ್ದೆ (POCSO Act) ಮತ್ತು ಮಹಿಳೆಯರೊಂದಿಗೆ ದುಷ್ಕೃತ್ಯ ಎಸಗುವ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ನೀಡದಂತೆ ನಿಬಂಧನೆಯನ್ನು ಹೇರಲಾಗಿದೆ ಎಂದು ಹೇಳಿದ್ದಾರೆ.

ಈ ಮಸೂದೆಯು ಯುವತಿಯರು ಮತ್ತು ಮಹಿಳೆಯರ ಮೇಲಿನ ಲೈಂಗಿಕ ಅಪರಾಧಗಳಲ್ಲಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನನ್ನು ನಿರಾಕರಿಸುವುದರಿಂದ ಆರೋಪಿಗಳು ಸಾಕ್ಷ್ಯವನ್ನು ನಾಶಪಡಿಸುವ ಸಾಧ್ಯತೆ ಕಡಿಮೆಯಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಖನ್ನಾ ಹೇಳಿದ್ದಾರೆ. ಈ ನಿಬಂಧನೆಯು ಆರೋಪಿಗಳು ಸಂತ್ರಸ್ತೆ ಮತ್ತು ಇತರ ಸಾಕ್ಷಿಗಳನ್ನು ಹೆದರಿಸುವುದು ಅಥವಾ ಕಿರುಕುಳ ನೀಡುವುದನ್ನು ತಡೆಯಲು ಸಹಾಯ ಮಾಡುತ್ತದೆ. ಈ ಮಸೂದೆಯು CrPCಯ ನಿಬಂಧನೆಗಳಿಗೆ ಬದಲಾವಣೆಗಳನ್ನು ಮಾಡಲು ಪ್ರಯತ್ನಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Rain Updates: ರಾಜಸ್ಥಾನ, ಮಧ್ಯಪ್ರದೇಶ ಸೇರಿ 25 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ; ಉತ್ತರ ಪ್ರದೇಶದಲ್ಲಿ ಗೋಡೆ ಕುಸಿದು 7 ಜನ ಸಾವು

ಉತ್ತರ ಪ್ರದೇಶ ಅಸೆಂಬ್ಲಿ ಮತ್ತೊಂದು ಮಸೂದೆಯನ್ನು ಕೂಡ ಅಂಗೀಕರಿಸಿದೆ. ಉತ್ತರ ಪ್ರದೇಶ ವಿಧಾನಸಭೆಯು ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಹಾನಿ ವಸೂಲಾತಿ (ತಿದ್ದುಪಡಿ) ಮಸೂದೆ, 2022ಯನ್ನು ಅಂಗೀಕರಿಸಿದೆ. ಗಲಭೆಯಲ್ಲಿ ಸತ್ತವರಿಗೆ 5 ಲಕ್ಷ ರೂ. ಪರಿಹಾರ ನೀಡಲು ತಿದ್ದುಪಡಿ ಮಸೂದೆಯು ಹಕ್ಕು ನ್ಯಾಯಮಂಡಳಿಗೆ ಅಧಿಕಾರ ನೀಡುತ್ತದೆ. ಪರಿಹಾರದ ಹಣವನ್ನು ತಪ್ಪಿತಸ್ಥ ವ್ಯಕ್ತಿಯಿಂದ ವಸೂಲಿ ಮಾಡಲಾಗುವುದು ಎಂದು ಸಚಿವ ಖನ್ನಾ ಹೇಳಿದ್ದಾರೆ.

ಈ ಮಸೂದೆಯ ಅಡಿಯಲ್ಲಿ ಸಂತ್ರಸ್ತೆ ಅಥವಾ ಗಲಭೆಯಲ್ಲಿ ಜೀವ ಕಳೆದುಕೊಂಡ ವ್ಯಕ್ತಿಯ ಅವಲಂಬಿತರು ಪರಿಹಾರಕ್ಕಾಗಿ ಮನವಿ ಮಾಡಬಹುದು. ಅಂತಹ ಪ್ರಕರಣಗಳಲ್ಲಿ ಪೊಲೀಸ್ ಕ್ರಮದ ವೆಚ್ಚವನ್ನು ತಪ್ಪಿತಸ್ಥರೇ ಭರಿಸಬೇಕೆಂದು ತಿದ್ದುಪಡಿ ಮಸೂದೆಯಲ್ಲಿ ತಿಳಿಸಲಾಗಿದೆ. ಅಂತಹ ವಸೂಲಾತಿಗಾಗಿ ಹಕ್ಕುಗಳ ನ್ಯಾಯಮಂಡಳಿಯನ್ನು ರಚಿಸಲು ಸರ್ಕಾರವು ಈ ಹಿಂದೆ ಉತ್ತರ ಪ್ರದೇಶ ಸಾರ್ವಜನಿಕ ಮತ್ತು ಖಾಸಗಿ ಆಸ್ತಿ ಹಾನಿ ಮರುಪಡೆಯುವಿಕೆ ಕಾಯ್ದೆ, 2020ಯನ್ನು ಅನ್ವಯಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು