AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಕ್ಕಳ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ತೋಳಗಳು, ಇಲ್ಲಿಯವರೆಗೆ 9 ಮಂದಿ ಸಾವು

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ತೋಳಗಳ ಭಯ ಹೆಚ್ಚಾಗಿ ಜನರನ್ನು ಕಾಡುತ್ತಿದೆ. ಇಲ್ಲಿಯವರೆಗೆ 8 ಮಕ್ಕಳು, ಓರ್ವ ಮಹಿಳೆ ಸೇರಿ 9 ಜನರನ್ನು ತೋಳಗಳು ಕೊಂದಿವೆ. ಕಳೆದ 45 ಜನರು ಅಕ್ಷರಶಃ ಆತಂಕದಲ್ಲಿ ಬದುಕುತ್ತಿದ್ದಾರೆ, ತೋಳಗಳ ಗುಂಪೊಂದು ಎಂಟು ಮಕ್ಕಳನ್ನು ಹತ್ಯೆಗೈದಿವೆ.

ಉತ್ತರ ಪ್ರದೇಶ: ಮಕ್ಕಳ ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ತೋಳಗಳು, ಇಲ್ಲಿಯವರೆಗೆ 9 ಮಂದಿ ಸಾವು
ತೋಳ
ನಯನಾ ರಾಜೀವ್
|

Updated on: Aug 29, 2024 | 10:57 AM

Share

ಉತ್ತರ ಪ್ರದೇಶದ ಬಹ್ರೈಚ್​ನಲ್ಲಿ ತೋಳಗಳ ಭಯ ಹೆಚ್ಚಾಗಿ ಜನರನ್ನು ಕಾಡುತ್ತಿದೆ. ಇಲ್ಲಿಯವರೆಗೆ 8 ಮಕ್ಕಳು, ಓರ್ವ ಮಹಿಳೆ ಸೇರಿ 9 ಜನರನ್ನು ತೋಳಗಳು ಕೊಂದಿವೆ. ಕಳೆದ 45 ಜನರು ಅಕ್ಷರಶಃ ಆತಂಕದಲ್ಲಿ ಬದುಕುತ್ತಿದ್ದಾರೆ, ತೋಳಗಳ ಗುಂಪೊಂದು ಎಂಟು ಮಕ್ಕಳನ್ನು ಹತ್ಯೆಗೈದಿವೆ.

ಜಿಲ್ಲೆಯಲ್ಲಿ ಅರಣ್ಯ ಇಲಾಖೆಯು ಆನೆಗಳ ಸಗಣಿ ಮತ್ತು ಮೂತ್ರವನ್ನು ಬಳಸಿ ತೋಳಗಳನ್ನು ಓಡಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಇಂಡಿಯಾ ಟುಡೇಯೊಂದಿಗೆ ಮಾತನಾಡಿರುವ ಜನರು, ಮಕ್ಕಳನ್ನು ತೋಳಗಳು ಕುತ್ತಿಗೆಗೆ ಬಾಯಿ ಹಾಕಿ ಎಳೆದೊಯ್ಯುತ್ತಿವೆ ಎಂದು ಹೇಳಿದ್ದಾರೆ.

ಅದೇ ರೀತಿ, ಏಳು ವರ್ಷದ ಮತ್ತೊಬ್ಬ ಬಾಲಕ ರಾಹುಲ್ ಕೂಡ ತೋಳದ ದಾಳಿಗೆ ಒಳಗಾಗಿದ್ದು, ಆತನ ತಾಯಿ ಇಂಡಿಯಾ ಟುಡೇ ಟಿವಿಯೊಂದಿಗೆ ಮಾತನಾಡುತ್ತಾ ಭಯಾನಕತೆಯನ್ನು ವಿವರಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ತನ್ನ ತಾಯಿಯೊಂದಿಗೆ ಮಲಗಿದ್ದಾಗ ರಾಹುಲ್ ಮೇಲೆ ತೋಳ ದಾಳಿ ಮಾಡಿತ್ತು.

ತಮ್ಮ ಜಮೀನಿನಿಂದ ಹಿಂತಿರುಗುತ್ತಿದ್ದ ರಾಹುಲ್ ಅವರ ಚಿಕ್ಕಪ್ಪ, ಮಗುವಿನ ಅಳುವುದು ಕೇಳಿ ಓಡಿ ಬಂದು ಆತನನ್ನು ರಕ್ಷಿಸಿದರು. ಫಿರೋಜ್​ ಎಂಬಾತನನ್ನು ತೋಳವು ಸುಮಾರು 200 ಮೀಟರ್ ಎಳೆದೊಯ್ದಿತ್ತು, ಅವರ ತಾಯಿ ಕೂಗಿಕೊಂಡಾಗ ಜನರೆಲ್ಲಾ ಅಲ್ಲಿ ಬಂದು ಜಮಾಯಿಸಿದರು. ಹೊಲದಲ್ಲೇ ಬಿಟ್ಟು ಓಡಿಹೋಯಿತು.

ಮತ್ತಷ್ಟು ಓದಿ: Wolf Snake: ಕಾರವಾರದಲ್ಲಿ ಅಪರೂಪದ ತೋಳ ಹಾವು ರಕ್ಷಣೆ! ಅದಕ್ಕೆ ಆ ಹೆಸರು ಯಾಕೆ? ವಿವರ ಇಲ್ಲಿದೆ

ಗಾಯಗೊಂಡಿದ್ದ ಅವರನ್ನು ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು 13 ದಿನಗಳ ಕಾಲ ಚಿಕಿತ್ಸೆ ಪಡೆದರು ಅಂತಿಮವಾಗಿ ಬದುಕುಳಿದಿದ್ದಾನೆ. ತೋಳದ ದಾಳಿಯ ನಂತರ ಫಿರೋಜ್‌ನ ತಾಯಿ ಅವನ ಮುಖ, ಕುತ್ತಿಗೆ, ತಲೆ ಮತ್ತು ಕಿವಿಗಳ ಮೇಲಿನ ಗಾಯಗಳನ್ನು ತೋರಿಸಿದರು.

ಯುಪಿಯ ಮುಖ್ಯ ವನ್ಯಜೀವಿ ಇಲಾಖೆ ಅಧಿಕಾರಿಗಳ ಹೇಳಿಕೆಯ ಪ್ರಕಾರ, ತೋಳಗಳನ್ನು ಹಿಡಿಯಲು ಅರಣ್ಯ ಇಲಾಖೆಯು ಡ್ರೋನ್ ಕ್ಯಾಮೆರಾಗಳು ಮತ್ತು ಥರ್ಮಲ್ ಡ್ರೋನ್ ಮ್ಯಾಪಿಂಗ್ ತಂತ್ರಗಳನ್ನು ಬಳಸಲಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ