AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್
IV DripImage Credit source: NDTV
TV9 Web
| Edited By: |

Updated on:Oct 26, 2022 | 10:54 AM

Share

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ. ಇದೀಗ ಆಸ್ಪತ್ರೆ ಕಟ್ಟಡವು ಅಕ್ರಮ ಎಂದು ತಿಳಿದುಬಂದಿದ್ದು, ತೆರವಿಗೆ ನೋಟಿಸ್ ನೀಡಲಾಗಿದೆ.

ಪ್ರಯಾಗ್​ರಾಜ್​ನಲ್ಲಿರುವ ಗ್ಲೋಬಲ್ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್​ಗೆ ಡೆಮಾಲಿಷನ್ ನೋಟಿಸ್ ಜಾರಿಗೊಳಿಸಲಾಗಿದೆ.

ಅನುಮತಿ ಪಡೆಯದೇ ಆಸ್ಪತ್ರೆ ನಿರ್ಮಿಸಲಾಗಿದ್ದು, ಶುಕ್ರವಾರದೊಳಗೆ ಆಸ್ಪತ್ರೆಯನ್ನು ತೆರವುಗೊಳಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಅಧಿಕಾರಿಗಳ ಲೋಪ ಸಾಬೀತಾದ ಬಳಿಕ ಕಳೆದ ವಾರ ಆಸ್ಪತ್ರೆಯನ್ನು ಮುಚ್ಚಲಾಗಿತ್ತು.

ಈ ಬಗ್ಗೆ ಹಿಂದಿನ ನೋಟಿಸ್​ಗೆ ಅಧಿಕಾರಿಗಳು ಉತ್ತರ ನೀಡಿರಲಿಲ್ಲ, ಈ ವರ್ಷದ ಆರಂಭದಲ್ಲಿ ಕಟ್ಟಡವನ್ನು ನೆಲಸಮ ಮಾಡಲು ಆದೇಶ ನೀಡಲಾಗಿದೆ.

ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ನೀಡುವ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಡೆಂಗ್ಯೂ ರೋಗಿಗೆ ನೀಡಿದ್ದ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿ ತೋರಿಸಿದಾಗ ಅದರಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ಇರುವುದನ್ನು ನೀವು ಕಾಣಬಹುದಾಗಿದೆ.

Vedank Singh ಎಂಬುವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ ನಡೆದಿದೆ.

ಝಲ್ವಾದ ಗ್ಲೋಬಲ್ ಆಸ್ಪತ್ರೆಯು ಡೆಂಗ್ಯೂ ರೋಗಿ ಪ್ರದೀಪ್ ಪಾಂಡೆಗೆ ಪ್ಲೇಟ್‌ಲೆಟ್ ಬದಲಿಗೆ ಮೊಸಂಬಿ ಜ್ಯೂಸ್ ನೀಡಿದೆ ಎಂದು ಕುಟುಂಬವೊಂದು ಆರೋಪಿಸಿತ್ತು. ರೋಗಿಯು ಸಾವನ್ನಪ್ಪಿದ್ದಾನೆ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 26 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ