ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್
IV DripImage Credit source: NDTV
Follow us
| Updated By: ನಯನಾ ರಾಜೀವ್

Updated on:Oct 26, 2022 | 10:54 AM

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ. ಇದೀಗ ಆಸ್ಪತ್ರೆ ಕಟ್ಟಡವು ಅಕ್ರಮ ಎಂದು ತಿಳಿದುಬಂದಿದ್ದು, ತೆರವಿಗೆ ನೋಟಿಸ್ ನೀಡಲಾಗಿದೆ.

ಪ್ರಯಾಗ್​ರಾಜ್​ನಲ್ಲಿರುವ ಗ್ಲೋಬಲ್ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್​ಗೆ ಡೆಮಾಲಿಷನ್ ನೋಟಿಸ್ ಜಾರಿಗೊಳಿಸಲಾಗಿದೆ.

ಅನುಮತಿ ಪಡೆಯದೇ ಆಸ್ಪತ್ರೆ ನಿರ್ಮಿಸಲಾಗಿದ್ದು, ಶುಕ್ರವಾರದೊಳಗೆ ಆಸ್ಪತ್ರೆಯನ್ನು ತೆರವುಗೊಳಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಅಧಿಕಾರಿಗಳ ಲೋಪ ಸಾಬೀತಾದ ಬಳಿಕ ಕಳೆದ ವಾರ ಆಸ್ಪತ್ರೆಯನ್ನು ಮುಚ್ಚಲಾಗಿತ್ತು.

ಈ ಬಗ್ಗೆ ಹಿಂದಿನ ನೋಟಿಸ್​ಗೆ ಅಧಿಕಾರಿಗಳು ಉತ್ತರ ನೀಡಿರಲಿಲ್ಲ, ಈ ವರ್ಷದ ಆರಂಭದಲ್ಲಿ ಕಟ್ಟಡವನ್ನು ನೆಲಸಮ ಮಾಡಲು ಆದೇಶ ನೀಡಲಾಗಿದೆ.

ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ನೀಡುವ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಡೆಂಗ್ಯೂ ರೋಗಿಗೆ ನೀಡಿದ್ದ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿ ತೋರಿಸಿದಾಗ ಅದರಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ಇರುವುದನ್ನು ನೀವು ಕಾಣಬಹುದಾಗಿದೆ.

Vedank Singh ಎಂಬುವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ ನಡೆದಿದೆ.

ಝಲ್ವಾದ ಗ್ಲೋಬಲ್ ಆಸ್ಪತ್ರೆಯು ಡೆಂಗ್ಯೂ ರೋಗಿ ಪ್ರದೀಪ್ ಪಾಂಡೆಗೆ ಪ್ಲೇಟ್‌ಲೆಟ್ ಬದಲಿಗೆ ಮೊಸಂಬಿ ಜ್ಯೂಸ್ ನೀಡಿದೆ ಎಂದು ಕುಟುಂಬವೊಂದು ಆರೋಪಿಸಿತ್ತು. ರೋಗಿಯು ಸಾವನ್ನಪ್ಪಿದ್ದಾನೆ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 26 October 22

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು