AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ.

ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ ಸಿಬ್ಬಂದಿ, ಡೆಂಗ್ಯೂ ರೋಗಿ ಸಾವು, ಆಸ್ಪತ್ರೆ ತೆರವಿಗೆ ನೋಟಿಸ್
IV DripImage Credit source: NDTV
TV9 Web
| Edited By: |

Updated on:Oct 26, 2022 | 10:54 AM

Share

ಉತ್ತರ ಪ್ರದೇಶದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿ ಐವಿ ಡ್ರಿಪ್​ನಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ನೀಡಿದ್ದು, ಡೆಂಗ್ಯೂ ರೋಗಿಯೊಬ್ಬ ಮೃತಪಟ್ಟಿದ್ದಾರೆ. ಇದೀಗ ಆಸ್ಪತ್ರೆ ಕಟ್ಟಡವು ಅಕ್ರಮ ಎಂದು ತಿಳಿದುಬಂದಿದ್ದು, ತೆರವಿಗೆ ನೋಟಿಸ್ ನೀಡಲಾಗಿದೆ.

ಪ್ರಯಾಗ್​ರಾಜ್​ನಲ್ಲಿರುವ ಗ್ಲೋಬಲ್ ಆಸ್ಪತ್ರೆ ಹಾಗೂ ಟ್ರಾಮಾ ಸೆಂಟರ್​ಗೆ ಡೆಮಾಲಿಷನ್ ನೋಟಿಸ್ ಜಾರಿಗೊಳಿಸಲಾಗಿದೆ.

ಅನುಮತಿ ಪಡೆಯದೇ ಆಸ್ಪತ್ರೆ ನಿರ್ಮಿಸಲಾಗಿದ್ದು, ಶುಕ್ರವಾರದೊಳಗೆ ಆಸ್ಪತ್ರೆಯನ್ನು ತೆರವುಗೊಳಿಸಬೇಕು ಎಂದು ನೋಟಿಸ್​ನಲ್ಲಿ ತಿಳಿಸಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಅಧಿಕಾರಿಗಳ ಲೋಪ ಸಾಬೀತಾದ ಬಳಿಕ ಕಳೆದ ವಾರ ಆಸ್ಪತ್ರೆಯನ್ನು ಮುಚ್ಚಲಾಗಿತ್ತು.

ಈ ಬಗ್ಗೆ ಹಿಂದಿನ ನೋಟಿಸ್​ಗೆ ಅಧಿಕಾರಿಗಳು ಉತ್ತರ ನೀಡಿರಲಿಲ್ಲ, ಈ ವರ್ಷದ ಆರಂಭದಲ್ಲಿ ಕಟ್ಟಡವನ್ನು ನೆಲಸಮ ಮಾಡಲು ಆದೇಶ ನೀಡಲಾಗಿದೆ.

ವೈದ್ಯರು ರಕ್ತದ ಪ್ಲಾಸ್ಮಾ ಅಗತ್ಯವಿರುವ ರೋಗಿಗಳಿಗೆ ನೀಡುವ ಡ್ರಿಪ್‍ನಲ್ಲಿ ಮೊಸಂಬಿ ಜ್ಯೂಸ್ ಹಾಕುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ವಿಡಿಯೋದಲ್ಲಿ ವ್ಯಕ್ತಿಯೊಬ್ಬ ಡೆಂಗ್ಯೂ ರೋಗಿಗೆ ನೀಡಿದ್ದ ರಕ್ತದ ಪ್ಯಾಕ್ ಅನ್ನು ಹಿಡಿದುಕೊಂಡಿದ್ದು, ಅದನ್ನು ಹಿಂತಿರುಗಿಸಿ ತೋರಿಸಿದಾಗ ಅದರಲ್ಲಿ ರಕ್ತದ ಬದಲು ಮೊಸಂಬಿ ಜ್ಯೂಸ್ ಇರುವುದನ್ನು ನೀವು ಕಾಣಬಹುದಾಗಿದೆ.

Vedank Singh ಎಂಬುವರು ಈ ವಿಡಿಯೋವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ಪ್ರಯಾಗ್‍ರಾಜ್‍ನಲ್ಲಿ ಮಾನವೀಯತೆಯೇ ತಲೆತಗ್ಗಿಸುವ ಘಟನೆ ನಡೆದಿದೆ.

ಝಲ್ವಾದ ಗ್ಲೋಬಲ್ ಆಸ್ಪತ್ರೆಯು ಡೆಂಗ್ಯೂ ರೋಗಿ ಪ್ರದೀಪ್ ಪಾಂಡೆಗೆ ಪ್ಲೇಟ್‌ಲೆಟ್ ಬದಲಿಗೆ ಮೊಸಂಬಿ ಜ್ಯೂಸ್ ನೀಡಿದೆ ಎಂದು ಕುಟುಂಬವೊಂದು ಆರೋಪಿಸಿತ್ತು. ರೋಗಿಯು ಸಾವನ್ನಪ್ಪಿದ್ದಾನೆ. ದಯವಿಟ್ಟು ಈ ವಿಷಯವನ್ನು ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅವರು ಆಗ್ರಹಿಸಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:54 am, Wed, 26 October 22

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?