AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉತ್ತರ ಪ್ರದೇಶವೂ ಈಗ ಹೊಸ ಜಮ್ಮು-ಕಾಶ್ಮೀರವೇ ಆಗಿದೆ..’: ಒಮರ್​ ಅಬ್ದುಲ್ಲಾ ಟ್ವೀಟ್​

ದೇಶಾದ್ಯಂತ ಕಾಂಗ್ರೆಸ್​ ಸೇರಿ ಹಲವು ಪಕ್ಷಗಳು ಉತ್ತರಪ್ರದೇಶದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತಿರುಗಿಬಿದ್ದಿವೆ. ಈ ಘಟನೆಯಲ್ಲಿ ಮುಖ್ಯ ಆರೋಪಿಗಳು ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಆಶೀಶ್​ ಮಿಶ್ರಾ ಎಂದು ಆರೋಪ ಮಾಡಲಾಗಿದೆ.

‘ಉತ್ತರ ಪ್ರದೇಶವೂ ಈಗ ಹೊಸ ಜಮ್ಮು-ಕಾಶ್ಮೀರವೇ ಆಗಿದೆ..’: ಒಮರ್​ ಅಬ್ದುಲ್ಲಾ ಟ್ವೀಟ್​
ಒಮರ್​ ಅಬ್ದುಲ್ಲಾ
TV9 Web
| Edited By: |

Updated on:Oct 04, 2021 | 4:53 PM

Share

ಶ್ರೀನಗರ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದ ಬಗ್ಗೆ ಇದೀಗ ಕಾಂಗ್ರೆಸ್ ಸೇರಿ ಹಲವು ಪ್ರತಿಪಕ್ಷಗಳ ನಾಯಕರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ. ಇದೀಗ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮರ್​ ಅಬ್ದುಲ್ಲಾ ಕೂಡ ಟ್ವೀಟ್​ ಮೂಲಕ ಕಟುವಾಗಿ ಪ್ರತಿಕ್ರಿಯೆ ನೀಡಿದ್ದು, ಉತ್ತರ ಪ್ರದೇಶ ರಾಜ್ಯ ಹೊಸ ಜಮ್ಮು-ಕಾಶ್ಮೀರ ಎಂದು ಹೇಳಿದ್ದಾರೆ. ಅಂದರೆ ಉತ್ತರಪ್ರದೇಶವೂ ಕೂಡ ಜಮ್ಮು-ಕಾಶ್ಮೀರದಂತೆ ಆಗಿದೆ ಎಂದಿದ್ದಾರೆ. ಅನೇಕವರ್ಷಗಳಿಂದಲೂ ಭಯೋತ್ಪಾದಕರ ದಾಳಿಗೆ ನಲುಗುತ್ತಿರುವ ಜಮ್ಮು-ಕಾಶ್ಮೀರಕ್ಕೆ ಉತ್ತರ ಪ್ರದೇಶವನ್ನುಹೋಲಿಸಿದ್ದಾರೆ.  

ಉತ್ತರಪ್ರದೇಶದಲ್ಲಿ ಲಖಿಂಪುರದಲ್ಲಿ ನಿನ್ನೆ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹರಿದಾಗಿನಿಂದ ಹಿಂಸಾಚಾರ ಶುರುವಾಗಿದೆ. ಇಲ್ಲಿಯವರೆಗೆ 8 ಮಂದಿ ಮೃತಪಟ್ಟಿದ್ದಾರೆ.  ದೇಶಾದ್ಯಂತ ಕಾಂಗ್ರೆಸ್​ ಸೇರಿ ಹಲವು ಪಕ್ಷಗಳು ಉತ್ತರಪ್ರದೇಶದ ಆಡಳಿತ ಪಕ್ಷ ಬಿಜೆಪಿ ವಿರುದ್ಧ ತಿರುಗಿಬಿದ್ದಿವೆ. ಈ ಘಟನೆಯಲ್ಲಿ ಮುಖ್ಯ ಆರೋಪಿಗಳು ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಆಶೀಶ್​ ಮಿಶ್ರಾ ಎಂದು ಆರೋಪ ಮಾಡಲಾಗಿದ್ದು, ಆಶೀಶ್​ ಮಿಶ್ರಾ ವಿರುದ್ಧ ಕೊಲೆ ಕೇಸ್​ ಕೂಡ ದಾಖಲಾಗಿದೆ.  ಆದರೆ ಇವರಿಬ್ಬರೂ ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದೂ ಅಜಯ್​ ಮಿಶ್ರಾ ಒತ್ತಾಯಿಸಿದ್ದಾರೆ.

ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ ಉತ್ತರ ಪ್ರದೇಶ ಸರ್ಕಾರ ತಲಾ 45 ಲಕ್ಷ ರೂ.ಘೋಷಣೆ ಮಾಡಿದ್ದು, ಗಾಯಗೊಂಡವರಿಗೆ ತಲಾ 10 ಲಕ್ಷ ರೂ.ನೀಡುವುದಾಗಿ ಹೇಳಿದೆ. ಹಾಗೇ, ಮೃತರ ಕುಟುಂಬದ ಒಬ್ಬರಿಗೆ ಸರ್ಕಾರಿ ಕೆಲಸ ಕೊಡಿಸುವ ಭರವಸೆ ನೀಡಿದೆ. ಆದರೆ ರೈತ ನಾಯಕ ರಾಕೇಶ್ ಟಿಕಾಯತ್​ ಒಂದು ಕೋಟಿ ರೂ.ಪರಿಹಾರ ನೀಡಬೇಕೆಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: 2 ವರ್ಷದಿಂದ ವೇತನ ಸಿಕ್ಕಿಲ್ಲ ಎಂದು 104 ಆರೋಗ್ಯವಾಣಿ ಸಿಬ್ಬಂದಿಗಳಿಂದ ಪ್ರತಿಭಟನೆ, ಆರೋಗ್ಯ ಇಲಾಖೆ ಆಯುಕ್ತ ಹೇಳಿದ್ದೇನು?

ಆರ್ಯನ್ ಖಾನ್​ಗೆ ಅಪ್ಪನಂತೆ ನಟನಾಗುವ ಬಯಕೆಯಿಲ್ಲ, ನಿರ್ದೇಶಕನಾಗುವ ಹೆಬ್ಬಯಕೆ ಇದೆ!

Published On - 4:51 pm, Mon, 4 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ