AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿ ಶಿಕ್ಷಕರು ಅಂಕವನ್ನು ನೀಡಿದ್ದಾರೆ

ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು
ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 9:46 AM

Share

ಲಕ್ನೋ, ಏ.27: ಉತ್ತರ ಪ್ರದೇಶದ (Uttar Pradesh) ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು  ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿ ಮುಖಂಡ ದಿವ್ಯಾಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಕ್ರಿಕೆಟಿಗರ ಹೆಸರುಗಳು ಕೂಡ ಇದೆ ಎಂದು ಹೇಳಲಾಗಿದೆ.

ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್‌ಟಿಐ ಪ್ರತಿಕ್ರಿಯೆಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್ ಅವರು, ” ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದ್ದೇನೆ . ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:44 am, Sat, 27 April 24

Follow Us
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
‘ಆಕಾಶ್’ ಸಿನಿಮಾ ಮರು ಬಿಡುಗಡೆ: ಹೀಗಿತ್ತು ನೋಡಿ ಅಭಿಮಾನಿಗಳ ಸಂಭ್ರಮ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು