AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು

ಉತ್ತರ ಪ್ರದೇಶದ ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿ ಶಿಕ್ಷಕರು ಅಂಕವನ್ನು ನೀಡಿದ್ದಾರೆ

ಉತ್ತರ ಪ್ರದೇಶ: ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ, ಅಂಕ ನೀಡಿದ ಪ್ರಾಧ್ಯಾಪಕರು ಅಮಾನತು
ಅಕ್ಷಯ್​ ಪಲ್ಲಮಜಲು​​
|

Updated on:Apr 27, 2024 | 9:46 AM

Share

ಲಕ್ನೋ, ಏ.27: ಉತ್ತರ ಪ್ರದೇಶದ (Uttar Pradesh) ವಿಶ್ವವಿದ್ಯಾನಿಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳು ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಮತ್ತು ಕ್ರಿಕೆಟಿಗರ ಹೆಸರನ್ನು ಬರೆದಿದ್ದಾರೆ. ಇದೀಗ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿದೆ. ಪ್ರಶ್ನೆಗೆ ಉತ್ತರ ಬರೆಯುವ ಬದಲು ಜೈಶ್ರೀರಾಮ್​​​​, ಕ್ರಿಕೆಟಿಗರ ಹೆಸರನ್ನು ಬರೆದಿದ್ದು, ಇದಕ್ಕೆ ಅಲ್ಲಿನ ಶಿಕ್ಷಕರು ಅಂಕವನ್ನು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಹಣ ಪಡೆದು  ಈ ಉತ್ತರ ಪ್ರತಿಕೆಗೆ ಅಂಕ ನೀಡಲಾಗಿದೆ ಎಂದು ಹೇಳಲಾಗಿದೆ.

ಹಾಡುಗಳು, ಸಂಗೀತ ಮತ್ತು ಧಾರ್ಮಿಕ ಘೋಷಣೆಗಳನ್ನು ಬರೆದಿರುವ ಉತ್ತರ ಪ್ರತಿಕೆಗಳಿಗೆ ಶಿಕ್ಷಕರು ಅಂಕ ನೀಡಿದ್ದು, ಇದೀಗ ಆ ಶಿಕ್ಷಕರನ್ನು ಅಮಾನತು ಮಾಡಲಾಗಿದೆ. ಜೌನ್‌ಪುರದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಇಬ್ಬರು ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ. ವಿಶ್ವವಿದ್ಯಾನಿಲಯದ ಕೆಲವು ಅಧಿಕಾರಿಗಳ ಸಹಕಾರದಿಂದ ಶೂನ್ಯ ಅಂಕ ಪಡೆದ ವಿದ್ಯಾರ್ಥಿಗಳಿಗೆ 60% ಅಂಕವನ್ನು ನೀಡಲಾಗಿದೆ. ಈ ಬಗ್ಗೆ ವಿದ್ಯಾರ್ಥಿ ಮುಖಂಡ ದಿವ್ಯಾಾಂಶು ಸಿಂಗ್ ಅವರು ಪ್ರಧಾನಿ, ಮುಖ್ಯಮಂತ್ರಿ, ರಾಜ್ಯಪಾಲರು ಹಾಗೂ ಉಪಕುಲಪತಿಗಳಿಗೆ ಬರೆದ ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಉತ್ತರ ಪ್ರತಿಕೆಯಲ್ಲಿ ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಕ್ರಿಕೆಟಿಗರ ಹೆಸರುಗಳು ಕೂಡ ಇದೆ ಎಂದು ಹೇಳಲಾಗಿದೆ.

ಪ್ರತಿಗಳ ಮೌಲ್ಯಮಾಪನದ ಸಮಯದಲ್ಲಿ ಆರ್‌ಟಿಐ ಪ್ರತಿಕ್ರಿಯೆಯಿಂದ ಈ ಅಕ್ರಮ ಬಹಿರಂಗಗೊಂಡಿದೆ ಎಂದು ಹೇಳಲಾಗಿದೆ. ಇಂತಹ ಉತ್ತರ ಪ್ರತಿಕೆಯನ್ನು ಮರುಮೌಲ್ಯಮಾಪನ ಮಾಡಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾತನಾಡಿದ ಉಪಕುಲಪತಿ ವಂದನಾ ಸಿಂಗ್ ಅವರು, ” ವಿದ್ಯಾರ್ಥಿಗಳಿಗೆ ಹೆಚ್ಚು ಅಂಕ ನೀಡಲಾಗಿದೆ ಎಂಬ ಆರೋಪವಿತ್ತು. ಹಾಗಾಗಿ ನಾವು ಸಮಿತಿಯನ್ನು ರಚಿಸಿದ್ದೇವೆ. ಆ ಸಮಿತಿಯು ತನ್ನ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಅಂಕಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸೂರತ್​ನಲ್ಲಿ ಬಿಜೆಪಿ ಅಭ್ಯರ್ಥಿಯ ಅವಿರೋಧ ಆಯ್ಕೆ, ತನ್ನ ಅಭ್ಯರ್ಥಿಯನ್ನು ಉಚ್ಛಾಟಿಸಿದ ಕಾಂಗ್ರೆಸ್​

ಇನ್ನು ಈ ಉತ್ತರ ಪ್ರತಿಕೆಯಲ್ಲಿ ಜೈಶ್ರೀರಾಮ ಘೋಷಣೆ ಬಗ್ಗೆ ಯಾವುದು ನಮ್ಮ ಗಮನಕ್ಕೆ ಬಂದಿಲ್ಲ ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದರು. ರಾಜ್ಯಭವನಕ್ಕೂ ಈ ಬಗ್ಗೆ ಪತ್ರ ಬರೆಯಲಾಗಿದ್ದು, ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಂತಹ ಘಟನೆ ಪುನರಾವರ್ತನೆಯಾಗದಂತೆ ಶಿಕ್ಷಕರಿಗೆ ಎಚ್ಚರಿಕೆ ನೀಡಲಾಗಿದೆ.ಈ ಕೃತ್ಯದಲ್ಲಿ ಭಾಗಿಯಾಗಿರುವ ಶಿಕ್ಷಕರನ್ನು ವಜಾಗೊಳಿಸಲು ಸಮಿತಿ ಶಿಫಾರಸು ಮಾಡಿದ್ದೇನೆ . ಆದರೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ನೀತಿ ಸಂಹಿತೆ ತೆರವಾದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಉಪಕುಲಪತಿ ವಂದನಾ ಸಿಂಗ್ ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:44 am, Sat, 27 April 24

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು