AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆಸಿ, ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

ಉತ್ತರ ಪ್ರದೇಶದ ಸೀತಾಪುರದ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಗುಂಡಿಕ್ಕಿ ಪತ್ರಕರ್ತನನ್ನು ಹತ್ಯೆ ಮಾಡಲಾಗಿದೆ. ಮೃತ ರಾಘವೇಂದ್ರ ಬಾಜ್‌ಪೈ ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು. ಅವರು ಆರ್​ಟಿಐ ಕಾರ್ಯಕರ್ತ ಕೂಡ ಆಗಿದ್ದರು. ವರದಿಯ ಪ್ರಕಾರ, ದುಷ್ಕರ್ಮಿಗಳು ಮೊದಲು ಅವರ ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಮೂರು ಬಾರಿ ಗುಂಡು ಹಾರಿಸಿದ್ದಾರೆ. ಇದನ್ನು ಮೊದಲು ಅಪಘಾತವೆಂದು ಪರಿಗಣಿಸಲಾಗಿತ್ತು

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಬೈಕ್​ಗೆ ಡಿಕ್ಕಿ ಹೊಡೆಸಿ,  ಗುಂಡು ಹಾರಿಸಿ ಪತ್ರಕರ್ತನ ಹತ್ಯೆ
ಸಾವು
ನಯನಾ ರಾಜೀವ್
|

Updated on: Mar 09, 2025 | 10:58 AM

Share

ಉತ್ತರ ಪ್ರದೇಶ, ಮಾರ್ಚ್​ 9: ಉತ್ತರ ಪ್ರದೇಶದ ಸೀತಾಪುರದ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಗುಂಡಿಕ್ಕಿ ಪತ್ರಕರ್ತನನ್ನು ಹತ್ಯೆ ಮಾಡಲಾಗಿದೆ. ಮೃತ ರಾಘವೇಂದ್ರ ಬಾಜ್‌ಪೈ ಉತ್ತರ ಪ್ರದೇಶದ ಹಿಂದಿ ದಿನಪತ್ರಿಕೆಯ ಸ್ಥಳೀಯ ವರದಿಗಾರರಾಗಿದ್ದರು. ಅವರು ಆರ್​ಟಿಐ ಕಾರ್ಯಕರ್ತ ಕೂಡ ಆಗಿದ್ದರು.

ವರದಿಯ ಪ್ರಕಾರ, ದುಷ್ಕರ್ಮಿಗಳು ಮೊದಲು ಅವರ ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಮೂರು ಬಾರಿ ಗುಂಡು ಹಾರಿಸಿದ್ದಾರೆ. ಇದನ್ನು ಮೊದಲು ಅಪಘಾತವೆಂದು ಪರಿಗಣಿಸಲಾಗಿತ್ತು ಆದರೆ ಜಿಲ್ಲಾ ಆಸ್ಪತ್ರೆಯ ವೈದ್ಯರು ಅವರ ದೇಹದ ಮೇಲೆ ಮೂರು ಗುಂಡುಗಳು ಕಂಡುಬಂದಿದ್ದು, ಬಳಿಕ ಇದು  ಕೊಲೆ ಪ್ರಕರಣವಾಗಿ ಪರಿವರ್ತನೆಯಾಗಿತ್ತು.  ಶನಿವಾರ ಮಧ್ಯಾಹ್ನ ಫೋನ್ ಕರೆ ಬಂದ ನಂತರ 35 ವರ್ಷದ ಪತ್ರಕರ್ತ ಮನೆಯಿಂದ ಹೊರಟು ಹೋಗಿದ್ದರು.

ಸ್ವಲ್ಪ ಸಮಯದ ನಂತರ, ಮಧ್ಯಾಹ್ನ 3.15 ರ ಸುಮಾರಿಗೆ, ಹೆದ್ದಾರಿಯಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ. ಕೊಲೆಯ ಹಿಂದಿನ ಉದ್ದೇಶವನ್ನು ಪೊಲೀಸರು ಇನ್ನೂ ತಿಳಿದುಬಂದಿಲ್ಲ. ಇನ್ನೂ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಪ್ರಕರಣ ದಾಖಲಿಸುವ ಮೊದಲು ಬಲಿಪಶುವಿನ ಕುಟುಂಬದಿಂದ ಔಪಚಾರಿಕ ದೂರಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಮತ್ತಷ್ಟು ಓದಿ: ಮೈಸೂರು ಜಿಲ್ಲೆಯಲ್ಲಿ ಜೋಡಿ ಕೊಲೆ: ಒಳಕಲ್ಲಿನಿಂದ ಜಜ್ಜಿ ವೃದ್ಧ ದಂಪತಿಯ ಹತ್ಯೆ

ಪೊಲೀಸರ ಪ್ರಕಾರ, ಆರೋಪಿಗಳನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದೆ. ಮಹೋಲಿ, ಇಮಾಲಿಯಾ ಮತ್ತು ಕೊತ್ವಾಲಿಯ ಪೊಲೀಸ್ ತಂಡಗಳು, ಕಣ್ಗಾವಲು ಮತ್ತು ಎಸ್‌ಒಜಿ ತಂಡಗಳೊಂದಿಗೆ ಆರೋಪಿಗಳನ್ನು ತನಿಖೆ ಮಾಡಲು ಮತ್ತು ಗುರುತಿಸಲು ನಿಯೋಜಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ