AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಜಮೀನು ಉಳಿಸಿಕೊಳ್ಳಲು ಜೆಸಿಬಿ ಮುಂದೆ ಉರುಳು ಸೇವೆ ಮಾಡಿದ ಜಡ್ಜ್; ಮುಂದೇನಾಯ್ತು ನೋಡಿ

ಬಸ್ತಿ ಜಿಲ್ಲೆಯ ಛಾಪಿಯಾ ಶುಕ್ಲಾ ಗ್ರಾಮದಲ್ಲಿ ಕಾಲುವೆ ಅಗೆಯುವ ವೇಳೆ ಎಡಿಜೆ ಮನೋಜ್ ಶುಕ್ಲಾ ಅವರು ಜೆಸಿಬಿ ಎದುರು ಮಲಗಿ ಅಗೆಯುವ ಕಾಮಗಾರಿಯನ್ನು ವಿರೋಧಿಸಿದ್ದರು. ನ್ಯಾಯಾಧೀಶರ ಈ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.

ತನ್ನ ಜಮೀನು ಉಳಿಸಿಕೊಳ್ಳಲು ಜೆಸಿಬಿ ಮುಂದೆ ಉರುಳು ಸೇವೆ ಮಾಡಿದ ಜಡ್ಜ್; ಮುಂದೇನಾಯ್ತು ನೋಡಿ
ಜೆಸಿಬಿ ಎದುರು ಮಲಗಿದ ಜಡ್ಜ್
TV9 Web
| Updated By: ಸುಷ್ಮಾ ಚಕ್ರೆ|

Updated on: Apr 07, 2022 | 6:27 PM

Share

ಅಲಹಾಬಾದ್: ಬಸ್ತಿ ಜಿಲ್ಲೆಯ ತಮ್ಮ ಪೂರ್ವಜರ ಭೂಮಿಯನ್ನು ರಾಜ್ಯ ಸರ್ಕಾರ ಸ್ವಾಧೀನಪಡಿಸಿಕೊಂಡಿರುವುದನ್ನು ವಿರೋಧಿಸಿ ಜೆಸಿಬಿ (JCB) ಎದುರು ಉರುಳಾಡಿ, ಪ್ರತಿಭಟಿಸಿದ್ದ ಸುಲ್ತಾನಪುರ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ (ಎಡಿಜೆ) ಮನೋಜ್ ಶುಕ್ಲಾ ಅವರನ್ನು ಅಲಹಾಬಾದ್ ಹೈಕೋರ್ಟ್ ಅಮಾನತು ಮಾಡಿದೆ. ಬಸ್ತಿ ಜಿಲ್ಲೆಯ ಹರಯಾ ಪೊಲೀಸ್ ಠಾಣೆ ವ್ಯಾಪ್ತಿಯ ಛಾಪಿಯಾ ಶುಕ್ಲಾ ಗ್ರಾಮದಲ್ಲಿ ಕಾಲುವೆ ಅಗೆಯುವ ವೇಳೆ ಎಡಿಜೆ ಮನೋಜ್ ಶುಕ್ಲಾ ಅವರು ಜೆಸಿಬಿ ಎದುರು ಮಲಗಿ ಅಗೆಯುವ ಕಾಮಗಾರಿಯನ್ನು ವಿರೋಧಿಸಿದ್ದರು. ನ್ಯಾಯಾಧೀಶರ ಈ ಪ್ರತಿಭಟನೆಯ ವಿಡಿಯೋ ಭಾರೀ ವೈರಲ್ ಆಗಿದೆ.

ಎಡಿಜೆ ಶುಕ್ಲಾ ಅವರ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ಆಡಳಿತ ಸಮಿತಿಯು ಅವರನ್ನು ಅಮಾನತುಗೊಳಿಸಲು ನಿರ್ಧರಿಸಿದೆ. ಈ ಅಮಾನತು ಆದೇಶವನ್ನು ಸುಲ್ತಾನ್‌ಪುರ ಜಿಲ್ಲಾ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಎಡಿಜೆ ಶುಕ್ಲಾ ಅವರು ಇಡೀ ರಾತ್ರಿ ಜಿಲ್ಲಾಡಳಿತ ತಂಡದ ಮುಂದೆ ಊಟ, ಕುಡಿಯದೆ ನೆಲದ ಮೇಲೆ ಮಲಗಿ ಅವಾಂತರ ಸೃಷ್ಟಿಸಿದ್ದರು ಎಂದು ವರದಿಗಳು ತಿಳಿಸಿವೆ.

ನಾನು ನ್ಯಾಯಾಂಗ ಅಧಿಕಾರಿ, ಇದು ನನ್ನ ಪೂರ್ವಜರ ಭೂಮಿ. ನಮ್ಮ ಭೂಮಿಯನ್ನು ಒತ್ತುವರಿ ಮಾಡಿಕೊಳ್ಳುತ್ತಿದ್ದಾರೆ. ಭೂ ಸ್ವಾಧೀನ ನಿಯಮಗಳಿಗೆ ವಿರುದ್ಧವಾಗಿದ್ದು, ಜಿಲ್ಲಾಧಿಕಾರಿ ನೀಡಿರುವ ಆದೇಶ ಭ್ರಷ್ಟಾಚಾರಕ್ಕೆ ಕಾರಣವಾಗಿದೆ ಎಂದು ಎಡಿಜೆ ಮನೋಜ್ ಶುಕ್ಲಾ ಆರೋಪಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಮನೋಜ್ ಶುಕ್ಲಾ ಜೆಸಿಬಿ ಎದುರು ಮಲಗಿರುವ ಬಗ್ಗೆ ಟ್ವೀಟ್ ಮಾಡಿದ್ದು, ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ನ್ಯಾಯಾಂಗ ಅಧಿಕಾರಿಗೇ ಹೀಗಾದರೆ ಸಾಮಾನ್ಯ ಜನರಿಗೆ ಏನಾಗಬಹುದು ಎಂದು ಊಹಿಸಿ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Viral Video: ಮುನ್ನಾರ್​ ರಸ್ತೆಯಲ್ಲಿ ಬಸ್​ ಎದುರು ಬಂದು ಗಾಜು ಒಡೆದ ಕಾಡಾನೆ; ಚಾಲಕ ಮಾಡಿದ್ದೇನು?

Viral Video: ಬಾಯಾರಿದ ಕೋತಿಗೆ ನೀರು ಕುಡಿಸಿದ ಟ್ರಾಫಿಕ್ ಪೊಲೀಸ್; ಹೃದಯಸ್ಪರ್ಶಿ ವಿಡಿಯೋಗೆ ನೆಟ್ಟಿಗರ ಮೆಚ್ಚುಗೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?