AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಳಿಂದಿ ರೈಲು ಹಳಿ ತಪ್ಪಿಸಲು ಯತ್ನ, ಹಳಿಯಲ್ಲಿ ಸಿಲಿಂಡರ್​, ಪೆಟ್ರೋಲ್​ ಬಾಟಲಿಗಳು ಪತ್ತೆ

ಕಾಳಿಂದಿ ಎಕ್ಸ್​ಪ್ರೆಸ್​ ರೈಲು ಸ್ವಲ್ಪದರಲ್ಲೇ ಭಾರಿ ಅಪಘಾತದಿಂದ ಪಾರಾಗಿದೆ. ಅಪಾಯಕಾರಿ ವಸ್ತುಗಳು ಹಳಿಗಳ ಮೇಲೆ ಪತ್ತೆಯಾದ ನಂತರ ದೊಡ್ಡ ರೈಲು ದುರಂತವನ್ನು ತಪ್ಪಿಸಲಾಗಿದೆ. ಸಿಲಿಂಡರ್, ಪೆಟ್ರೋಲ್ ಬಾಟಲ್ ಮತ್ತು ಪೌಡರ್‌ನಂತಹ ಅಪಾಯಕಾರಿ ವಸ್ತುಗಳು ಹಳಿಗಳ ಮೇಲೆ ಪತ್ತೆಯಾಗಿವೆ.

ಕಾಳಿಂದಿ ರೈಲು ಹಳಿ ತಪ್ಪಿಸಲು ಯತ್ನ, ಹಳಿಯಲ್ಲಿ ಸಿಲಿಂಡರ್​, ಪೆಟ್ರೋಲ್​ ಬಾಟಲಿಗಳು ಪತ್ತೆ
ಸಿಲಿಂಡರ್
ನಯನಾ ರಾಜೀವ್
|

Updated on: Sep 09, 2024 | 9:33 AM

Share

ಕಾನ್ಪುರದಲ್ಲಿ ಕಾಳಿಂದಿ ಎಕ್ಸ್​ಪ್ರೆಸ್​ ರೈಲು ಹಳಿ ತಪ್ಪಿಸುವ ಯತ್ನ ನಡೆದಿದ್ದು, ಹಳಿಯಲ್ಲಿ ಗ್ಯಾಸ್​ ಸಿಲಿಂಡರ್​, ಪೆಟ್ರೋಲ್​ ಬಾಟಲಿಗಳು ಸಿಕ್ಕಿವೆ. ಭಾರಿ ಅನಾಹುತ ತಪ್ಪಿದೆ. ಅಪಾಯಕಾರಿ ವಸ್ತುಗಳು ಹಳಿಗಳ ಮೇಲೆ ಪತ್ತೆಯಾದ ನಂತರ ದೊಡ್ಡ ರೈಲು ದುರಂತವನ್ನು ತಪ್ಪಿಸಲಾಗಿದೆ.

ನಿನ್ನೆ ರಾತ್ರಿ 8.25 ರ ಸುಮಾರಿಗೆ ಈ ಘಟನೆ ನಡೆದಿದ್ದು, ಕಾಳಿಂದಿ ಎಕ್ಸ್‌ಪ್ರೆಸ್ ಬರಜ್‌ಪುರ ನಿಲ್ದಾಣದಿಂದ ಹೊರಟು 2.3 ಕಿಲೋಮೀಟರ್ ದೂರದಲ್ಲಿದ್ದಾಗ ಹಳಿಗಳ ಮೇಲೆ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್‌ಗೆ ಡಿಕ್ಕಿ ಹೊಡೆದು ಸ್ಫೋಟ ಸಂಭವಿಸಿದೆ. ದೊಡ್ಡ ಶಬ್ದವನ್ನು ಕೇಳಿದ ಲೊಕೊ ಪೈಲಟ್ ತಕ್ಷಣ ತುರ್ತು ಬ್ರೇಕ್‌ ಹಾಕಿದ್ದಾರೆ.

ಬಳಿಕ ಇಳಿದು ನೋಡಿದಾಗ ಅಪಾಯಕಾರಿ ವಸ್ತುಗಳು ಹಳಿಯಲ್ಲಿರುವುದು ಕಂಡುಬಂದಿತ್ತು. ತಕ್ಷಣ ರೈಲ್ವೆ ಪ್ರೊಟೆಕ್ಷನ್ ಫೋರ್ಸ್​ಗೆ ಮಾಹಿತಿ ನೀಡಲಾಗಿತ್ತು. ಪ್ರದೇಶದ ಸಂಪೂರ್ಣ ಶೋಧ ನಡೆಸಲಾಯಿತು. ರೈಲಿಗೆ ಡಿಕ್ಕಿಯಾದ ಕಾರಣ ಸಿಲಿಂಡರ್ ಹಳಿಯಿಂದ ತುಂಬಾ ದೂರ ಹೋಗಿ ಬಿದ್ದಿದೆ.

ಮತ್ತಷ್ಟು ಓದಿ: ಚಲಿಸುತ್ತಿರುವಾಗಲೇ ಬೇರ್ಪಟ್ಟ ಮಗಧ್ ರೈಲಿನ ಬೋಗಿಗಳು

ಈ ಸಂಬಂಧ ಎಫ್‌ಐಆರ್ ಕೂಡ ದಾಖಲಾಗಿದ್ದು, ಘಟನೆಯ ತೀವ್ರತೆಯನ್ನು ಗಮನಿಸಿದ ರೈಲ್ವೆ ಅಧಿಕಾರಿಗಳು ಉತ್ತರ ಪ್ರದೇಶ ಡಿಜಿಪಿ ಮತ್ತು ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ರೈಲು ತನ್ನ ಪ್ರಯಾಣವನ್ನು ಪುನರಾರಂಭಿಸುವ ಮೊದಲು ಘಟನೆಯ ಸ್ಥಳದಲ್ಲಿ ಸುಮಾರು 20 ನಿಮಿಷಗಳ ಕಾಲ ನಿಂತಿತ್ತು.

ಘಟನೆಯಲ್ಲಿ ಲೊಕೊ ಪೈಲಟ್ ಗಾಯಗೊಂಡಿಲ್ಲ ಮತ್ತು ರೈಲಿಗೆ ಯಾವುದೇ ಹಾನಿಯಾಗಿಲ್ಲ ಎಂದು ಈಶಾನ್ಯ ರೈಲ್ವೆ (ಎನ್‌ಇಆರ್) ತಿಳಿಸಿದೆ. ಲೊಕೊ ಪೈಲಟ್ ಮತ್ತು ರೈಲು ವ್ಯವಸ್ಥಾಪಕರು ಆರ್‌ಪಿಎಫ್‌ಗೆ ಎಚ್ಚರಿಕೆ ನೀಡಿದ್ದು, ಅವರು ಅಧಿಕಾರಿಗಳಿಗೆ ತಿಳಿಸುವ ಮೊದಲು ಸಿಲಿಂಡರ್ ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಂಡರು.

ಟ್ರ್ಯಾಕ್​ ಮೇಲೆ ಪೆಟ್ರೋಲ್, ಗ್ಯಾಸ್ ಸಿಲಿಂಡರ್, ಗನ್​ಪೌಡರ್​ ಇರುವ ಚೀಲ ಸೇರಿದಂತೆ ಹಲವು ಅಪಾಯಕಾರಿ ವಸ್ತುಗಳು ಸಿಕ್ಕಿದ್ದು, ಫೋರೆನ್ಸಿಕ್ ತಂಡವನ್ನೂ ಸ್ಥಳಕ್ಕೆ ಕರೆಸಿದ್ದಾರೆ. ಘಟನೆಯ ತನಿಖೆಯನ್ನು ಇಂಟೆಲಿಜೆನ್ಸ್ ಬ್ಯೂರೋ ಹಸ್ತಾಂತರಿಸಲಾಗಿದೆ. ಘಟನೆ ನಡೆದ ಸ್ಥಳದ ಸಂಪೂರ್ಣ ಕಣ್ಗಾವಲು ನಂತರ ಎಫ್‌ಐಆರ್ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!