AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ಕೊಡುವಂತೆ ಬರೆದ ಮೆಸೇಜ್​ನಲ್ಲಿದ್ದ ಸ್ಪೆಲಿಂಗ್ ಮಿಸ್ಟೇಕ್​ನಿಂದ ಸಿಕ್ಕಿಬಿದ್ದ ಅಪಹರಣಕಾರ

ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಗುತ್ತಿಗೆದಾರರೊಬ್ಬರನ್ನು ಅಪಹರಿಸುವ ಯತ್ನವನ್ನು ಪೊಲೀಸರು ವಿಫಲಗೊಳಿಸಿದ್ದು, ಮೆಸೇಜ್​ನಲ್ಲಿ ಬರೆದಿದ್ದ ತಪ್ಪನ್ನು ಬಳಸಿಕೊಂಡು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಡರಹಾ ಗ್ರಾಮದ ಗುತ್ತಿಗೆದಾರ ಸಂಜಯ್ ಕುಮಾರ್ ಎಂಬುವರು ತಮ್ಮ ಸಹೋದರ ಸಂದೀಪ್ (27) ಅವರನ್ನು ಅಪಹರಿಸಿರುವುದಾಗಿ ಅಪರಿಚಿತ ನಂಬರ್‌ನಿಂದ ಮೆಸೇಜ್ ಬಂದಿದ್ದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಹಣ ಕೊಡುವಂತೆ ಬರೆದ ಮೆಸೇಜ್​ನಲ್ಲಿದ್ದ ಸ್ಪೆಲಿಂಗ್ ಮಿಸ್ಟೇಕ್​ನಿಂದ ಸಿಕ್ಕಿಬಿದ್ದ ಅಪಹರಣಕಾರ
ಅಪಹರಣImage Credit source: Banner Financial Service
ನಯನಾ ರಾಜೀವ್
|

Updated on: Jan 08, 2025 | 3:10 PM

Share

ಹಣ ಕೊಡುವಂತೆ ಬರೆದ ಮೆಸೇಜ್​ನಲ್ಲಿ ಸ್ಪೆಲಿಂಗ್ ಮಿಸ್ಟೇಕ್​ನಿಂದಾಗಿ ಅಪಹರಣಕಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಹರ್ದೋಯ್​ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಸಹೋದರನಿಗೆ 5 ಸಾವಿರ ರೂ. ವಂಚನೆ ಮಾಡಲು ಹೋಗಿ ಸಿಕ್ಕಿಹಾಕಿಕೊಂಡಿರುವ ಘಟನೆ ಇದಾಗಿದೆ.

ಜನವರಿ 5 ರಂದು, ಪಿಹಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಬಂದರ್ಹಾ ಗ್ರಾಮದ ನಿವಾಸಿ ಗುತ್ತಿಗೆದಾರ ಸಂಜಯ್ ಕುಮಾರ್, ತನ್ನ 27 ವರ್ಷದ ಸಹೋದರ ಸಂದೀಪ್‌ನನ್ನು ಅಪಹರಿಸಲಾಗಿದೆ ಎಂದು ಅಪರಿಚಿತ ಸಂಖ್ಯೆಯಿಂದ ಮಾಹಿತಿ ಬಂದಿದ್ದು, ಬೇಡಿಕೆಯಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಆತನನ್ನು ಬಿಡುಗಡೆ ಮಾಡಲು 5 ಸಾವಿರ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಷ್ಟೇ ಅಲ್ಲದೆ ಒಂದೊಮ್ಮೆ ಹಣ ಕೊಡದಿದ್ದರೆ ಸಾವು ಖಚಿತ ಎಂದು ಬರೆಯಲು Death ಬದಲು Deth ಎಂದು ತಪ್ಪಾಗಿ ಬರೆದಿದ್ದ. 13 ಸೆಕೆಂಡುಗಳ ವಿಡಿಯೋವನ್ನು ಕೂಡ ಬಿಡುಗಡೆ ಮಾಡಿದ್ದು ಅದರಲ್ಲಿ ಸಂದೀಪ್​ನನ್ನು ಯಾರೋ ಕಟ್ಟಿಹಾಕಿರುವುದನ್ನು ಕಾಣಬಹುದು.

ಆದರೆ ಸಂದೀಪ್​ಗೆ ಯಾರೊಂದಿಗೂ ದ್ವೇಷ ಇರಲಿಲ್ಲ. ಸುಲಿಗೆ ಮೊತ್ತ ಕೂಡ ದೊಡ್ಡದಲ್ಲ ಹೀಗಾಗಿ ಅನುಮಾನ ಮೂಡಿತ್ತು. ಹಾಗೆಯೇ ಸ್ಪೆಲ್ಲಿಂಗ್ ಮಿಸ್ಟೇಕ್​ನ್ನು ಕೂಡ ಪೊಲೀಸರು ಕಂಡು ಹಿಡಿದಿದ್ದರು, ಜತೆಗೆ ಅಪಹರಣಕಾರ ವಿದ್ಯಾವಂತನಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದ್ದರು.

ಮತ್ತಷ್ಟು ಓದಿ: ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ

ಮೊಬೈಲ್ ಲೊಕೇಶನ್ ಆಧರಿಸಿ ಪೊಲೀಸರು ನಡೆಸಿದ ಹುಡುಕಾಟದಲ್ಲಿ ರೂಪಾಪುರದಲ್ಲಿ ಸಂದೀಪ್ ಪತ್ತೆಯಾಗಿದ್ದಾನೆ, ಅವನ ಬಳಿ ಡೆತ್ ಎಂದು ಬರೆಸಲಾಯಿತು ಆಗಲೂ ಆತ ತಪ್ಪಾಗಿಯೇ ಬರೆದಿದ್ದ.

ನಂತರ ತನ್ನ ಅಪಹರಣದ ಸುಳ್ಳು ಕಥೆಯನ್ನು ಹೆಣೆದಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ ಮತ್ತು ಟಿವಿಯಲ್ಲಿ ಸಿಐಡಿ ಧಾರಾವಾಹಿಯನ್ನು ನೋಡಿದ ನಂತರ ತನ್ನ ಸಹೋದರನಿಂದ ಹಣ ವಸೂಲಿ ಮಾಡುವ ಆಲೋಚನೆ ನನಗೆ ಬಂದಿತು ಎಂದು ಪೊಲೀಸರಿಗೆ ತಿಳಿಸಿದ್ದಾನೆ.

ಸಂದೀಪ್ ಅವರು ಪಾಲಿ ಪ್ರದೇಶದ ಮಿರ್ಜಾಪುರ ಕಬ್ಬು ಖರೀದಿ ಕೇಂದ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚೆಗೆ ಅವರ ಬೈಕ್ ಡಿ.30 ರಂದು ಸಹಾಬಾದ್‌ನಲ್ಲಿ ವಯೋವೃದ್ಧರಿಗೆ ಡಿಕ್ಕಿ ಹೊಡೆದು ಅವರ ಕಾಲಿಗೆ ಮೂಳೆ ಮುರಿತವಾಗಿತ್ತು. ಬೇರೆ ಕಡೆಯವರು ಪರಿಹಾರಕ್ಕಾಗಿ ಬೇಡಿಕೆ ಇಟ್ಟಿದ್ದರಿಂದ ಅವರಿಗೆ ಹಣದ ಅವಶ್ಯಕತೆ ಇತ್ತು, ಆರೋಪಿಯನ್ನು ಬಂಧಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು