AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ ಪತಿಯ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧ, ಜಮೀನಿಗಾಗಿ ಅತ್ತೆಯನ್ನೇ ಕೊಂದ ಮಹಿಳೆ

ಉತ್ತರ ಪ್ರದೇಶದ ಝಾನ್ಸಿಯಲ್ಲಿ ನಡೆದ ಮಹಿಳೆ ಕೊಲೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಝಾನ್ಸಿಯಲ್ಲಿ 54 ವರ್ಷದ ಮಹಿಳೆಯ ಕೊಲೆ ನಡೆದಿತ್ತು. ಜತೆಗೆ ಮನೆಯಲ್ಲಿದ್ದ ಚಿನ್ನಾಭರಣವೆಲ್ಲಾ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮೃತ ಪತಿಯ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧ, ಜಮೀನಿಗಾಗಿ ಅತ್ತೆಯನ್ನೇ ಕೊಂದ ಮಹಿಳೆ
ಮಹಿಳೆ Image Credit source: India Today
ನಯನಾ ರಾಜೀವ್
|

Updated on:Jul 03, 2025 | 10:38 AM

Share

ಝಾನ್ಸಿ, ಜುಲೈ 03: ಉತ್ತರ ಪ್ರದೇಶ(Uttar Pradesh) ದ ಝಾನ್ಸಿಯಲ್ಲಿ ನಡೆದ ಮಹಿಳೆ ಕೊಲೆ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಝಾನ್ಸಿಯಲ್ಲಿ 54 ವರ್ಷದ ಮಹಿಳೆಯ ಕೊಲೆ ನಡೆದಿತ್ತು. ಜತೆಗೆ ಮನೆಯಲ್ಲಿದ್ದ ಚಿನ್ನಾಭರಣವೆಲ್ಲಾ ಕಳ್ಳತನವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮಹಿಳೆಯ ಸೊಸೆಯನ್ನು ಪೊಲೀಸರು ಬಂಧಿಸಿದ್ದಾರೆ.

ಸುಶೀಲಾ ದೇವಿಯನ್ನು ಕೊಂದ ಆರೋಪಿ ಪೂಜಾ ಮತ್ತು ಆಕೆಯ ಸಹೋದರಿ ಕಮಲಾ ನ್ಯಾಯಾಂಗ ಬಂಧನದಲ್ಲಿದ್ದಾರೆ, ಕೊಲೆಯ ನಂತರ ಪರಾರಿಯಾಗಿದ್ದ ಕಮಲಾಳ ಪ್ರಿಯಕರ ಅನಿಲ್ ವರ್ಮಾನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ. ಈ ಮೂವರು ಸುಶೀಲಾದೇವಿಯ ಕೊಲೆಗೆ ಸಂಚು ರೂಪಿಸಿದ್ದರು. ಝಾನ್ಸಿಯಲ್ಲಿರುವ ಮನೆಯಿಂದ 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೂಜಾ ತನ್ನ ಪತಿ ಮೃತಪಟ್ಟ ಬಳಿಕ ಅವರ ಇಬ್ಬರು ಸಹೋದರರ ಜತೆ ಅಕ್ರಮ ಸಂಬಂಧದಲ್ಲಿದ್ದಳು. ಜತೆಗೆ ಆಸ್ತಿಯನ್ನು ಕಬಳಿಸಲು ಸಂಚು ರೂಪಿಸಿದ್ದಳು. ಆಕೆಯ ಜತೆ ಆಕೆಯ ಸಹೋದರಿಯ ಪ್ರಿಯಕರ ಅನಿಲ್ ವರ್ಮಾ ಕೂಡ ಇದ್ದರು. ಕದ್ದ ಆಭರಣಗಳನ್ನು ಸಂಬಂಧಿಕರೊಬ್ಬರಿಗೆ ಮಾರಾಟ ಮಾಡಲು ಅನಿಲ್ ವರ್ಮಾ ತೆರಳುತ್ತಿದ್ದಾಗ ಪೊಲೀಸರು ಅಲ್ಲಿಗೆ ಹೋಗಿದ್ದಾರೆ. ವರ್ಮಾ ಪೊಲೀಸರ ಮೇಲೆ ಗುಂಡು ಹಾರಿಸಿದ್ದ, ಹೀಗಾಗಿ ಪೊಲೀಸರು ಕೂಡ ಅತನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಮತ್ತಷ್ಟು ಓದಿ: ಸುಳ್ಳು ಕೊಲೆ ಕೇಸ್ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿ ಕೆಲಸ ಕಳೆದುಕೊಂಡ ಪೊಲೀಸರು

ಜೂನ್ 24 ರಂದು ಕುಮ್ಹರಿಯಾ ಗ್ರಾಮದಲ್ಲಿ ಸುಶೀಲಾ ದೇವಿ ಶವವಾಗಿ ಪತ್ತೆಯಾಗಿದ್ದರು. ಪೂಜಾ ತನ್ನ ಆಸ್ತಿ ಮಾರಿ ಮಧ್ಯಪ್ರದೇಶದ ಗ್ವಾಲಿಯರ್‌ಗೆ ಹೋಗಲು ಬಯಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೂಜಾಗೆ ಈಗಾಗಲೇ ಮದುವೆಯಾಗಿದ್ದ ಮೈದುನನ ಜತೆ ಅಕ್ರಮ ಸಂಬಂಧವಿತ್ತು. ಭೂಮಿಯನ್ನು ಮಾರಾಟ ಮಾಡಲು ಇಬ್ಬರು ಮೈದುನರೂ ಒಪ್ಪಿದರೂ ಸುಶೀಲಾ ದೇವಿ ಒಪ್ಪಿರಲಿಲ್ಲ. ಹಾಗಾಗಿ ಆಕೆಯ್ನು ಹತ್ಯೆ ಮಾಡಲು ಸಂಚು ರೂಪಸಿದ್ದಳು.

ಪತಿಯ ಮರಣದ ನಂತರ ಪೂಜಾ ಝಾನ್ಸಿಯಲ್ಲಿ ಸುಶೀಲಾ ದೇವಿಯ ಕಿರಿಯ ಮಗ ಕಲ್ಯಾಣ್ ಸಿಂಗ್ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರು ವರ್ಷಗಳ ಹಿಂದೆ ಕಲ್ಯಾಣ್ ಸಿಂಗ್ ನಿಧನರಾದಾಗ, ಸುಶೀಲಾ ದೇವಿಯ ಮತ್ತೊಬ್ಬ ಮಗ ಸಂತೋಷ್ ಮತ್ತು ಅಜಯ್ ಪೂಜಾಳನ್ನು ಕುಮ್ಹರಿಯಾ ಗ್ರಾಮಕ್ಕೆ ಕರೆದೊಯ್ದಿದ್ದರು.

ಪೂಜಾ ಸಂತೋಷ್ ಜೊತೆ ಸಂಬಂಧ ಇಟ್ಟುಕೊಂಡಿದ್ದಳು ಹೆಣ್ಣು ಮಗು ಕೂಡ ಜನಿಸಿತ್ತು, ಸಂತೋಷ್ ಪತ್ನಿ ರಾಗಿಣಿ ಅವರ ಸಂಬಂಧಕ್ಕೆ ಆಕ್ಷೇಪ ವ್ಯಕ್ತಪಡಿಸಿ ಒಂಬತ್ತು ತಿಂಗಳ ಹಿಂದೆ ತನ್ನ ತಾಯಿಯ ಮನೆಗೆ ಹೋಗಿದ್ದರು ಎಂದು ಎಸ್‌ಪಿ ಕುಮಾರ್ ತಿಳಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ ಪೂಜಾ, ಸುಶೀಲಾ ದೇವಿಯ ಕೊಲೆಗೆ ತನ್ನ ಸಹೋದರಿ ಪೂಜಾ ಮತ್ತು ಆಕೆಯ ಪ್ರಿಯಕರ ಅನಿಲ್ ವರ್ಮಾ ಜೊತೆ ಸೇರಿ ಸಂಚು ರೂಪಿಸಿದ್ದಾಗಿ ಹೇಳಿದ್ದಾಳೆಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:36 am, Thu, 3 July 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ