ಉತ್ತರ ಪ್ರದೇಶ ಚುನಾವಣೆಯಲ್ಲಿ ದೊಡ್ಡ ಟ್ವಿಸ್ಟ್; 6 ಇಂಡಿಯ ಬ್ಲಾಕ್ ಸಂಸದರಿಗೆ ಕಾನೂನು ಕಂಟಕ!

UP Election Results: ಉತ್ತರ ಪ್ರದೇಶ ಲೋಕಸಭಾ ಚುನಾವಣೆ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಉತ್ತರ ಪ್ರದೇಶದಲ್ಲಿ ಈ ಬಾರಿ ಎನ್​ಡಿಎ ನೀರಸ ಪ್ರತಿಕ್ರಿಯೆ ತೋರಿದೆ. ಆದರೆ, ಈ ಬಾರಿ ಉತ್ತರ ಪ್ರದೇಶದಿಂದ ಗೆದ್ದಿರುವ ಇಂಡಿಯ ಬ್ಲಾಕ್ ಸಂಸದರು ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ದೊಡ್ಡ ಟ್ವಿಸ್ಟ್; 6 ಇಂಡಿಯ ಬ್ಲಾಕ್ ಸಂಸದರಿಗೆ ಕಾನೂನು ಕಂಟಕ!
ರಾಹುಲ್ ಗಾಂಧಿ ಮತ್ತು ಅಖಿಲೇಶ್ ಯಾದವ್
Follow us
|

Updated on:Jun 11, 2024 | 4:18 PM

ಲಕ್ನೋ: ಉತ್ತರ ಪ್ರದೇಶ ಚುನಾವಣಾ ಫಲಿತಾಂಶದಲ್ಲಿ (Uttar Pradesh Lok Sabha Election Results) ಒಂದು ಟ್ವಿಸ್ಟ್ ಎದುರಾಗಿದೆ. ಇದರ ಪ್ರಕಾರ, ಇಂಡಿಯ ಬ್ಲಾಕ್​ನ (INDIA Bloc) ಅರ್ಧ ಡಜನ್ ಸಂಸದರು ಅಪರಾಧಿಗಳಾಗಬಹುದು. ಒಂದುವೇಳೆ ಉತ್ತರ ಪ್ರದೇಶದ ಸಂಸದರು ತಪ್ಪಿತಸ್ಥರಾದರೆ ರಾಹುಲ್ ಗಾಂಧಿ (Rahul Gandhi) ಮತ್ತು ಅಖಿಲೇಶ್ ಯಾದವ್ (Akhilesh Yadav) ನೇತೃತ್ವದ ಇಂಡಿಯ ಬಣಕ್ಕೆ ಹಿನ್ನಡೆಯಾಗಬಹುದು. ಇಂಡಿಯ ಬ್ಲಾಕ್‌ನ ಕನಿಷ್ಠ 6 ಮಂದಿ ಹೊಸದಾಗಿ ಚುನಾಯಿತರಾದ ಸಂಸದರು ಮತ್ತು ಇನ್ನೂ ಒಬ್ಬರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದು, ಇದು 2 ವರ್ಷಗಳಿಗಿಂತ ಹೆಚ್ಚು ಜೈಲು ಶಿಕ್ಷೆಗೆ ಗುರಿಯಾಗಬಹುದು. ಒಂದುವೇಳೆ ಇದೇನಾದರೂ ನಿಜವಾದರೆ ಈ ಸಂಸದರು ಸಂಸತ್ತಿನ ಸದಸ್ಯತ್ವವನ್ನು ಕಳೆದುಕೊಳ್ಳುವ ಅಪಾಯವನ್ನು ಎದುರಿಸುತ್ತಾರೆ.

ಉತ್ತರ ಪ್ರದೇಶದ ಘಾಜಿಪುರ ಕ್ಷೇತ್ರದಿಂದ ಗೆದ್ದಿರುವ ಅಫ್ಜಲ್ ಅನ್ಸಾರಿ ಈಗಾಗಲೇ ವಂಚನೆ ಕೃತ್ಯ ಪ್ರಕರಣದಲ್ಲಿ 4 ವರ್ಷಗಳ ಶಿಕ್ಷೆಗೆ ಗುರಿಯಾಗಿದ್ದಾರೆ. ಕಳೆದ ತಿಂಗಳು ಅವರ ಶಿಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ನೀಡಿತು. ಇದರಿಂದಾಗಿ ಇದು ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತು. ಬೇಸಿಗೆ ರಜೆಯ ನಂತರ ನ್ಯಾಯಾಲಯವು ಪುನರಾರಂಭಗೊಂಡಾಗ ಈ ಪ್ರಕರಣದ ವಿಚಾರಣೆಯನ್ನು ಜುಲೈನಲ್ಲಿ ನಿಗದಿಪಡಿಸಿದೆ. ಅಂತಿಮವಾಗಿ ನ್ಯಾಯಾಲಯ ಶಿಕ್ಷೆಯನ್ನು ಎತ್ತಿ ಹಿಡಿದರೆ, ಅನ್ಸಾರಿ ಅವರು ತಮ್ಮ ಲೋಕಸಭಾ ಸದಸ್ಯತ್ವವನ್ನು ಕಳೆದುಕೊಳ್ಳುತ್ತಾರೆ.

ಅಜಂಗಢ ಕ್ಷೇತ್ರದಿಂದ ಗೆದ್ದಿರುವ ಧರ್ಮೇಂದ್ರ ಯಾದವ್ ಅವರ ಹೆಸರಿನ ವಿರುದ್ಧವೂ 4 ಪ್ರಕರಣಗಳು ಬಾಕಿ ಉಳಿದಿವೆ ಮತ್ತು ಅವರು 2 ವರ್ಷಗಳಿಗಿಂತ ಹೆಚ್ಚು ಕಾಲ ಶಿಕ್ಷೆಗೊಳಗಾದರೆ, ಅವರು ತಮ್ಮ ಸದಸ್ಯತ್ವವನ್ನು ಕಳೆದುಕೊಳ್ಳಬಹುದು.

ಇದನ್ನೂ ಓದಿ: Modi Cabinet Meeting: ನೂತನ ಸಚಿವರ ಜೊತೆ ಪಿಎಂ ನರೇಂದ್ರ ಮೋದಿ ಮೊದಲ ಸಂಪುಟ ಸಭೆ

ರಾಜಕೀಯದಲ್ಲಿ 10 ವರ್ಷಗಳ ವನವಾಸವನ್ನು ಕೊನೆಗೊಳಿಸಿದ ಜೌನ್‌ಪುರ ಕ್ಷೇತ್ರವನ್ನು ಗೆದ್ದಿರುವ ಬಾಬು ಸಿಂಗ್ ಕುಶ್ವಾಹಾ ಅವರು ಸಚಿವರಾಗಿದ್ದ ಮಾಯಾವತಿ ಆಡಳಿತದಲ್ಲಿ ನಡೆದ NRHM ಹಗರಣಕ್ಕೆ ಸಂಬಂಧಿಸಿದ ಹಲವಾರು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಅವರ ವಿರುದ್ಧ ದಾಖಲಾಗಿರುವ 25 ಪ್ರಕರಣಗಳ ಪೈಕಿ ಎಂಟು ಪ್ರಕರಣಗಳಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

ಸುಲ್ತಾನ್‌ಪುರ ಕ್ಷೇತ್ರದಲ್ಲಿ ಬಿಜೆಪಿಯ ಮೇನಕಾ ಗಾಂಧಿ ಅವರನ್ನು ಸೋಲಿಸಿ ಗೆದ್ದಿರುವ ರಾಂಭುವಲ್ ನಿಶಾದ್ ಅವರ ವಿರುದ್ಧ ದರೋಡೆಕೋರರ ಕಾಯ್ದೆಯಡಿ ಒಂದು ಸೇರಿದಂತೆ 8 ಪ್ರಕರಣಗಳು ದಾಖಲಾಗಿವೆ. 2024ರ ಲೋಕಸಭೆ ಚುನಾವಣೆಯ ‘ದುರ್ಬಲ’ ಜಯಶಾಲಿಗಳಲ್ಲಿ ಅವರು ಕೂಡ ಸೇರಿದ್ದಾರೆ.

ಚಂದೌಲಿ ಲೋಕಸಭಾ ಕ್ಷೇತ್ರದಿಂದ ಮಾಜಿ ಸಚಿವ ಮಹೇಂದ್ರ ನಾಥ್ ಪಾಂಡೆ ಅವರನ್ನು ಸೋಲಿಸಿದ ವೀರೇಂದ್ರ ಸಿಂಗ್, ಅಪರಾಧ ಪ್ರಕರಣಗಳನ್ನು ಎದುರಿಸುತ್ತಿರುವ ಮತ್ತೊಬ್ಬ ಎಸ್‌ಪಿ ಅಭ್ಯರ್ಥಿ. ಸಹರಾನ್‌ಪುರ ಕ್ಷೇತ್ರದಿಂದ ಗೆದ್ದಿರುವ ಕಾಂಗ್ರೆಸ್‌ನ ಇಮ್ರಾನ್ ಮಸೂದ್ ವಿರುದ್ಧ 8 ಪ್ರಕರಣಗಳು ದಾಖಲಾಗಿವೆ. ಇಡಿಯಿಂದ ಹಣ ವರ್ಗಾವಣೆಗೆ ಸಂಬಂಧಿಸಿದ ಪ್ರಕರಣಗಳು ಸೇರಿವೆ. ಅವರ ವಿರುದ್ಧ 2 ಪ್ರಕರಣಗಳಲ್ಲಿ ಆರೋಪಗಳನ್ನು ಹೊರಿಸಲಾಗಿದೆ.

ಇದನ್ನೂ ಓದಿ: ಲೋಕಸಭಾ ಫಲಿತಾಂಶ ಬೆನ್ನಲ್ಲೇ ಬೆಳಗಾವಿ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ, ಸ್ವಪಕ್ಷದ ಶಾಸಕರ ವಿರುದ್ಧವೇ ಸಿಡಿದೆದ್ದ ಜಾರಕಿಹೊಳಿ

ನಗೀನಾ ಮೀಸಲು ಸ್ಥಾನವನ್ನು ಗೆದ್ದಿರುವ ಆಜಾದ್ ಸಮಾಜ ಪಕ್ಷದ ಏಳನೇ ಅಭ್ಯರ್ಥಿ ಚಂದ್ರಶೇಖರ್ ಆಜಾದ್ ಅವರ ವಿರುದ್ಧ 30ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಯಾವುದಾದರೂ ಒಂದು ಪ್ರಕರಣದಲ್ಲಿ 2 ವರ್ಷಕ್ಕಿಂತ ಹೆಚ್ಚು ಶಿಕ್ಷೆಯಾದರೆ, ಅವರ ರಾಜಕೀಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ನಂತರ ಹಲವಾರು ರಾಜಕೀಯ ನಾಯಕರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿರುವ ಉದಾಹರಣೆಗಳಿವೆ. ಅವರಲ್ಲಿ ಪ್ರಮುಖರೆಂದರೆ ಮೊಹಮ್ಮದ್ ಅಜಂ ಖಾನ್, ಅವರ ಪುತ್ರ ಎಸ್‌ಪಿಯ ಅಬ್ದುಲ್ಲಾ ಅಜಮ್, ಖಬೂ ತಿವಾರಿ, ವಿಕ್ರಮ್ ಸೈನಿ, ರಾಮ್ ದುಲಾರ್ ಗೊಂಡ್, ಕುಲದೀಪ್ ಸೆಂಗರ್ ಮತ್ತು ಅಶೋಕ್ ಚಂದೇಲ್. ಇವರೆಲ್ಲರೂ ಬಿಜೆಪಿಯವರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Tue, 11 June 24

ತಾಜಾ ಸುದ್ದಿ
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್