AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ

ಉತ್ತರ ಪ್ರದೇಶದ ಮೌನಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ತಂದೂರಿ ರೊಟ್ಟಿ ತಯಾರಿಸುವಾಗ ಆ ರೊಟ್ಟಿಯ ಹಿಟ್ಟಿನ ಮೇಲೆ ಎಂಜಲು ಉಗುಳಿದ್ದಾನೆ. ಈ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಪೊಲೀಸರು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಇದೇ ರೀತಿಯ ಘಟನೆ ಈ ಮೊದಲು ಕೂಡ ನಡೆದಿತ್ತು. ರೊಟ್ಟಿಯ ಹಿಟ್ಟಿಗೆ ಎಂಜಲು ಹಾಕಿದ, ಹಾಲಿನ ಕ್ಯಾನ್​ಗೆ ಉಗುಳಿದ ಪ್ರಕರಣಗಳು ನಡೆದಿದ್ದವು.

ಹಿಟ್ಟಿನ ಮೇಲೆ ಎಂಜಲು ಉಗುಳಿ ರೊಟ್ಟಿ ಮಾಡಿದ ವ್ಯಕ್ತಿಯ ಬಂಧನ
Rotti
ಸುಷ್ಮಾ ಚಕ್ರೆ
|

Updated on: Dec 06, 2025 | 9:34 PM

Share

ನವದೆಹಲಿ, ಡಿಸೆಂಬರ್ 6: ಉತ್ತರ ಪ್ರದೇಶದ ಮೌ ಬಳಿಯ ಹಳ್ಳಿಯೊಂದರಲ್ಲಿ ನಡೆದ ಮದುವೆ ಆರತಕ್ಷತೆಯಲ್ಲಿ ತಂದೂರಿ ರೊಟ್ಟಿ (Rotti) ತಯಾರಿಸುವಾಗ ಹಿಟ್ಟಿನ ಮೇಲೆ ಎಂಜಲು ಉಗುಳಿದ ಆರೋಪದ ಮೇಲೆ ಪೊಲೀಸರು ಇಂದು ಆ ವ್ಯಕ್ತಿಯನ್ನು ಬಂಧಿಸಿದ್ದಾರೆ. ಆತನ ಕೃತ್ಯ ಕ್ಯಾಮೆರಾದಲ್ಲಿ ರೆಕಾರ್ಡ್ ಆಗಿತ್ತು.

ಈ ಘಟನೆ ಶುಕ್ರವಾರ ಈ ಗ್ರಾಮದ ಮಾಜಿ ಮುಖ್ಯಸ್ಥ ಅವಧೇಶ್ ಮೌರ್ಯ ಅವರ ನಿವಾಸದಲ್ಲಿ ನಡೆದಿದೆ. ಈ ಬಗ್ಗೆ ಹೆಚ್ಚುವರಿ ಎಸ್ಪಿ ಅನುಪ್ ಕುಮಾರ್ ಪಿಟಿಐಗೆ ಮಾಹಿತಿ ನೀಡಿದ್ದಾರೆ. “ಆರೋಪಿ ಅಹ್ಮದ್ ಮದುವೆ ಸಮಾರಂಭದಲ್ಲಿ ರೊಟ್ಟಿ ತಯಾರಿಸುತ್ತಿದ್ದರು. ಅವರು ಹಿಟ್ಟಿಗೆ ಎಂಜಲು ಉಗುಳಿದ್ದಾರೆ ಎಂದು ನಮಗೆ ದೂರು ಬಂದಿತ್ತು. ಈ ಬಗ್ಗೆ ಕಾಣಿಸಿಕೊಂಡ ವೀಡಿಯೊವನ್ನು ಆಧರಿಸಿ, ಅವರನ್ನು ಬಂಧಿಸಲಾಗಿದೆ. ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದಿದ್ದಾರೆ.

ಇದನ್ನೂ ಓದಿ: Video: ಎಂಜಲು ಉಗುಳಿ ರೊಟ್ಟಿ ಬೇಯಿಸಿದ ಯುವಕ, ವೈರಲ್ ಆಯ್ತು ದೃಶ್ಯ

ಈ ಕೃತ್ಯವನ್ನು ತೋರಿಸುವ ವೀಡಿಯೊವನ್ನು ಸ್ಥಳೀಯ ನಿವಾಸಿ ಅಜಯ್ ರೈ ಎಂಬುವವರು ಪೊಲೀಸರಿಗೆ ನೀಡಿದ್ದಾರೆ. ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಲಿಖಿತ ದೂರು ಸಲ್ಲಿಸಿದ್ದಾರೆ. ಈ ಘಟನೆಯನ್ನು ಪರಿಶೀಲಿಸುತ್ತಿದ್ದೇವೆ ಮತ್ತು ಸಾಕ್ಷಿಗಳಿಂದ ಹೇಳಿಕೆಗಳನ್ನು ಸಂಗ್ರಹಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!