AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ತೋಟದಿಂದ ಪೇರಳೆ ಕದ್ದ ಆರೋಪದಲ್ಲಿ ಯುವಕನನ್ನು ಹೊಡೆದು ಕೊಂದ ಸ್ಥಳೀಯರು

ಕೈಯಲ್ಲಿ ಹಣ್ಣನ್ನು ನೋಡಿದ  ತೋಟದ ಕಾವಲುಗಾರರು ಯುವಕ ಕುಸಿದು ಬೀಳುವವರೆಗೆ ಥಳಿಸಿದ್ದಾರೆ ಎಂದು ಸಹೋದರ ಹೇಳಿರುವುದಾಗಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ

ಉತ್ತರ ಪ್ರದೇಶ: ತೋಟದಿಂದ ಪೇರಳೆ ಕದ್ದ ಆರೋಪದಲ್ಲಿ ಯುವಕನನ್ನು ಹೊಡೆದು ಕೊಂದ ಸ್ಥಳೀಯರು
ಸಾಂದರ್ಭಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 06, 2022 | 1:46 PM

Share

ಉತ್ತರ ಪ್ರದೇಶದ (Uttar Pradesh) ಅಲಿಗಢ (Aligarh)ಜಿಲ್ಲೆಯಲ್ಲಿ ತೋಟವೊಂದರಲ್ಲಿ ಪೇರಳೆ ಕದ್ದ ಆರೋಪದ ಮೇಲೆ 20ರ ಹರೆಯದ ವ್ಯಕ್ತಿಯೊಬ್ಬನನ್ನು ಅಲ್ಲಿನ ಜನರು ಥಳಿಸಿ ಕೊಂದ ಘಟನೆ ಶನಿವಾರ ನಡೆದಿದೆ. ಪ್ರಕರಣದಲ್ಲಿ ಇದುವರೆಗೆ ಒಟ್ಟು ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಸಹೋದರನ ಪ್ರಕಾರ ಆತ(ಈಗ ಮೃತರಾಗಿರುವ ವ್ಯಕ್ತಿ) ಕಾಡಿಗೆ ಹೋಗಿದ್ದ. ಅಲ್ಲಿಂದ ಬರುವಾಗ ತೋಟವೊಂದರಲ್ಲಿ ಬಿದ್ದದ್ದ ಪೇರಳೆ ಹಣ್ಣು ಹೆಕ್ಕಿದ್ದ. ಅವನ ಕೈಯಲ್ಲಿ ಹಣ್ಣನ್ನು ನೋಡಿದ  ತೋಟದ ಕಾವಲುಗಾರರು ಯುವಕ ಕುಸಿದು ಬೀಳುವವರೆಗೆ ಥಳಿಸಿದ್ದಾರೆ ಎಂದು ಸಹೋದರ ಹೇಳಿರುವುದಾಗಿ ಸ್ಥಳೀಯ ಪತ್ರಿಕೆಗಳು ವರದಿ ಮಾಡಿವೆ. ಸಂತ್ರಸ್ತ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಅಲ್ಲಿ ಆತ ಸಾವಿಗೀಡಾದ ಎಂದು ಪೊಲೀಸರು ಹೇಳಿದ್ದಾರೆ. ಶನಿವಾರದಂದು ಗಂಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೇನಾ ಗ್ರಾಮದ ತೋಟದಲ್ಲಿ ಈ ಘಟನೆ ನಡೆದಿದ್ದು, ಸಂತ್ರಸ್ತ ದಲಿತ ಎಂದು ಮಾಧ್ಯಮಗಳು ವರದಿ ಮಾಡಿವೆ.

“ಒಬ್ಬ ವ್ಯಕ್ತಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂತ್ರಸ್ತನನ್ನು ಆಸ್ಪತ್ರೆಗೆ ಕಳುಹಿಸಿದ್ದಾರೆ. ಚಿಕಿತ್ಸೆ ವೇಳೆ ಅವರು ಮೃತಪಟ್ಟಿದ್ದಾರೆ. ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ತನಿಖೆ ನಡೆಯುತ್ತಿದೆ ಎಂದು ವೃತ್ತ ಅಧಿಕಾರಿ ಎಕೆ ಪಾಂಡೆ ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ.

Published On - 1:30 pm, Sun, 6 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ