AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಯುವಕನಿಗೆ ನಿದ್ರೆ ಮಾತ್ರೆ ಕೊಟ್ಟು ಎಚ್ಚರ ತಪ್ಪಿ ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?
ಶಸ್ತ್ರಚಿಕಿತ್ಸೆ
ನಯನಾ ರಾಜೀವ್
|

Updated on: Jun 21, 2024 | 9:41 AM

Share

ರಾತ್ರೋ ರಾತ್ರಿ ಯುವಕನೊಬ್ಬ ಹುಡುಗಿಯಾಗಿ ಬದಲಾಗಿದ್ದಾನೆ, ಆತನಿಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಕರೆದೊಯ್ದು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮುಜಾಫರ್‌ನಗರದ 20 ವರ್ಷದ ಮುಜಾಹಿದ್, ಓಂಪ್ರಕಾಶ್‌ ಎಂಬಾತ ತನಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಸಾಗಿಸಿ ಆ ಸಮಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ಹೇಳುತ್ತಾರೆ.

ಓಂ ಪ್ರಕಾಶ್ ಉತ್ತರ ಪ್ರದೇಶದ ಮುಜಾಫರ್​ನಗರ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಶಾಮೀಲಾಗಿ ಈ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಓಂ ಪ್ರಕಾಶ್ ಕಳೆದ ಎರಡು ವರ್ಷಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು 20 ವರ್ಷದ ಯುವಕ ಹೇಳಿಕೊಂಡಿದ್ದಾನೆ. ಜೂನ್ 3ರಂದು ಓಂ ಪ್ರಕಾಶ್​ ಅವರು ಮುಜಾಹಿದ್​ಗೆ ಶಸ್ತ್ರಚಿಕಿತ್ಸೆ ಮಾಡುವಂತೆ ಮನ್ಸೂರ್‌ಪುರದ ಬೆಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಮನವರಿಕೆ ಮಾಡಿದ್ದರು.

ನನಗೆ ಪ್ರಜ್ಞೆ ಬಂದಾಗ, ನಾನು ಹುಡುಗನಿಂದ ಹುಡುಗಿಯಾಗಿ ಬದಲಾಗಿದ್ದೇನೆ ಎಂದು ಮುಜಾಹಿದ್ ಹೇಳಿದ್ದಾರೆ. ನನಗೆ ಎಚ್ಚರವಾದಾಗ ಓಂ ಪ್ರಕಾಶ್​ ನನ್ನ ಬಳಿ ಬಂದು ನೀನು ಈಗ ಹುಡುಗಿಯಾಗಿ ಬದಲಾಗಿದ್ದೀಯ ನಿನ್ನನ್ನು ಲಕ್ನೋಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ಹೇಳಿದ್ದಾಗಿ ಮುಜಾಹಿದ್ ಹೇಳಿದ್ದಾರೆ.

ಮತ್ತಷ್ಟು ಓದಿ: ಅಮ್ಮ ಬೆಂಬಲವಾಗಿ ನಿಂತರು: ಕೇರಳದ ಮೊದಲ ಮಂಗಳಮುಖಿ ವೈದ್ಯೆ ಪ್ರಿಯಾ ಹೇಳಿದ ಬದುಕಿನ ಕತೆ

ಬೇಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರು ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಮುಜಾಹಿದ್ ತನ್ನ ಸ್ವಂತ ಇಚ್ಛೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಮುಜಾಹಿದ್ ತಂದೆ ನೀಡಿದ ದೂರಿನ ಆಧಾರದ ಮೇಲೆ ಜೂನ್ 16 ರಂದು ಓಂಪ್ರಕಾಶ್ ನನ್ನು ಬಂಧಿಸಲಾಗಿತ್ತು. ಈ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವೈದ್ಯಕೀಯ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ಮುಜಾಹಿದ್‌ಗೆ 2 ಕೋಟಿ ರೂ. ಪರಿಹಾರ ನೀಡಬೇಕು ಎಂದು ಪಾಲ್ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ . ಆಸ್ಪತ್ರೆಯು ಅಕ್ರಮ ಅಂಗಾಂಗ ವ್ಯಾಪಾರ ಮತ್ತು ಇತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಬಿಕೆಯು ಮುಖಂಡರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯ ಮೇಲೆ ಕೇತುಗ್ರಸ್ತ ಚಂದ್ರಗ್ರಹಣದ ಪ್ರಭಾವ ಹೇಗಿರಲಿದೆ?
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಡಿಕೆ ಶಿವಕುಮಾರ್ ಸಿಎಂ ಆಗುವ ಬಗ್ಗೆ ಮತ್ತೊಮ್ಮೆ ಭವಿಷ್ಯ ನುಡಿದ ಶಾಸಕ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ಕತಾರ್, ಬಹ್ರೇನ್, ಸೌದಿಯ ಯುಎಸ್​ ವಾಯುನೆಲೆಗಳ ಮೇಲೆ ಇರಾನ್ ದಾಳಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ರಾಗಿಣಿ ಪ್ರಜ್ವಲ್ ಡ್ಯಾನ್ಸ್​​​ಗೆ ಅವರೇ ಸರಿಸಾಟಿ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ವಿದ್ಯಾರ್ಥಿನಿಗಳ ಜತೆ ಪಾರ್ಟಿ ಮಾಡಿದ ಎಕ್ಸ್ಕ್ಲೂಸಿವ್ ದೃಶ್ಯ
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಕೇತುಗ್ರಸ್ತ ಚಂದ್ರಗ್ರಹಣ; ಕುಂಭ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; ಮಕರ ರಾಶಿಯ ಮೇಲೆ ಪ್ರಭಾವ ಹೇಗಿರಲಿದೆ?
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ದರ್ಶನ್ ವಿರುದ್ದ ಸುಳ್ಳು ದಾಖಲೆ ಸೃಷ್ಟಿಸಿದ ಆರೋಪ; ಬೃಹತ್ ಪ್ರತಿಭಟನೆ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಅಕ್ರಮ ರೆಸಾರ್ಟ್​​ ಮಾಲೀಕರಿಗೆ ಭರ್ಜರಿ ಶಾಕ್​​ ಕೊಟ್ಟ ಕೊಪ್ಪಳ ಜಿಲ್ಲಾಡಳಿತ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ
ಚಂದ್ರ ಗ್ರಹಣ ಹಿನ್ನೆಲೆ ಧರ್ಮಸ್ಥಳದಲ್ಲಿ ದೇವರ ದರ್ಶನ ಸಮಯ ಬದಲಾವಣೆ