AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?

ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ಘಟನೆ ನಡೆದಿದೆ, ಯುವಕನಿಗೆ ನಿದ್ರೆ ಮಾತ್ರೆ ಕೊಟ್ಟು ಎಚ್ಚರ ತಪ್ಪಿ ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದು ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ರಾತ್ರೋ ರಾತ್ರಿ ಹುಡುಗನಿಂದ ಹುಡುಗಿಯಾಗಿ ಬದಲಾದ ಯುವಕ, ನಿದ್ರೆ ಮಾತ್ರೆ ಕೊಟ್ಟು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ಮಾಡ್ಸಿದ್ದು ಯಾರು?
ಶಸ್ತ್ರಚಿಕಿತ್ಸೆ
ನಯನಾ ರಾಜೀವ್
|

Updated on: Jun 21, 2024 | 9:41 AM

Share

ರಾತ್ರೋ ರಾತ್ರಿ ಯುವಕನೊಬ್ಬ ಹುಡುಗಿಯಾಗಿ ಬದಲಾಗಿದ್ದಾನೆ, ಆತನಿಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಕರೆದೊಯ್ದು ಲಿಂಗ ಬದಲಾವಣೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ತನ್ನ ಒಪ್ಪಿಗೆಯಿಲ್ಲದೆ ತನಗೆ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ಆರೋಪಿಸಿದ್ದಾರೆ. ಮುಜಾಫರ್‌ನಗರದ 20 ವರ್ಷದ ಮುಜಾಹಿದ್, ಓಂಪ್ರಕಾಶ್‌ ಎಂಬಾತ ತನಗೆ ನಿದ್ರೆ ಮಾತ್ರೆ ಕೊಟ್ಟು ಆಸ್ಪತ್ರೆಗೆ ಸಾಗಿಸಿ ಆ ಸಮಯದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು ಎಂದು ಹೇಳುತ್ತಾರೆ.

ಓಂ ಪ್ರಕಾಶ್ ಉತ್ತರ ಪ್ರದೇಶದ ಮುಜಾಫರ್​ನಗರ ಜಿಲ್ಲೆಯ ಸ್ಥಳೀಯ ವೈದ್ಯಕೀಯ ಕಾಲೇಜಿನ ವೈದ್ಯರೊಂದಿಗೆ ಶಾಮೀಲಾಗಿ ಈ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಓಂ ಪ್ರಕಾಶ್ ಕಳೆದ ಎರಡು ವರ್ಷಗಳಿಂದ ತನಗೆ ಕಿರುಕುಳ ನೀಡುತ್ತಿದ್ದಾನೆ ಎಂದು 20 ವರ್ಷದ ಯುವಕ ಹೇಳಿಕೊಂಡಿದ್ದಾನೆ. ಜೂನ್ 3ರಂದು ಓಂ ಪ್ರಕಾಶ್​ ಅವರು ಮುಜಾಹಿದ್​ಗೆ ಶಸ್ತ್ರಚಿಕಿತ್ಸೆ ಮಾಡುವಂತೆ ಮನ್ಸೂರ್‌ಪುರದ ಬೆಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರಿಗೆ ಮನವರಿಕೆ ಮಾಡಿದ್ದರು.

ನನಗೆ ಪ್ರಜ್ಞೆ ಬಂದಾಗ, ನಾನು ಹುಡುಗನಿಂದ ಹುಡುಗಿಯಾಗಿ ಬದಲಾಗಿದ್ದೇನೆ ಎಂದು ಮುಜಾಹಿದ್ ಹೇಳಿದ್ದಾರೆ. ನನಗೆ ಎಚ್ಚರವಾದಾಗ ಓಂ ಪ್ರಕಾಶ್​ ನನ್ನ ಬಳಿ ಬಂದು ನೀನು ಈಗ ಹುಡುಗಿಯಾಗಿ ಬದಲಾಗಿದ್ದೀಯ ನಿನ್ನನ್ನು ಲಕ್ನೋಗೆ ಕರೆದುಕೊಂಡು ಹೋಗಿ ಮದುವೆಯಾಗುತ್ತೇನೆ ಎಂದು ಹೇಳಿದ್ದಾಗಿ ಮುಜಾಹಿದ್ ಹೇಳಿದ್ದಾರೆ.

ಮತ್ತಷ್ಟು ಓದಿ: ಅಮ್ಮ ಬೆಂಬಲವಾಗಿ ನಿಂತರು: ಕೇರಳದ ಮೊದಲ ಮಂಗಳಮುಖಿ ವೈದ್ಯೆ ಪ್ರಿಯಾ ಹೇಳಿದ ಬದುಕಿನ ಕತೆ

ಬೇಗ್ರಾಜ್‌ಪುರ ವೈದ್ಯಕೀಯ ಕಾಲೇಜಿನ ವೈದ್ಯರು ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಮುಜಾಹಿದ್ ತನ್ನ ಸ್ವಂತ ಇಚ್ಛೆಯಿಂದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ. ಮುಜಾಹಿದ್ ತಂದೆ ನೀಡಿದ ದೂರಿನ ಆಧಾರದ ಮೇಲೆ ಜೂನ್ 16 ರಂದು ಓಂಪ್ರಕಾಶ್ ನನ್ನು ಬಂಧಿಸಲಾಗಿತ್ತು. ಈ ಪ್ರಕರಣ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವೈದ್ಯಕೀಯ ಕಾಲೇಜಿನ ಹೊರಗೆ ಪ್ರತಿಭಟನೆ ನಡೆಸಿದೆ.

ಮುಜಾಹಿದ್‌ಗೆ 2 ಕೋಟಿ ರೂ. ಪರಿಹಾರ ನೀಡಬೇಕು ಎಂದು ಪಾಲ್ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ . ಆಸ್ಪತ್ರೆಯು ಅಕ್ರಮ ಅಂಗಾಂಗ ವ್ಯಾಪಾರ ಮತ್ತು ಇತರ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಬಿಕೆಯು ಮುಖಂಡರು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ