AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಕ್ಕೆ ಸೊಸೆ ಮನೆಯನ್ನೇ ನೆಲಸಮ ಮಾಡಿದ ಮಾವ

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಕ್ಕೆ ಸೊಸೆಯ ಮನೆಯನ್ನೇ ಮಾವ ನೆಲಸಮ ಮಾಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್​ನಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಮಾನವ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ದೂರು ಹಿಂತೆಗೆದುಕೊಳ್ಳುವಂತೆ ಕೇಳಿದ್ದರೂ ಆಕೆ ಪ್ರತಿಕ್ರಿಯಿಸದ ಕಾರಣ ಕೋಪಗೊಂಡ ಮಾವ ಬುಲ್ಡೋಜರ್ ತರಿಸಿ ಆಕೆ ಇದ್ದ ಮನೆಯನ್ನು ಕೆಡವಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಕ್ಕೆ ಸೊಸೆ ಮನೆಯನ್ನೇ ನೆಲಸಮ ಮಾಡಿದ ಮಾವ
ಮನೆImage Credit source: Free Press Journal
ನಯನಾ ರಾಜೀವ್
|

Updated on: Feb 17, 2025 | 10:23 AM

Share

ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಕ್ಕೆ ಸೊಸೆಯ ಮನೆಯನ್ನೇ ಮಾವ ನೆಲಸಮ ಮಾಡಿರುವ ಘಟನೆ ಉತ್ತರ ಪ್ರದೇಶದ ಹಾಪುರ್​ನಲ್ಲಿ ನಡೆದಿದೆ. ಮಹಿಳೆಯೊಬ್ಬರು ತನ್ನ ಮಾನವ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ದಾಖಲಿಸಿದ್ದರು. ದೂರು ಹಿಂತೆಗೆದುಕೊಳ್ಳುವಂತೆ ಕೇಳಿದ್ದರೂ ಆಕೆ ಪ್ರತಿಕ್ರಿಯಿಸದ ಕಾರಣ ಕೋಪಗೊಂಡ ಮಾವ ಬುಲ್ಡೋಜರ್ ತರಿಸಿ ಆಕೆ ಇದ್ದ ಮನೆಯನ್ನು ಕೆಡವಿದ್ದಾರೆ.

ಲೈವ್ ಹಿಂದೂಸ್ತಾನ್ ವರದಿ ಪ್ರಕಾರ, ಈ ಘಟನೆ ಹಾಪುರ್ ಜಿಲ್ಲೆಯ ಗರ್​ನಗರದ ಬಳಿ ನಡೆದಿದೆ. ಮಹಿಳೆ ದೂರು ದಾಖಲಿಸಿದ್ದು, ತನ್ನ ಪತಿ ಮದ್ಯವ್ಯಸನಿಯಾಗಿದ್ದ, ಜೂಜಾಡುತ್ತಿದ್ದ, ಕುಟುಂಬವನ್ನು ಪೋಷಿಸಲು ಕೂಲಿ ಕೆಲಸ ಮಾಡಿಕೊಮಡಿದ್ದೇನೆ. ಮಾವನಿಗೆ ಕೂಡ ಮದ್ಯದ ಚಟ ಇದೆ ಎಂದು ಮಹಿಳೆ ಹೇಳಿದ್ದಾಳೆ.

ಕಳೆದ ಗುರುವಾರ ಬೆಳಗ್ಗೆ ಮನೆಯಲ್ಲಿ ಒಬ್ಬಳೇ ಇರುವಾಗ ಆಕೆಯ ಮಾವ ಮನೆಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದ, ಮಹಿಳೆ ಆತನನ್ನು ತಳ್ಳಿ ತಪ್ಪಿಸಿಕೊಂಡು ಸುರಕ್ಷತೆಗಾಗಿ ತನ್ನ ಅತ್ತಿಗೆಯ ಮನೆಗೆ ಓಡಿ ಹೋಗಿದ್ದಳು. ಆಕೆ ತಪ್ಪಿಸಿಕೊಂಡಿದ್ದರಿಂದ ಕೋಪಗೊಂಡ ಮಾವ ಬುಲ್ಡೋಜರ್ ವ್ಯವಸ್ಥೆ ಮಾಡಿ ಆಕೆಯ ಮನೆಯನ್ನು ಸಂಪೂರ್ಣವಾಗಿ ಕೆಡವಿದರು ಎಂದು ವರದಿಯಾಗಿದೆ.

ಮತ್ತಷ್ಟು ಓದಿ:ತಮಿಳುನಾಡು: ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯನ್ನು ಆಟೋದಲ್ಲಿ ಕಿಡ್ನ್ಯಾಪ್​ ಮಾಡಿ ಲೈಂಗಿಕ ದೌರ್ಜನ್ಯ

ಪರಿಣಾಮವಾಗಿ, ಮಹಿಳೆ ಮತ್ತು ಆಕೆಯ ಕುಟುಂಬ ನಿರಾಶ್ರಿತರಾಗಿದ್ದಾರೆ. ಮಹಿಳೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಇಡೀ ಘಟನೆಯ ವಿವರವಾದ ವರದಿಯನ್ನು ದಾಖಲಿಸಿದ್ದಾರೆ. ಇನ್ಸ್‌ಪೆಕ್ಟರ್ ನೀರಜ್ ಕುಮಾರ್ ಅವರು ತಮ್ಮ ದೂರಿನ ಆಧಾರದ ಮೇಲೆ ಆರೋಪಿ ಮಾವನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ದೃಢಪಡಿಸಿದರು.

ಅಂದೇ ಅವರನ್ನು ನ್ಯಾಯಾಂಗ ಬಂಧನಕ್ಕೆ ತೆಗೆದುಕೊಂಡು ಜೈಲಿಗೆ ಕಳುಹಿಸಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದು, ತನಿಖೆ ಪೂರ್ಣಗೊಂಡ ನಂತರ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!